AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಜನ್ಮದಿನ: ಕ್ಷೇತ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಪ್ರಲ್ಹಾದ್ ಜೋಶಿ ವಿಶೇಷ ಮನವಿ

ನಾಳೆ(ನವೆಂಬರ್ 27) ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಜನ್ಮದಿನ. ಈ ಹಿನ್ನಲೆಯಲ್ಲಿ ತಮ್ಮ ಕ್ಷೇತ್ರದ ಜನರು, ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಕೇಂದ್ರ ಸಚಿವರು ಒಂದು ವಿಶೇಷ ಮನವಿ ಮಾಡಿದ್ದಾರೆ.

ನಾಳೆ ಜನ್ಮದಿನ: ಕ್ಷೇತ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಪ್ರಲ್ಹಾದ್ ಜೋಶಿ ವಿಶೇಷ ಮನವಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
TV9 Web
| Edited By: |

Updated on: Nov 26, 2023 | 6:27 PM

Share

ಹುಬ್ಬಳ್ಳಿ, (ನವೆಂಬರ್ 26) : ನಾಳೆ(ನವೆಂಬರ್ 27) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (pralhad joshi) ಜನ್ಮದಿನ(Birthday). ಆದ್ರೆ, ಅವರು ನಾಳೆ ಕ್ಷೇತ್ರದಲ್ಲಿ ಲಭ್ಯವಿರುವುದಿಲ್ಲ. ಸಂಸತ್ ಚಳಿಗಾಲದ ಅಧಿವೇಶನದ ಪೂರ್ವ ಸಭೆಯಲ್ಲಿ ಭಾಗವಹಿಸಿದ್ದರಿಂದ ಅವರು ಕ್ಷೇತ್ರದ ಕಾರ್ಯಕರ್ತರನ್ನು ಹಾಗೂ ಮುಖಂಡರ ಭೇಟಿಗೆ ಸಿಗುವುದಿಲ್ಲ. ಹೀಗಾಗಿ ಹೂಗುಚ್ಚ, ಉಡುಗೊರೆ ತೆಗೆದುಕೊಂಡು ಕಚೇರಿಗೆ ಬರುವುದು ಬೇಡ ಎಂದು ತಮ್ಮ ಹಿತೈಷಿಗಳಿಗೆ ಮನವಿ ಮಾಡಿದ್ದಾರೆ.

ಡಿಸೆಂಬರ್ ನಾಲ್ಕರಿಂದ ಸಂಸತ್ ನ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿರುವ ಹಿನ್ನಲೆಯಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿಯವರು ಅಧಿವೇಶನದ ಪೂರ್ವಭಾವಿ ತಯಾರಿಯ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಕೇಂದ್ರ ಸಚಿವರು ತಮ್ಮ ಜನ್ಮದಿನವಾದ ನವೆಂಬರ್ 27 ರಂದು ಹುಬ್ಬಳ್ಳಿಯ ಸಂಸದರ ಕಛೇರಿ ಹಾಗೂ ಗೃಹ ಕಛೇರಿಯಲ್ಲಿ ಭೇಟಿಯಾಗೆ ಲಭ್ಯವಿರುವುದಿಲ್ಲ. ‌ಹೀಗಾಗಿ ಈ ಬಗ್ಗೆ ವಿಶೇಷ ಮನವಿಯ ಸಂದೇಶ ನೀಡಿರುವ ಸಚಿವರು, ನಾಳೆ ಜನ್ಮದಿನ ಎಂಬ ಹಿನ್ನಲೆಯಲ್ಲಿ ಕ್ಷೇತ್ರದ ಜನರು ಹೂಗುಚ್ಚ, ಉಡುಗೊರೆ ತೆಗೆದುಕೊಂಡು ಬರುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಅಷ್ಟೇ ಅಲ್ಲದೇ ಕ್ಷೇತ್ರದಲ್ಲಿ ಶುಭಾಶಯಕೋರುವ ಬ್ಯಾನರ್, ಹೋರ್ಡಿಂಗ್ಸ್, ಕಟೌಟ್ ಮುಂತಾದವುಗಳಿಗೆಂದು ಅನಾವಶ್ಯಕ ವೆಚ್ಚಮಾಡಬಾರದೆಂದು ವಿನಂತಿ ಮಾಡಿದ್ದು, ಕ್ಷೇತ್ರದ ಜನರ ಶುಭಹಾರೈಕೆ ಹಾಗೂ ಆಶೀರ್ವಾದವೇ ತನಗೆ ಶ್ರೀರಕ್ಷೆ ಎಂದು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ‌.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್