AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾ ಕುಂದಾಪುರ ಖ್ಯಾತಿಗೆ ಕಾರಣವಾಗಿತ್ತು ಆ ಒಂದು ಟ್ವೀಟ್! ಇದನ್ನು ನಂಬಿ ವಂಚನೆ ಜಾಲಕ್ಕೆ ಬಿದ್ದ ಉದ್ಯಮಿ

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಂದ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಮತ್ತು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಹಲವಾರು ವಿಚಾರಗಳು ಬಹಿರಂಗವಾಗುತ್ತಿವೆ. ಚೈತ್ರಾ ಕುಂದಾಪುರ ಖ್ಯಾತಿಗೆ ಕೇಂದ್ರ ವಿತ್ತ ಸಚಿವೆಯ ಆ ಒಂದು ಟ್ವೀಟ್ ಕಾರಣವಾಗಿತ್ತು.

ಚೈತ್ರಾ ಕುಂದಾಪುರ ಖ್ಯಾತಿಗೆ ಕಾರಣವಾಗಿತ್ತು ಆ ಒಂದು ಟ್ವೀಟ್! ಇದನ್ನು ನಂಬಿ ವಂಚನೆ ಜಾಲಕ್ಕೆ ಬಿದ್ದ ಉದ್ಯಮಿ
ಚೈತ್ರಾ ಕುಂದಾಪುರ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Sep 15, 2023 | 7:12 AM

Share

ಉಡುಪಿ, ಸೆ.15: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ (Govinda Babu Poojary) ಅವರಿಂದ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ (Chaitra Kundapur) ಅವರ ಒಂದೊಂದೇ ವಿಚಾರ ಬೆಳಕಿಗೆ ಬರುತ್ತಿದೆ. ಇದೀಗ, 2018 ರಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮಾಡಿದ ಡೇರಿಂಗ್ ಗರ್ಲ್ ಎಂಬ ಟ್ವೀಟ್ ಚೈತ್ರಾಳ ಖ್ಯಾತಿಗೆ ಕಾರಣವಾಗಿತ್ತು ಎಂಬ ಅಂಶ ತಿಳಿದುಬಂದಿದೆ.

ಕೇಂದ್ರ ಸರ್ಕಾರದ ವಿರುದ್ಧ 2018 ರಲ್ಲಿ ಕಾಂಗ್ರೆಸ್ ಮತ್ತು ಇತರೆ ಎಡಪಕ್ಷಗಳು ಭಾರತ್ ಬಂದ್​ ನಡೆಸಿದ್ದರು. ಈ ವೇಳೆ ಉಡುಪಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಂಗಡಿ, ಮುಂಗಟ್ಟು ಬಂದ್ ಮಾಡುವ ವೇಳೆ ಒಬ್ಬಂಟಿಯಾಗಿ ರಸ್ತೆಗಿಳಿದು ತರಾಟೆಗೆ ತೆಗೆದುಕೊಂಡಿದ್ದ ಚೈತ್ರಾ, ಮೋದಿ ಪರ ಘೋಷಣೆ ಕೂಗಿ ಕಾಂಗ್ರೆಸ್ ವಿರುದ್ಧ ಅಬ್ಬರಿಸಿದ್ದರು.

ಇದನ್ನೂ ಓದಿ: ಚೈತ್ರಾ ಕುಂದಾಪುರ ವಂಚನೆ ಕೆಲಸ ಕೇವಲ ಮಂಗಳೂರು-ಉಡುಪಿಗೆ ಸೀಮಿತವಾಗಿರದೆ ರಾಜ್ಯಾದ್ಯಂತ ವ್ಯಾಪಿಸಿದಂತಿದೆ!

ಇದರ ವಿಡಿಯೋ ಸಾಮಾಜಿಕ ಜಾಲಗಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಬಿಜೆಪಿ ವರಿಷ್ಠರ ಕಣ್ಣಿಗೂ ಬಿದ್ದಿತ್ತು. ಅದರಂತೆ, ವೀಡಿಯೋ‌ ರೀಟ್ವೀಟ್ ಮಾಡಿದ ನಿರ್ಮಲಾ ಸೀತಾರಾಮನ್, ಚೈತ್ರಾ ಕುಂದಾಪುರ ಅವರನ್ನು ಡೇರಿಂಗ್ ಗರ್ಲ್ ಎಂದು ಬಣ್ಣಿಸಿದ್ದರು.

ಇದನ್ನೇ ಬಂಡವಾಳವನ್ನಾಗಿಸಿಕೊಂಡ ಚೈತ್ರಾ, ತನಗೆ ನಿರ್ಮಲಾ ಸೀತರಾಮನ್ ಅವರ ಜೊತೆ ಲಿಂಕ್ ಇರುವುದಾಗಿಯೂ ಬಿಂಬಿಸಿಕೊಂಡಿದ್ದಳು. ಉಡುಪಿ ಮಾತ್ರವಲ್ಲದೆ ರಾಜ್ಯಾದ್ಯಂತ ತನ್ನ ಹವಾ ಕ್ರಿಯೇಟ್ ಮಾಡಿಕೊಂಡಿದ್ದರು. ಇದನ್ನು ನಂಬಿದ ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ಟಿಕೆಟ್ ಕೊಡಿಸುವ ಭರವಸೆ ನೀಡಿದ ಚೈತ್ರಾ ಕುಂದಾಪುರ ಹಣ ಪಡೆದು ವಂಚಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ