AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಿಡಿಯೋ ಬಾಂಬ್!

ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ತಮ್ಮ ವಿರುದ್ಧದ ಆರೋಪಗಳಿಗೆ ದಾಖಲೆ ಸಮೇತ ಕೌಂಟರ್ ಕೊಟ್ಟರು. ಹಗರಣ ಮಾಡಿ ರಾಜೀನಾಮೆ ಕೊಡದೇ, ನೀವು ನನ್ನ ರಾಜೀನಾಮೆ ಕೇಳುತ್ತೀರಾ ಎಂದು ದಳಪತಿಗಳು ರೋಷಾವೇಶದಿಂದ ಪ್ರಶ್ನಿಸಿದರು. ರಾಜ್ಯಪಾಲರ ವಿಚಾರದಲ್ಲಿ ಸಿದ್ದರಾಮಯ್ಯ ನಡೆಯನ್ನು ಖಂಡಿಸಿ ಕುಮಾರಸ್ವಾಮಿ ವಿಡಿಯೋ ಬಾಂಬ್ ಹಾಕಿದ್ದಾರೆ! ಏನದು? ಇಲ್ಲಿದೆ ವಿವರ.

ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಿಡಿಯೋ ಬಾಂಬ್!
ಸಿದ್ದರಾಮಯ್ಯ, ಕುಮಾರಸ್ವಾಮಿ
Follow us
Anil Kalkere
| Updated By: Ganapathi Sharma

Updated on: Sep 28, 2024 | 2:22 PM

ಬೆಂಗಳೂರು, ಸೆಪ್ಟೆಂಬರ್ 28: ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ, ಕೇಂದ್ರದಿಂದ ರಾಜಭವನ ದುರ್ಬಳಕೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿಡಿಯೋ ಬಾಂಬ್ ಹಾಕಿದ್ದಾರೆ. 2011ರಲ್ಲಿ ವಿರೋಧ ಪಕ್ಷದ ನಾಯಕನಾಗಿದ್ದಾಗ ಸಿದ್ದರಾಮಯ್ಯ, ಗವರ್ನರ್ ಬಗ್ಗೆ ಯಾವ ರೀತಿ ಮಾತನಾಡಿದ್ದರು ಎಂದು ಸುದ್ದಿಗೋಷ್ಠಿಯಲ್ಲಿ ವಿಡಿಯೋ ಬಿಡುಗಡೆ ಮಾಡುವ ಮೂಲಕ ಕೌಂಟರ್ ಕೊಟ್ಟಿದ್ದಾರೆ.

ಲೋಕಾಯುಕ್ತ ಎಸ್​ಐಟಿ ಐಜಿಪಿ ಚಂದ್ರಶೇಖರ್ ವಿರುದ್ಧ ವಾಗ್ದಾಳಿ

ಲೋಕಾಯುಕ್ತ ಎಸ್​ಐಟಿ ಚಂದ್ರಶೇಖರ್ ವಿರುದ್ಧವೂ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಚಂದ್ರಶೇಖರ ಎಷ್ಟು ಉದ್ಧಟ ಇರಬಹುದು? ರಾಜ್ಯಪಾಲರ ಕಚೇರಿ ಪರಿಶೀಲನೆ ಮಾಡುತ್ತೇವೆ ಎಂದರೆ ಏನು? ಇದಕ್ಕೆ ಸಿಎಂ ಆದೇಶ ಕೊಟ್ಟರೋ, ಸಚಿವರು ಕೊಟ್ಟರೋ ಎಂದು ಪ್ರಶ್ನಿಸಿದರು. ಈ ಚಂದ್ರಶೇಖರ್ ಹಿನ್ನೆಲೆ ಗೊತ್ತಾ? ಈ ವ್ಯಕ್ತಿಯ ಹಿನ್ನೆಲೆ ಹುಡುಕಿ ಹೊರಟೆ. ಈ ವ್ಯಕ್ತಿ ಹಿಮಾಚಲ ಪ್ರದೇಶದ ಕೇಡರ್​​ನಲ್ಲಿ ಇರಬೇಕಾದವರು. ಯುಪಿಎಸ್​ಸಿಯಲ್ಲಿ ಸೆಲೆಕ್ಟ್ ಆಗಿ ಹಿಮಾಚಲದಲ್ಲಿ ಕೆಲಸ ಮಾಡಬೇಕಾದವನು. ಕೆಲವು ಸೂಕ್ಷ ವಿಚಾರಗಳನ್ನ ಹೇಳಲು ಆಗುವುದಿಲ್ಲ. ನಾನು ಹಿಟ್ ಅಂಡ್ ರನ್ ಮಾಡುವುದಿಲ್ಲ. 1998 ರಲ್ಲಿ ಚಂದ್ರಶೇಖರ ಆಯ್ಕೆ ಆಗಿರೋದು. 2008ರಲ್ಲಿ ಇಲ್ಲಿಗೆ ಬಂದರು. ಮನವಿ ಮೇರೆಗೆ ಬೇರೆ ರಾಜ್ಯಗಳನ್ನು ಕೇಳುತ್ತಾರೆ. ಹಿಮಾಚಲ ವಾತಾವರಣ ಹೊಂದಲ್ಲ ಅಂತ ಸುಳ್ಳು‌ ದಾಖಲೆ ಸೃಷ್ಟಿ ಮಾಡಿ ಇಲ್ಲೇ ಮುಂದುವರೆದಿದ್ದಾರೆ. ದೊಡ್ಡ ಸೂಪರ್ ಕಾಪು ಇರಬೇಕು ಅಂತ ಈ‌ ಚಂದ್ರಶೇಖರ ಹುಡಿಕೊಂಡು ಹೋದೆ, ಕಾನೂನುಬಾಹಿರವಾಗಿ ಇಲ್ಲೇ ಮುಂದುವರೆದಿದ್ದಾನೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಹೆಚ್​ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕೆಂಡ

ರಾಜ್ಯಪಾಲರ ವಿಚಾರದಲ್ಲಿ ಸಿದ್ದರಾಮಯ್ಯ ಉಪದೇಶ ಮಾಡಿದ್ದಾರೆ, ಉತ್ತರ ಕೊಡಲಿ ಎಂದು ವಿಡಿಯೋ ಸಮೇತ ಹೆಚ್​ಡಿಕೆ ಸವಾಲ್​ ಹಾಕಿದರು. ಇದಕ್ಕೆ ಕೌಂಟರ್ ಕೊಟ್ಟ ಸಿದ್ದರಾಮಯ್ಯ, ಅವರು ಹೇಳಿದ್ದಕ್ಕೆ ಉತ್ತರ ಕೊಡಬೇಕು ಎಂದು ಎಲ್ಲಿದೆ ಅಂತಾ ಗರಂ ಆದರು.

ಭಂಡತನ ಪ್ರದರ್ಶಿಸಲ್ಲ: ಹೆಚ್​ಡಿಕೆ

ಡಿನೋಟಿಫಿಕೇಶನ್​ನಲ್ಲಿ ರಾಜೀನಾಮೆ ಕೊಡದೇ ಬೇಲ್ ಮೇಲೆ ಹೊರಗಿದ್ದಾರೆ ಎಂದ ಸಿದ್ದರಾಮಯ್ಯ ಹೇಳಿಕೆಗೆ ಹೆಚ್​ಡಿಕೆ ಸಿಡಿದೆದ್ದರು. ನಿಮ್ಮ (ಸಿದ್ದರಾಮಯ್ಯ) ರೀತಿ ರಾಜೀನಾಮೆ ಕೊಡದೇ ನಾನು ಭಂಡತನ ಪ್ರದರ್ಶಿಸಲ್ಲ ಎಂದರು.

ಇದಿಷ್ಟೇ ಅಲ್ಲ, ರಾಜಕೀಯ ಕೇಸ್ ಹಾಕಿರೋದು ಇದೇ ಮೊದಲ ಸಾರಿ ಅಂದಿದ್ದ ಸಿಎಂಗೆ ಹೆಚ್​ಡಿಕೆ ಪಂಚ್​ ಕೊಟ್ಟರು. 50 ಪ್ರಕರಣ ಬಾಕಿ ಇದೆ, ಇಲ್ನೋಡಿ ಎಂದು ದಾಖಲೆಗಳನ್ನು ಪ್ರದರ್ಶಿಸಿದರು.

ಇದನ್ನೂ ಓದಿ: ಲೋಕಾಯುಕ್ತ FIR ಕುರಿತು ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ: ರಾಜೀನಾಮೆ ಬಗ್ಗೆ ಹೇಳಿದ್ದಿಷ್ಟು

ಒಟ್ಟಾರೆಯಾಗಿ ಹೆಚ್​ಡಿಕೆ ರಾಜೀನಾಮೆ ಕೇಳಿದ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಸುದ್ದಿಗೋಷ್ಠಿಯ ಮೂಲಕ ರೋಷಾವೇಶಗೊಂಡರು. ನಿಮ್ಮ ರೀತಿ ರಾಜೀನಾಮೆ ಕೊಡದೇ ಭಂಡತನ ಪ್ರದರ್ಶಿಸುವುದಿಲ್ಲ ಎಂಬ ಮೂಲಕ ತಿರುಗೇಟು ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು