AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ಕರ್ನಾಟಕ ಪ್ರವಾಸ: ಜನವರಿ 16, 17ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಕೇಂದ್ರ ಗೃಹ ಸಚಿವ

ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಜನವರಿ 16, 17ರಂದು ಕರ್ನಾಟಕ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಹಲವು ಸಾರ್ವಜನಿಕ ಕಾರ್ಯಗಳಲ್ಲಿ ಭಾಗವಹಿಸಲಿದ್ದಾರೆ.

ಅಮಿತ್ ಶಾ ಕರ್ನಾಟಕ ಪ್ರವಾಸ: ಜನವರಿ 16, 17ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಕೇಂದ್ರ ಗೃಹ ಸಚಿವ
ಅಮಿತ್ ಶಾ
TV9 Web
| Edited By: |

Updated on:Apr 06, 2022 | 8:55 PM

Share

ಬೆಂಗಳೂರು: ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಜನವರಿ 16 ಮತ್ತು 17ರಂದು ಕರ್ನಾಟಕ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯದ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಹಲವು ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ಕಾರ್ಯಗಳನ್ನೂ ಅಮಿತ್ ಶಾ ನೆರವೇರಿಸಲಿದ್ದಾರೆ. ಬೆಂಗಳೂರು, ಬೆಳಗಾವಿ, ಬಾಗಲಕೋಟೆ ಹಾಗೂ ಭದ್ರಾವತಿಗೆ ಭೇಟಿನೀಡಲಿದ್ದಾರೆ.

ಜನವರಿ 16, ಶನಿವಾರದಂದು ರಾಜ್ಯಕ್ಕೆ ಭೇಟಿ ನೀಡಲಿರುವ ಅಮಿತ್ ಶಾ, ದೆಹಲಿಯಿಂದ ಬೆಂಗಳೂರಿಗೆ ಬಂದು ಬಳಿಕ ಭದ್ರಾವತಿಗೆ ತೆರಳಲಿದ್ದಾರೆ. ಭದ್ರಾವತಿಯಲ್ಲಿ ಸರ್ಕಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನದ ಬಳಿಕ ಭದ್ರಾವತಿಯಿಂದ ಹೊರಟು ಬೆಂಗಳೂರು, ವಿಧಾನಸೌಧಕ್ಕೆ ಆಗಮಿಸಲಿದ್ದಾರೆ. ವಿಧಾನಸೌಧದಲ್ಲಿ ತುರ್ತು ಸ್ಪಂದನ ವಾಹನಗಳಿಗೆ (ERSS) ಚಾಲನೆ ನೀಡಲಿದ್ದಾರೆ. ನಂತರ, ಪೊಲೀಸ್ ಗೃಹ-2020 ಯೋಜನೆಯಡಿ ನಿರ್ಮಾಣಗೊಂಡಿರುವ ಪೊಲೀಸ್ ಕ್ವಾರ್ಟರ್ಸ್​ ಹಾಗೂ ವಿಜಯಪುರ IRBಯನ್ನು ವರ್ಚುಯಲ್ ಆಗಿ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ, ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂಡಿಗೆ ಸಭೆ ನಡೆಸಲಿದ್ದಾರೆ.

ಭೇಟಿಯ ಎರಡನೇ ದಿನ, ಜನವರಿ 17, ಭಾನುವಾರದಂದು ಬೆಂಗಳೂರಿನಿಂದ ಬೆಳಗಾವಿಗೆ ತೆರಳಲಿದ್ದಾರೆ. ಬೆಳಗಾವಿಯಿಂದ ಬಾಗಲಕೋಟೆಗೆ ಬಂದು, ಅಲ್ಲಿ M/s MRN Ltd. ಸಂಸ್ಥೆಯ ಇತನಾಲ್ ಯೋಜನೆಯನ್ನು ಅರ್ಪಿಸಲಿದ್ದಾರೆ. ಬಳಿಕ, ಬೆಳಗಾವಿಯ KLE ಆಸ್ಪತ್ರೆಗೆ ಶಾ ಭೇಟಿ ನೀಡಲಿದ್ದಾರೆ. ನಂತರ ಬೆಳಗಾವಿಯ ಜೆಎನ್​ಎಮ್​ಸಿ ಮೈದಾನಕ್ಕೆ ತೆರಳಿ, ಜನ ಪ್ರತಿನಿಧಿಗಳೊಂದಿಗೆ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಆನಂತರ ಕೊರೊನಾದಿಂದ ಮೃತರಾದ, ಮಾಜಿ ಲೋಕಸಭಾ ಸದಸ್ಯ ದಿವಂಗತ ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿನೀಡಲಿದ್ದಾರೆ. ಬೆಳಗಾವಿಯ ಸಂಕಮ್ ಹೊಟೇಲ್​ನಲ್ಲಿ ಜಿಲ್ಲೆಯ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ಬೆಳಗಾವಿಯಿಂದ ನೇರವಾಗಿ ದೆಹಲಿಗೆ ಮರಳಲಿದ್ದಾರೆ.

Published On - 10:12 pm, Thu, 14 January 21

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್