AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telephone Tapping: ಮಾರ್ಗರೇಟ್ ಆಳ್ವಾ ಅವರ ಫೋನ್ ಟ್ಯಾಪ್ ಆರೋಪದಲ್ಲಿ ಹುರುಳಿಲ್ಲ – ಪ್ರಲ್ಹಾದ್ ಜೋಶಿ ತಿರುಗೇಟು

Pralhad Joshi: ಮಾರ್ಗರೇಟ್ ಆಳ್ವಾ ಅವರು ಹಿರಿಯ ನಾಯಕಿ.. ಈ ರೀತಿಯ ಹೇಳಿಕೆಗಳು ಚೈಲ್ಡಿಶ್ ಮನೋಭಾವವನ್ನ ತೋರಿಸುತ್ತವೆ.. ಇಂಥಹ ಹೇಳಿಕೆಗಳು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತದ್ದಲ್ಲ.. ಆರೋಪಗಳನ್ನ ಮಾಡುವಾಗ ಕನಿಷ್ಠ ಆಲೋಚನೆ ಮಾಡಿ ಆರೋಪಿಸಲಿ - ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Telephone Tapping: ಮಾರ್ಗರೇಟ್ ಆಳ್ವಾ ಅವರ ಫೋನ್ ಟ್ಯಾಪ್ ಆರೋಪದಲ್ಲಿ ಹುರುಳಿಲ್ಲ - ಪ್ರಲ್ಹಾದ್ ಜೋಶಿ ತಿರುಗೇಟು
ಮಾರ್ಗರೇಟ್ ಆಳ್ವಾ ಅವರ ಫೋನ್ ಟ್ಯಾಪ್ ಆರೋಪದಲ್ಲಿ ಹುರುಳಿಲ್ಲ - ಪ್ರಲ್ಹಾದ್ ಜೋಶಿ ತಿರುಗೇಟು
TV9 Web
| Edited By: |

Updated on:Jul 26, 2022 | 6:27 PM

Share

ಉಪರಾಷ್ಟ್ರಪತಿ ಅಭ್ಯರ್ಥಿ ಮಾರ್ಗರೇಟ್ ಆಳ್ವಾ ಅವರ ಫೋನ್ ಟ್ಯಾಪ್ (Telephone Tapping) ಆರೋಪವನ್ನ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Parliamentary Affairs Minister Pralhad Joshi) ಅಲ್ಲಗೆಳೆದಿದ್ದಾರೆ.. ಮಾರ್ಗರೇಟ್ ಆಳ್ವಾ ಅವರ ಫೋನ್ ಅನ್ನ ಯಾರು ಏಕೆ ಟ್ಯಾಪ್ ಮಾಡಬೇಕು..? ಉಪರಾಷ್ಟ್ರಪತಿ ಚುನಾವಣೆಯಲ್ಲಿ ಫಲಿತಾಂಶ ಏನು ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ.. ಹೀಗಿರುವಾಗ ಆಳ್ವಾ ಅವರ (Margaret Alva) ಫೋನನ್ನ ಟ್ಯಾಪ್ ಮಾಡುವ ಅಗತ್ಯತೆ ನಮಗಿಲ್ಲ.. ಅಂಥಹ ಕೀಳು ಮಟ್ಟದ ರಾಜಕಾರಣವನ್ನ ಬಿಜೆಪಿ ಮಾಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ..

ಕಾಂಗ್ರೆಸ್ ನಿಂದ ಉಪರಾಷ್ಟ್ರಪತಿ ಅಭ್ಯರ್ಥಿಯಾದ ಬಳಿಕ ಮಾರ್ಗರೇಟ್ ಆಳ್ವಾ ಅವರು ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆಗಳನ್ನ ನೀಡಿ ಸುದ್ದಿಯಲ್ಲಿದ್ದಾರೆ.. ಇಂದು ನನ್ನ ಫೋನ್ ಟ್ಯಾಪ್ ಮಾಡಲಾಗಿದೆ ಎಂದು ಆಳ್ವಾ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದರು..

ಇಂದು ಬಿಜೆಪಿಯ ಕೆಲವು ಸ್ನೇಹಿತರೊಂದಿಗೆ ಮಾತನಾಡಿದೆ.. ಆ ನಂತರ ನನ್ನ ಮೊಬೈಲ್‌ಗೆ ಎಲ್ಲಾ ಕರೆಗಳನ್ನು ಡೈವರ್ಟ್ ಮಾಡಲಾಗುತ್ತಿದೆ ಎಂದು ಮಾರ್ಗರೇಟ್ ಆಳ್ವಾ ಅವರು ಆರೋಪಿಸಿದ್ದರು.. ನನ್ನ ಫೋನ್ ಟ್ಯಾಪ್ ಆಗಿದ್ದು, ನನಗೆ ಕರೆ ಮಾಡಲು ಅಥವಾ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ನನ್ನ ಫೋನ್ ಸರಿಮಾಡಿದರೆ, ಇಂದು ರಾತ್ರಿ ಬಿಜೆಪಿ, ಟಿಎಂಸಿ ಅಥವಾ ಬಿಜೆಡಿಯಿಂದ ಯಾವುದೇ ಸಂಸದರನ್ನು ಕರೆಯುವುದಿಲ್ಲ‌ ಎಂಬ ಭರವಸೆ ನೀಡುತ್ತೇನೆ ಎಂದು ಬಿಜೆಪಿಯನ್ನ ಗುರಿಯಾಗಿಸಿ ಟ್ವೀಟ್ ಮಾಡಿದ್ದರು.

ಆಳ್ವಾ ಅವರ ಆರೋಪವನ್ನ ಸಂಪೂರ್ಣವಾಗಿ ತಳ್ಳಿಹಾಕಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಇದೊಂದು ಬಾಲಿಶ ಹೇಳಿಕೆ ಅಂತಾ ಲೇವಡಿ ಮಾಡಿದ್ದಾರೆ.. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ.. ಅದು ಎಲ್ಲರಿಗೂ ಈಗಾಗಲೇ ಗೊತ್ತಿರುವಂತದ್ದು.. ಹೀಗಿರುವಾಗ ಯಾರಾದರೂ ಆಳ್ವಾ ಅವರ ಫೋನ್ ಅನ್ನು ಏಕೆ ಟ್ಯಾಪ್ ಮಾಡ್ತಾರೆ ಎಂದು ಪ್ರಶ್ನಿಸಿದ್ದಾರೆ..

ಮಾರ್ಗರೇಟ್ ಆಳ್ವಾ ಅವರು ಹಿರಿಯ ನಾಯಕಿ.. ಈ ರೀತಿಯ ಹೇಳಿಕೆಗಳು ಚೈಲ್ಡಿಶ್ ಮನೋಭಾವವನ್ನ ತೋರಿಸುತ್ತವೆ.. ಇಂಥಹ ಹೇಳಿಕೆಗಳು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತದ್ದಲ್ಲ.. ಆರೋಪಗಳನ್ನ ಮಾಡುವಾಗ ಕನಿಷ್ಠ ಆಲೋಚನೆ ಮಾಡಿ ಆರೋಪಿಸಲಿ.. ಹುರುಳಿಲ್ಲದ, ಆಧಾರ ವಿಲ್ಲದ ಆರೋಪಗಳಿಗೆ ಅರ್ಥವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಕಾಂಗ್ರೆಸ್ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರಿಗೆ ತಿರುಗೇಟು ನೀಡಿದ್ದಾರೆ.

Published On - 3:21 pm, Tue, 26 July 22

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ