AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜ್ಞಾನಿಗಳಿಗೆ ಅಗೌರವ ತೋರುವುದು ಬೇಡವೆಂದು ಕಾಂಗ್ರೆಸ್​ಗೆ ಸಲಹೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಬಜೆಟ್​ ಸೆಷನ್ಸ್ ಬಗ್ಗೆ ಮಾಹಿತಿ ನೀಡಿದ ಪ್ರಲ್ಹಾದ್ ಜೋಶಿ, ಜ.29ರಿಂದ ಫೆ.15ರವರೆಗೆ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದೆ. ಜನವರಿ 30ರಂದು ಸರ್ವಪಕ್ಷ ಸಭೆ ನಡೆಯಲಿದೆ. ಫೆ.1ರಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ತಿಳಿಸಿದರು.

ವಿಜ್ಞಾನಿಗಳಿಗೆ ಅಗೌರವ ತೋರುವುದು ಬೇಡವೆಂದು ಕಾಂಗ್ರೆಸ್​ಗೆ ಸಲಹೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
Lakshmi Hegde
| Edited By: |

Updated on: Jan 10, 2021 | 12:30 PM

Share

ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಯಾವಾಗ ಮಾಡಬೇಕು ಎಂದು ವರಿಷ್ಠರಿಗೆ ಗೊತ್ತು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಇಂದು ನಗರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ. ನಾಯಕರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಜ.16, 17ರಂದು ಬಿಜೆಪಿ ವರಿಷ್ಠರು ರಾಜ್ಯಕ್ಕೆ ಬರುತ್ತಾರೆ. ಗೃಹ ಇಲಾಖೆಯ ಕಾರ್ಯಕ್ರಮ ನಡೆಯಲಿದ್ದು, ಅದರಲ್ಲಿ ಅಮಿತ್​ ಷಾ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ ಅವರು, ಕೊರೊನಾ ವ್ಯಾಕ್ಸಿನ್​ನ್ನು ಮೊದಲು ಪ್ರಧಾನಿಯೇ ಪಡೆಯಬೇಕು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿದರು. ಪ್ರಧಾನಿ ಮೋದಿಯವರನ್ನು ವಿರೋಧಿಸುವ ಭರದಲ್ಲಿ ದೇಶವನ್ನು ವಿರೋಧಿಸಬೇಡಿ. ವಿಜ್ಞಾನಿಗಳಿಗೆ ಅಗೌರವ ತೋರುವುದು ಬೇಡವೆಂದು ಕಿವಿಮಾತು ಹೇಳಿದರು. ಹಾಗೇ, ಬಿಜೆಪಿ 30 ಪರ್ಸೆಂಟ್​ ಸರ್ಕಾರ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಬಗ್ಗೆ ಮಾತನಾಡುವುದೇ ಅಪ್ರಸ್ತುತ, ಅಪಹಾಸ್ಯ ಎಂದರು.

ಫೆಬ್ರವರಿ 1ರಂದು ಬಜೆಟ್​ ಇನ್ನು ಬಜೆಟ್​ ಸೆಷನ್ಸ್ ಬಗ್ಗೆ ಮಾಹಿತಿ ನೀಡಿದ ಪ್ರಲ್ಹಾದ್ ಜೋಶಿ, ಜ.29ರಿಂದ ಫೆ.15ರವರೆಗೆ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದೆ. ಜನವರಿ 30ರಂದು ಸರ್ವಪಕ್ಷ ಸಭೆ ನಡೆಯಲಿದೆ. ಫೆ.1ರಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್ ಮಂಡನೆ ಮಾಡಲಿದ್ದಾರೆ. ಮಾರ್ಚ್ 8ರಿಂದ ಏ.8ರವರೆಗೆ ಬಜೆಟ್‌ನ 2ನೇ ಸೆಷನ್ ನಡೆಯುವುದು. ಕರ್ನಾಟಕದ ಆದ್ಯತೆ ಪಟ್ಟಿಯನ್ನು ಈಗಾಗಲೇ ಕೇಂದ್ರಕ್ಕೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಹನುಮನ ಅನುಗ್ರಹ ಇದ್ದರೆ ಖಂಡಿತ ಸಚಿವನಾಗುತ್ತೇನೆ.. ಲಾಬಿ ಮಾಡಲ್ಲ: ಶಾಸಕ ಸೋಮಶೇಖರ ರೆಡ್ಡಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​