AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನೆರವೇರಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಾಙ್ಮಯಿ ವಿವಾಹ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(nirmala sitharaman) ಅವರ ಏಕೈಕ ಪುತ್ರಿ ವಾಙ್ಮಯಿ ಅವರ ವಿವಾಹ(Wedding) ಇಂದು ಬೆಂಗಳೂರಿನಲ್ಲಿ ನೆರವೇರಿತು.

ಬೆಂಗಳೂರಿನಲ್ಲಿ ನೆರವೇರಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಾಙ್ಮಯಿ ವಿವಾಹ
ನಿರ್ಮಲಾ ಸೀತಾರಾಮನ್ ಪುತ್ರಿ ವಿವಾಹ
ರಮೇಶ್ ಬಿ. ಜವಳಗೇರಾ
| Edited By: |

Updated on:Jun 08, 2023 | 2:22 PM

Share

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(nirmala sitharaman) ಅವರ ಏಕೈಕ ಪುತ್ರಿ ವಾಙ್ಮಯಿ ಅವರ ವಿವಾಹ(Wedding) ಇಂದು ಬೆಂಗಳೂರಿನಲ್ಲಿ ನೆರವೇರಿತು. ಪ್ರತೀಕ್ ಎಂಬವರ ಜೊತೆ ಉಡುಪಿಯ ಅದಮಾರು ಮಠದ ಬ್ರಾಹ್ಮಣ ಸಂಪ್ರದಾಯ ಪ್ರಕಾರ ವಿವಾಹ ನಡೆಯಿತು.  ವಧು ನಸುಕೆಂಪು ಬಣ್ಣದ ಸೀರೆ ಉಟ್ಟಿದ್ದರೆ, ವರ ಬಿಳಿ ಪಂಚೆ, ಶಾಲನ್ನು ಧರಿಸಿದ್ದರು. ಇನ್ನು ಅದ್ಧೂರಿ ಮದುವೆಯಲ್ಲೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೊಳಕಾಲ್ಮೂರು ಸೀರೆಯಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

ಅದಮಾರು ಮಠದ ವೈದಿಕ ಕ್ರಮವನ್ನು ವಿವಾಹದಲ್ಲಿ ನೆರವೇರಿಸಲಾಯಿತು. ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಈಶಪ್ರಿಯ ತೀರ್ಥ ಶ್ರೀಪಾದರು ವಧು ವರರನ್ನು ಹರಸಿ ಕಳುಹಿಸಿದ ಮಧುಪರ್ಕ, ಸೀರೆ, ಶಾಲು, ಗಂಧ ಪ್ರಸಾದವನ್ನು ಮಠದ ವ್ಯವಸ್ಥಾಪಕರಾದ ಗೋವಿಂದ ರಾಜರು ಮತ್ತು ಶಿಷ್ಯರು ಮಂತ್ರಘೋಷದ ಮೂಲಕ ನೀಡಿ ಹರಸಿದರು.

ಈಶಪ್ರಿಯ ತೀರ್ಥ ಶ್ರೀಪಾದರು ಅನುಗ್ರಹಿಸಿ ಕಳುಹಿಸಿದ ಉಡುಪಿ ಸೀರೆಯನ್ನು ಪೌರೋಹಿತ್ಯರು ನಿರ್ಮಲ ಸೀತಾರಾಮನ್ ಅವರಿಗೆ ನೀಡಿದರು. ಇನ್ನು ಸಚಿವೆ ನಿರ್ಮಲಾ ಅವರು ಹಿಂದಿನಿಂದಲೂ ಉಡುಪಿ ಮಠದ ಭಕ್ತರು. ಅವರ ಇಚ್ಛೆಯ ಪ್ರಕಾರ ಪುತ್ರಿಯ ವಿವಾಹ ನೆರವೇರಿಸಿದ್ದಾರೆ.

Published On - 2:00 pm, Thu, 8 June 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು