AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜೋಶಿ ಕಿಡಿ

ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜಗಾರ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ (VB G RAM G) ಮಸೂದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ದೇಶದಾದ್ಯಂತ ಪ್ರತಿಭಟನೆ ನಡೆಸಿದೆ. ಇದಕ್ಕೆ ಬಿಜೆಪಿ ನಾಯಕರು ಸಹ ವಿಬಿಜಿ ರಾಮ್ ಜಿ ಎಂದು ಹೆಸರು ಬದಲಾವಣೆ ಮಾಡಿದ್ದಕ್ಕೆ ಸರ್ಮಥಿಸಿಕೊಳ್ಳುತ್ತಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜೋಶಿ ಕಿಡಿ
Pralhad Joshi
ರಮೇಶ್ ಬಿ. ಜವಳಗೇರಾ
|

Updated on:Jan 04, 2026 | 5:55 PM

Share

ಹುಬ್ಬಳ್ಳಿ, (ಜನವರಿ 04) : ವಿಬಿಜಿ ರಾಮ್ ಜಿ (ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಾ ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ. ನರೇಗಾ ಯೋಜನೆಯನ್ನು ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಎಂದು ಪರಿವರ್ತನೆಗೊಳಿಸಲಾಗಿದ್ದು, ಇದರಲ್ಲಿಯೂ ಪ್ರತಿಪಕ್ಷದವರು ರಾಜಕೀಯ ಮಾಡುತ್ತಿರುವುದು ಅವರ ಮೌಢ್ಯವನ್ನು ತೋರಿಸುತ್ತದೆ. ಯೋಜನೆ ಪಾರದರ್ಶಕವಾಗಿ ಮತ್ತು ಸಮರ್ಥವಾಗಿ ಜಾರಿಯಾಗುವುದನ್ನು ಸಹಿಸದ ಪ್ರತಿಪಕ್ಷಗಳು ಈ ಯೋಜನೆಯ ಬಗ್ಗೆ ಸುಳ್ಳು ವದಂತಿಗಳನ್ನು ಹರಡುತ್ತಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (pralhad joshi) ವಾಗ್ದಾಳಿ ನಡೆಸಿದ್ದಾರೆ.

ನರೇಗಾ ಯೋಜನೆಯಲ್ಲಿ ಪ್ರತಿವರ್ಷ ನೂರು ದಿನಗಳ ಉದ್ಯೋಗ ಖಾತರಿಯಿತ್ತು . ಈಗ 125 ದಿನಗಳಿಗೆ ಹೆಚ್ಚಳ ಮಾಡಲಾಗಿದೆ. ಇದರಿಂದ ಗ್ರಾಮೀಣ ಜನರಿಗೆ ಉದ್ಯೋಗವಕಾಶದ ಭರವಸೆಯೊಂದಿಗೆ ಆದಾಯದ ಭದ್ರತೆಯು ಹೆಚ್ಚಾಗಲಿದೆ (ಪ್ರತಿದಿನ ಕೂಲಿ 370 ರೂ ಆಗಿದೆ). ಮುಂದೆಯೂ ಆಯಾ ಗ್ರಾಮ ಪಂಚಾಯತಗಳೇ ಯೋಜನೆಯ ಕೇಂದ್ರವಾಗಿರಲಿದೆ. ಆದರೆ ಇದನ್ನು ಕೇಂದ್ರ ಸರ್ಕಾರ ನಿರ್ಧಾರ ಮಾಡುತ್ತದೆ ಎಂಬ ಭೀತಿಯನ್ನು ಕಾಂಗ್ರೆಸ್ ಮೂಡಿಸುತ್ತಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ರಾಹುಲ್ ಗಾಂಧಿ, ಸಿದ್ದರಾಮಯ್ಯ ಡ್ರಾಮಾ ಬಿಟ್ಟು ವಾಸ್ತವತೆ ಒಪ್ಪಿಕೊಳ್ಳಲಿ; ಪ್ರಲ್ಹಾದ್ ಜೋಶಿ ತಿರುಗೇಟು

ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲ ಮಾಡಿಕೊಡಲು ವರ್ಷದಲ್ಲಿ 60 ದಿನಗಳ ಬಿಡುವು ನೀಡಲಾಗಿದೆ. ಇಂತಹ ರೈತ ಸ್ನೇಹಿ ನಿಯಮಕ್ಕೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕೃಷಿ ವಿರೋಧಿ ನೀತಿ ಅನುಸರಿಸುತ್ತಿದೆ. ಹಿಂದೆ ಕೂಲಿಕಾರರ ಹೆಸರು ಹೇಳಿ ನರೇಗಾ ಯೋಜನೆ ದುರ್ಬಳಕೆ ಮಾಡಲಾಗುತ್ತಿತ್ತು. ಅದಕ್ಕಾಗಿ ಬಯೋಮೆಟ್ರಿಕ್ ತಂತ್ರಜ್ಞಾನ ಬಳಕೆ ಕಡ್ಡಾಯ ಮಾಡಲಾಗಿದೆ. ರಾಜ್ಯ ಸರ್ಕಾರಗಳು ಅನಗತ್ಯ ವೆಚ್ಚ ಕಡಿಮೆ ಮಾಡಲು ಭ್ರಷ್ಟಾಚಾರಕ್ಕೆ ಕಡಿವಾಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ 60:40 ಅನುಪಾತದಲ್ಲಿ ನಿಗದಿ ಮಾಡಲಾಗಿದೆ ಎಂದು ಹೇಳಿದರು

ಸರ್ಕಾರದ ಆಡಳಿತಾತ್ಮಕ ಹಿತದೃಷ್ಟಿಯಿಂದ ಮತ್ತು ಕಾಲಾನುಕಾಲಕ್ಕೆ ಯೋಜನೆಗಳ್ಳಲ್ಲಿ ಪಾರದರ್ಶಕತೆ ಮತ್ತು ಪರಿಣಾಮ ತರುವ ನಿಟ್ಟಿನಲ್ಲಿ ಕೆಲ ಯೋಜನೆಗಳಲ್ಲಿ ಅಗತ್ಯ ಪರಿಷ್ಕರಣೆ ತರುವುದು ಅವಶ್ಯವಾಗಿರುತ್ತದೆ. ಈ ಬದಲಾವಣೆಯ ಮುಖ್ಯ ಉದ್ದೇಶ ಜನರ ಜೀವನೋಪಾಯವನ್ನು ಬಲಪಡಿಸುವ ಕಲ್ಯಾಣ ಮತ್ತು ಮೂಲ ಸೌಕರ್ಯ ಅಭಿವೃದ್ಧಿಇವೆರಡನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕಿದೆ. ಏಕೆಂದರೆ ಇವೆರೆಡೂ ಒಂದಕ್ಕೊಂದು ಪೂರಕ ಮತ್ತು ಅನಿವಾರ್ಯ ಎಂದರು.

MGNAREGA ಯೋಜನೆಯು ಬೇಡಿಕೆ ಆಧಾರಿತ (Demand Driven Scheme) ಯೋಜನೆಯಾಗಿತ್ತು. ಆದರೆ ಇದು Off the record Target based scheme ಆಗಿ ಪರಿವರ್ತಿತವಾಗಿತ್ತು. ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಇದ್ದ ಅತಿ ದೊಡ್ಡ ಸಮಸ್ಯೆ ಎಂದರೆ ಸೂಕ್ತ ಸಮಯದಲ್ಲಿ ಕೂಲಿ ಮತ್ತು ಸಾಮಗ್ರಿ ವೆಚ್ಚದ ಪಾವತಿ (Wage & material payment). ಹೊಸ ಪರಿಷ್ಕೃತ ಯೋಜನೆಯಡಿ Centralized payment system ಇರುವುದರಿಂದ ಈ ಮೊದಲು ಇದ್ದ ಎಲ್ಲಾ ಗೊಂದಲಗಳಿಗೆ ಫುಲ್ ಸ್ಟಾಪ್ ಬೀಳಲಿದೆ ಎಂದೂ ಸಚಿವ ಜೋಶಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Sun, 4 January 26

ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್