AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ನಿರ್ಬಂಧ: ಕಾರಣ..!

ವಿದೇಶ ಪ್ರವಾಸದಲ್ಲಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಪ್ಯಾರಿಸ್ (Paris) ಪ್ರವಾಸ ಮುಗಿಸಿ ಅಮೆರಿಕಗೆ (USA) ತೆರಳಬೇಕಿದ್ದ ಸಚಿವ ಪ್ರಿಯಾಂಕ್ ಖರ್ಗೆಗೆ ಕ್ಲಿಯರೆನ್ಸ್‌ ಸಿಕ್ಕಿಲ್ಲ. ಇದರಿಂದ ಅಮೆರಿಕದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿದ್ದ ಪ್ರಿಯಾಂಕ್ ಖರ್ಗೆಗೆ ನಿರಾಸೆಯಾಗಿದೆ.

ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ನಿರ್ಬಂಧ: ಕಾರಣ..!
Priyank Kharge
ಪ್ರಸನ್ನ ಗಾಂವ್ಕರ್​
| Edited By: |

Updated on: Jun 17, 2025 | 10:22 PM

Share

ಬೆಂಗಳೂರು, (ಜೂನ್ 17): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆಗೆ (Priyank Kharge) ಕೇಂದ್ರ ಸರ್ಕಾರ ಅಮೆರಿಕ ಪ್ರವಾಸಕ್ಕೆ ನಿರ್ಬಂಧಿಸಿದೆ. ಪ್ರಿಯಾಂಕ್ ಖರ್ಗೆ ಅವರು ಪ್ಯಾರಿಸ್ (Paris) ಪ್ರವಾಸ ಮುಗಿಸಿ ಇನ್ನೇನು ಅಮೆರಿಕಗೆ (America)  ತೆರಳಿ ಬಳಿಕ ಬಯೋ ಇಂಟರ್ ನ್ಯಾಷನಲ್ ಕನ್ವಷನ್ ಕಾರ್ಯಕ್ರಮದಲ್ಲಿ ಬಾಗವಹಿಸಬೇಕಿತ್ತು. ಆದ್ರೆ, ಕೇಂದ್ರ ಸರ್ಕಾರ ಖರ್ಗೆ ಅವರ ಯುಎಸ್ ಪ್ರವಾಸಕ್ಕೆ ಅನುಮತಿ ನಿರಾಕರಣೆ ಮಾಡಿದೆ. ಇದರಿಂದ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿದ್ದ ಪ್ರಿಯಾಂಕ್ ಖರ್ಗೆಗೆ ನಿರಾಸೆಯಾಗಿದ್ದು, ಕ್ಲಿಯರೆನ್ಸ್ ನೀಡದ ಬಗ್ಗೆ ವಿವರಣೆ ನೀಡುವಂತೆ ಪ್ರಿಯಾಂಕ್ ಖರ್ಗೆ​ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಅಚ್ಚರಿ ಅಂದ್ರೆ ಸಚಿವರ ಜೊತೆ ತೆರಳಿದ್ದ ಐಎಎಸ್ ಅಧಿಕಾರಿಗಳಿಗೆ ಯುಎಸ್​ಗೆ ತೆರಳಲು ಅನುಮತಿ ಸಿಕ್ಕಿದೆ.

ಐಟಿ ಬಿಟಿಗೆ ಸಂಬಂಧಪಟ್ಟಂತೆ ಪ್ರಿಯಾಂಕ್ ಖರ್ಗೆ ಬೋಸ್ಟನ್, ಸ್ಯಾನ್‌ಫ್ರಾನ್ಸಿಸ್ಕೋ ನಗರಗಳಲ್ಲಿ ಆಯೋಜನೆಗೊಂಡಿದ್ದ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಬೇಕಿತ್ತು. ಪ್ರಿಯಾಂಕ್‌ ಜೊತೆ ತೆರಳಿದ್ದ ಐಎಎಸ್ ಅಧಿಕಾರಿಗೆ ಅಮೆರಿಕಗೆ ತೆರಳಲು ಕ್ಲಿಯರೆನ್ಸ್ ಸಿಕ್ಕಿದೆ. ಪ್ಯಾರಿಸ್‌ ಏರ್‌ ಶೋನಲ್ಲಿ ಭಾಗಿಯಾಗಿದ್ದ ಪ್ರಿಯಾಂಕ್ ಖರ್ಗೆ ಗುರುವಾರ ಬೆಂಗಳೂರಿಗೆ ಮರಳಲಿದ್ದಾರೆ.

ಇದನ್ನೂ ಓದಿ: ಸಾಲು ಸಾಲು ಏರ್ ಇಂಡಿಯಾ ವಿಮಾನಗಳ ಸೇವೆ ರದ್ದು, ಮುಖ್ಯ ಇಂಜಿನೀಯರ್​ಗೆ ಡಿಜಿಸಿಎ ಸಮನ್ಸ್

ಸದ್ಯ ಪ್ಯಾರಿಸ್ ನಲ್ಲಿ ಇರುವ ಪ್ರಿಯಾಂಕ್ ಖರ್ಗೆ, ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಬಳಿಕ ಅಮೆರಿಕದಲ್ಲಿ ನಡೆಯುತ್ತಿರುವ ಬಯೋ ಇಂಟರ್ ನ್ಯಾಷನಲ್ ಕನ್ವಷನ್ ಕಾರ್ಯಕ್ರಮಕ್ಕೆ ಹೋಗಬೇಕಿತ್ತು. ಆದ್ರೆ, ಅಮೆರಿಕಗೆ ತೆರಳಲು ಕ್ಲಿಯರೆನ್ಸ್ ಸಿಗದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ವಿವರಣೆ ನೀಡುವಂತೆ ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಇನ್ನು ಕೇಂದ್ರ ಸರ್ಕಾರ ಏಕೆ ಅನುಮತಿ ಕೊಟ್ಟಿಲ್ಲ ಎನ್ನುವ ಬಗ್ಗೆ ಕಾರಣ ತಿಳಿದುಬಂದಿಲ್ಲ.  ಸಚಿವರ ಜೊತೆ ತೆರಳಿದ್ದ ಐಎಎಸ್ ಅಧಿಕಾರಿಗಳಿಗೆ ಯುಎಸ್​ಗೆ ತೆರಳಲು ಅನುಮತಿ ಸಿಕ್ಕಿದೆ. ಆದ್ರೆ, ಪ್ರಿಯಾಂಕ್ ಖರ್ಗೆ ಅವರಿಗೆ ಅನುಮತಿ ನಿರಾಕರಣೆ ಮಾಡಿದ್ದು ಅಚ್ಚರಿಗೆ ಕಾರಣವಾಗಿದೆ. ಇನ್ನು ಈ ಬಗ್ಗೆ ಪ್ರಿಯಾಂಕ್ ಖರ್ಗೆ ಅವರು ವಾಪಸ್ ಕರ್ನಾಟಕಕ್ಕೆ ಬಂದ ಬಳಿಕ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ.

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು