AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಜನ್ಮದಿನ: ಕ್ಷೇತ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಪ್ರಲ್ಹಾದ್ ಜೋಶಿ ವಿಶೇಷ ಮನವಿ

ನಾಳೆ(ನವೆಂಬರ್ 27) ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಜನ್ಮದಿನ. ಈ ಹಿನ್ನಲೆಯಲ್ಲಿ ತಮ್ಮ ಕ್ಷೇತ್ರದ ಜನರು, ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಕೇಂದ್ರ ಸಚಿವರು ಒಂದು ವಿಶೇಷ ಮನವಿ ಮಾಡಿದ್ದಾರೆ.

ನಾಳೆ ಜನ್ಮದಿನ: ಕ್ಷೇತ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಪ್ರಲ್ಹಾದ್ ಜೋಶಿ ವಿಶೇಷ ಮನವಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
TV9 Web
| Edited By: |

Updated on: Nov 26, 2023 | 6:27 PM

Share

ಹುಬ್ಬಳ್ಳಿ, (ನವೆಂಬರ್ 26) : ನಾಳೆ(ನವೆಂಬರ್ 27) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (pralhad joshi) ಜನ್ಮದಿನ(Birthday). ಆದ್ರೆ, ಅವರು ನಾಳೆ ಕ್ಷೇತ್ರದಲ್ಲಿ ಲಭ್ಯವಿರುವುದಿಲ್ಲ. ಸಂಸತ್ ಚಳಿಗಾಲದ ಅಧಿವೇಶನದ ಪೂರ್ವ ಸಭೆಯಲ್ಲಿ ಭಾಗವಹಿಸಿದ್ದರಿಂದ ಅವರು ಕ್ಷೇತ್ರದ ಕಾರ್ಯಕರ್ತರನ್ನು ಹಾಗೂ ಮುಖಂಡರ ಭೇಟಿಗೆ ಸಿಗುವುದಿಲ್ಲ. ಹೀಗಾಗಿ ಹೂಗುಚ್ಚ, ಉಡುಗೊರೆ ತೆಗೆದುಕೊಂಡು ಕಚೇರಿಗೆ ಬರುವುದು ಬೇಡ ಎಂದು ತಮ್ಮ ಹಿತೈಷಿಗಳಿಗೆ ಮನವಿ ಮಾಡಿದ್ದಾರೆ.

ಡಿಸೆಂಬರ್ ನಾಲ್ಕರಿಂದ ಸಂಸತ್ ನ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿರುವ ಹಿನ್ನಲೆಯಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿಯವರು ಅಧಿವೇಶನದ ಪೂರ್ವಭಾವಿ ತಯಾರಿಯ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಕೇಂದ್ರ ಸಚಿವರು ತಮ್ಮ ಜನ್ಮದಿನವಾದ ನವೆಂಬರ್ 27 ರಂದು ಹುಬ್ಬಳ್ಳಿಯ ಸಂಸದರ ಕಛೇರಿ ಹಾಗೂ ಗೃಹ ಕಛೇರಿಯಲ್ಲಿ ಭೇಟಿಯಾಗೆ ಲಭ್ಯವಿರುವುದಿಲ್ಲ. ‌ಹೀಗಾಗಿ ಈ ಬಗ್ಗೆ ವಿಶೇಷ ಮನವಿಯ ಸಂದೇಶ ನೀಡಿರುವ ಸಚಿವರು, ನಾಳೆ ಜನ್ಮದಿನ ಎಂಬ ಹಿನ್ನಲೆಯಲ್ಲಿ ಕ್ಷೇತ್ರದ ಜನರು ಹೂಗುಚ್ಚ, ಉಡುಗೊರೆ ತೆಗೆದುಕೊಂಡು ಬರುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಅಷ್ಟೇ ಅಲ್ಲದೇ ಕ್ಷೇತ್ರದಲ್ಲಿ ಶುಭಾಶಯಕೋರುವ ಬ್ಯಾನರ್, ಹೋರ್ಡಿಂಗ್ಸ್, ಕಟೌಟ್ ಮುಂತಾದವುಗಳಿಗೆಂದು ಅನಾವಶ್ಯಕ ವೆಚ್ಚಮಾಡಬಾರದೆಂದು ವಿನಂತಿ ಮಾಡಿದ್ದು, ಕ್ಷೇತ್ರದ ಜನರ ಶುಭಹಾರೈಕೆ ಹಾಗೂ ಆಶೀರ್ವಾದವೇ ತನಗೆ ಶ್ರೀರಕ್ಷೆ ಎಂದು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ‌.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ