AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telephone Tapping: ಮಾರ್ಗರೇಟ್ ಆಳ್ವಾ ಅವರ ಫೋನ್ ಟ್ಯಾಪ್ ಆರೋಪದಲ್ಲಿ ಹುರುಳಿಲ್ಲ – ಪ್ರಲ್ಹಾದ್ ಜೋಶಿ ತಿರುಗೇಟು

Pralhad Joshi: ಮಾರ್ಗರೇಟ್ ಆಳ್ವಾ ಅವರು ಹಿರಿಯ ನಾಯಕಿ.. ಈ ರೀತಿಯ ಹೇಳಿಕೆಗಳು ಚೈಲ್ಡಿಶ್ ಮನೋಭಾವವನ್ನ ತೋರಿಸುತ್ತವೆ.. ಇಂಥಹ ಹೇಳಿಕೆಗಳು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತದ್ದಲ್ಲ.. ಆರೋಪಗಳನ್ನ ಮಾಡುವಾಗ ಕನಿಷ್ಠ ಆಲೋಚನೆ ಮಾಡಿ ಆರೋಪಿಸಲಿ - ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Telephone Tapping: ಮಾರ್ಗರೇಟ್ ಆಳ್ವಾ ಅವರ ಫೋನ್ ಟ್ಯಾಪ್ ಆರೋಪದಲ್ಲಿ ಹುರುಳಿಲ್ಲ - ಪ್ರಲ್ಹಾದ್ ಜೋಶಿ ತಿರುಗೇಟು
ಮಾರ್ಗರೇಟ್ ಆಳ್ವಾ ಅವರ ಫೋನ್ ಟ್ಯಾಪ್ ಆರೋಪದಲ್ಲಿ ಹುರುಳಿಲ್ಲ - ಪ್ರಲ್ಹಾದ್ ಜೋಶಿ ತಿರುಗೇಟು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 26, 2022 | 6:27 PM

ಉಪರಾಷ್ಟ್ರಪತಿ ಅಭ್ಯರ್ಥಿ ಮಾರ್ಗರೇಟ್ ಆಳ್ವಾ ಅವರ ಫೋನ್ ಟ್ಯಾಪ್ (Telephone Tapping) ಆರೋಪವನ್ನ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Parliamentary Affairs Minister Pralhad Joshi) ಅಲ್ಲಗೆಳೆದಿದ್ದಾರೆ.. ಮಾರ್ಗರೇಟ್ ಆಳ್ವಾ ಅವರ ಫೋನ್ ಅನ್ನ ಯಾರು ಏಕೆ ಟ್ಯಾಪ್ ಮಾಡಬೇಕು..? ಉಪರಾಷ್ಟ್ರಪತಿ ಚುನಾವಣೆಯಲ್ಲಿ ಫಲಿತಾಂಶ ಏನು ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ.. ಹೀಗಿರುವಾಗ ಆಳ್ವಾ ಅವರ (Margaret Alva) ಫೋನನ್ನ ಟ್ಯಾಪ್ ಮಾಡುವ ಅಗತ್ಯತೆ ನಮಗಿಲ್ಲ.. ಅಂಥಹ ಕೀಳು ಮಟ್ಟದ ರಾಜಕಾರಣವನ್ನ ಬಿಜೆಪಿ ಮಾಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ..

ಕಾಂಗ್ರೆಸ್ ನಿಂದ ಉಪರಾಷ್ಟ್ರಪತಿ ಅಭ್ಯರ್ಥಿಯಾದ ಬಳಿಕ ಮಾರ್ಗರೇಟ್ ಆಳ್ವಾ ಅವರು ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆಗಳನ್ನ ನೀಡಿ ಸುದ್ದಿಯಲ್ಲಿದ್ದಾರೆ.. ಇಂದು ನನ್ನ ಫೋನ್ ಟ್ಯಾಪ್ ಮಾಡಲಾಗಿದೆ ಎಂದು ಆಳ್ವಾ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದರು..

ಇಂದು ಬಿಜೆಪಿಯ ಕೆಲವು ಸ್ನೇಹಿತರೊಂದಿಗೆ ಮಾತನಾಡಿದೆ.. ಆ ನಂತರ ನನ್ನ ಮೊಬೈಲ್‌ಗೆ ಎಲ್ಲಾ ಕರೆಗಳನ್ನು ಡೈವರ್ಟ್ ಮಾಡಲಾಗುತ್ತಿದೆ ಎಂದು ಮಾರ್ಗರೇಟ್ ಆಳ್ವಾ ಅವರು ಆರೋಪಿಸಿದ್ದರು.. ನನ್ನ ಫೋನ್ ಟ್ಯಾಪ್ ಆಗಿದ್ದು, ನನಗೆ ಕರೆ ಮಾಡಲು ಅಥವಾ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ನನ್ನ ಫೋನ್ ಸರಿಮಾಡಿದರೆ, ಇಂದು ರಾತ್ರಿ ಬಿಜೆಪಿ, ಟಿಎಂಸಿ ಅಥವಾ ಬಿಜೆಡಿಯಿಂದ ಯಾವುದೇ ಸಂಸದರನ್ನು ಕರೆಯುವುದಿಲ್ಲ‌ ಎಂಬ ಭರವಸೆ ನೀಡುತ್ತೇನೆ ಎಂದು ಬಿಜೆಪಿಯನ್ನ ಗುರಿಯಾಗಿಸಿ ಟ್ವೀಟ್ ಮಾಡಿದ್ದರು.

ಆಳ್ವಾ ಅವರ ಆರೋಪವನ್ನ ಸಂಪೂರ್ಣವಾಗಿ ತಳ್ಳಿಹಾಕಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಇದೊಂದು ಬಾಲಿಶ ಹೇಳಿಕೆ ಅಂತಾ ಲೇವಡಿ ಮಾಡಿದ್ದಾರೆ.. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ.. ಅದು ಎಲ್ಲರಿಗೂ ಈಗಾಗಲೇ ಗೊತ್ತಿರುವಂತದ್ದು.. ಹೀಗಿರುವಾಗ ಯಾರಾದರೂ ಆಳ್ವಾ ಅವರ ಫೋನ್ ಅನ್ನು ಏಕೆ ಟ್ಯಾಪ್ ಮಾಡ್ತಾರೆ ಎಂದು ಪ್ರಶ್ನಿಸಿದ್ದಾರೆ..

ಮಾರ್ಗರೇಟ್ ಆಳ್ವಾ ಅವರು ಹಿರಿಯ ನಾಯಕಿ.. ಈ ರೀತಿಯ ಹೇಳಿಕೆಗಳು ಚೈಲ್ಡಿಶ್ ಮನೋಭಾವವನ್ನ ತೋರಿಸುತ್ತವೆ.. ಇಂಥಹ ಹೇಳಿಕೆಗಳು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತದ್ದಲ್ಲ.. ಆರೋಪಗಳನ್ನ ಮಾಡುವಾಗ ಕನಿಷ್ಠ ಆಲೋಚನೆ ಮಾಡಿ ಆರೋಪಿಸಲಿ.. ಹುರುಳಿಲ್ಲದ, ಆಧಾರ ವಿಲ್ಲದ ಆರೋಪಗಳಿಗೆ ಅರ್ಥವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಕಾಂಗ್ರೆಸ್ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರಿಗೆ ತಿರುಗೇಟು ನೀಡಿದ್ದಾರೆ.

Published On - 3:21 pm, Tue, 26 July 22

ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ