AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜ್ಞಾನಿಗಳಿಗೆ ಅಗೌರವ ತೋರುವುದು ಬೇಡವೆಂದು ಕಾಂಗ್ರೆಸ್​ಗೆ ಸಲಹೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಬಜೆಟ್​ ಸೆಷನ್ಸ್ ಬಗ್ಗೆ ಮಾಹಿತಿ ನೀಡಿದ ಪ್ರಲ್ಹಾದ್ ಜೋಶಿ, ಜ.29ರಿಂದ ಫೆ.15ರವರೆಗೆ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದೆ. ಜನವರಿ 30ರಂದು ಸರ್ವಪಕ್ಷ ಸಭೆ ನಡೆಯಲಿದೆ. ಫೆ.1ರಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ತಿಳಿಸಿದರು.

ವಿಜ್ಞಾನಿಗಳಿಗೆ ಅಗೌರವ ತೋರುವುದು ಬೇಡವೆಂದು ಕಾಂಗ್ರೆಸ್​ಗೆ ಸಲಹೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
Lakshmi Hegde
| Edited By: |

Updated on: Jan 10, 2021 | 12:30 PM

Share

ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಯಾವಾಗ ಮಾಡಬೇಕು ಎಂದು ವರಿಷ್ಠರಿಗೆ ಗೊತ್ತು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಇಂದು ನಗರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ. ನಾಯಕರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಜ.16, 17ರಂದು ಬಿಜೆಪಿ ವರಿಷ್ಠರು ರಾಜ್ಯಕ್ಕೆ ಬರುತ್ತಾರೆ. ಗೃಹ ಇಲಾಖೆಯ ಕಾರ್ಯಕ್ರಮ ನಡೆಯಲಿದ್ದು, ಅದರಲ್ಲಿ ಅಮಿತ್​ ಷಾ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ ಅವರು, ಕೊರೊನಾ ವ್ಯಾಕ್ಸಿನ್​ನ್ನು ಮೊದಲು ಪ್ರಧಾನಿಯೇ ಪಡೆಯಬೇಕು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿದರು. ಪ್ರಧಾನಿ ಮೋದಿಯವರನ್ನು ವಿರೋಧಿಸುವ ಭರದಲ್ಲಿ ದೇಶವನ್ನು ವಿರೋಧಿಸಬೇಡಿ. ವಿಜ್ಞಾನಿಗಳಿಗೆ ಅಗೌರವ ತೋರುವುದು ಬೇಡವೆಂದು ಕಿವಿಮಾತು ಹೇಳಿದರು. ಹಾಗೇ, ಬಿಜೆಪಿ 30 ಪರ್ಸೆಂಟ್​ ಸರ್ಕಾರ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಬಗ್ಗೆ ಮಾತನಾಡುವುದೇ ಅಪ್ರಸ್ತುತ, ಅಪಹಾಸ್ಯ ಎಂದರು.

ಫೆಬ್ರವರಿ 1ರಂದು ಬಜೆಟ್​ ಇನ್ನು ಬಜೆಟ್​ ಸೆಷನ್ಸ್ ಬಗ್ಗೆ ಮಾಹಿತಿ ನೀಡಿದ ಪ್ರಲ್ಹಾದ್ ಜೋಶಿ, ಜ.29ರಿಂದ ಫೆ.15ರವರೆಗೆ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದೆ. ಜನವರಿ 30ರಂದು ಸರ್ವಪಕ್ಷ ಸಭೆ ನಡೆಯಲಿದೆ. ಫೆ.1ರಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್ ಮಂಡನೆ ಮಾಡಲಿದ್ದಾರೆ. ಮಾರ್ಚ್ 8ರಿಂದ ಏ.8ರವರೆಗೆ ಬಜೆಟ್‌ನ 2ನೇ ಸೆಷನ್ ನಡೆಯುವುದು. ಕರ್ನಾಟಕದ ಆದ್ಯತೆ ಪಟ್ಟಿಯನ್ನು ಈಗಾಗಲೇ ಕೇಂದ್ರಕ್ಕೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಹನುಮನ ಅನುಗ್ರಹ ಇದ್ದರೆ ಖಂಡಿತ ಸಚಿವನಾಗುತ್ತೇನೆ.. ಲಾಬಿ ಮಾಡಲ್ಲ: ಶಾಸಕ ಸೋಮಶೇಖರ ರೆಡ್ಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!