Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಸಮುದಾಯದಲ್ಲಿ ಬಡವರು, ಹಿಂದುಳಿದವರು ಇದ್ದಾರೆ; ಅವಶ್ಯಕತೆ ಇರುವವರಿಗೆ ಮೀಸಲಾತಿ ಸಿಗಬೇಕು: ರಾಮದಾಸ್ ಅಠಾವಳೆ

ಎಸ್​ಸಿ, ಎಸ್​ಟಿಯಲ್ಲಿ ಉಳ್ಳವರು ಪ್ರಯೋಜನ ಪಡೀತಿದ್ದಾರೆ. ಆರ್ಥಿಕ ಹಿಂದುಳಿದವರಿಗೆ, ದುರ್ಬಲರಿಗೆ ಅನುಕೂಲವಾಗಬೇಕು. ಪ್ರಧಾನಿ ನರೇಂದ್ರ ಮೋದಿ ಬಳಿ ಈ ವಿಚಾರವಾಗಿ ನಾನು ಮನವಿ ಮಾಡಿದ್ದೇನೆ ಎಂದು ಅಠಾವಳೆ ಹೇಳಿದರು.

ಎಲ್ಲಾ ಸಮುದಾಯದಲ್ಲಿ ಬಡವರು, ಹಿಂದುಳಿದವರು ಇದ್ದಾರೆ; ಅವಶ್ಯಕತೆ ಇರುವವರಿಗೆ ಮೀಸಲಾತಿ ಸಿಗಬೇಕು: ರಾಮದಾಸ್ ಅಠಾವಳೆ
ರಾಮದಾಸ್ ಅಠಾವಳೆ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Jul 11, 2021 | 2:49 PM

ಬೆಂಗಳೂರು: ದೇಶದಲ್ಲಿ ಜಾತಿಗಣತಿ ಆಗಬೇಕು. ಅದರಿಂದ ಯಾವ ಜಾತಿಯವರು ಎಷ್ಟು ಇದ್ದಾರೆ ಎಂದು ಗೊತ್ತಾಗುತ್ತದೆ. ಆ ಮೂಲಕ, ಸಾಮಾಜಿಕ ಹಾಗೂ ಶೈಕ್ಷಣಿಕ ವಿಚಾರದಲ್ಲಿ ಅನುಕೂಲ ಆಗುತ್ತದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ರಾಮದಾಸ್ ಅಠಾವಳೆ ಇಂದು (ಜುಲೈ 11) ಇಲ್ಲಿ ತಿಳಿಸಿದರು.

ದೇಶದಲ್ಲಿ ಮೀಸಲಾತಿಯನ್ನು ಹೆಚ್ಚಿಸುವ ಅಗತ್ಯ ಇದೆ. ಈ ಕುರಿತು ಕೇಂದ್ರ ಸರ್ಕಾರ ನಿಯಮ ರೂಪಿಸಬೇಕಿದೆ. ಮೀಸಲಾತಿ ಹೆಚ್ಚಳ ಬಗ್ಗೆ ಸಂವಿಧಾನಕ್ಕೆ ತಿದ್ದುಪಡಿ ಆಗಬೇಕು. ಎಲ್ಲ ಸಮುದಾಯದಲ್ಲಿ ಬಡವರು, ಹಿಂದುಳಿದವರು ಇದ್ದಾರೆ. ಹಾಗಾಗಿ ಅವಶ್ಯಕತೆ ಇಲ್ಲದವರಿಗೆ ಮೀಸಲಾತಿ ಸಿಗಬಾರದು. ಯಾರಿಗೆ ಅಗತ್ಯ ಇದೆಯೋ ಅವರಿಗೆ ಮನ್ನಣೆ ನೀಡಬೇಕು ಎಂದು ರಾಮದಾಸ್ ಅಠಾವಳೆ ಅಭಿಪ್ರಾಯ ವ್ಯಕ್ತಪಡಿಸಿದರು.

ಎಸ್​ಸಿ, ಎಸ್​ಟಿಯಲ್ಲಿ ಉಳ್ಳವರು ಪ್ರಯೋಜನ ಪಡೀತಿದ್ದಾರೆ. ಆರ್ಥಿಕ ಹಿಂದುಳಿದವರಿಗೆ, ದುರ್ಬಲರಿಗೆ ಅನುಕೂಲವಾಗಬೇಕು. ಪ್ರಧಾನಿ ನರೇಂದ್ರ ಮೋದಿ ಬಳಿ ಈ ವಿಚಾರವಾಗಿ ನಾನು ಮನವಿ ಮಾಡಿದ್ದೇನೆ ಎಂದು ಅಠಾವಳೆ ಹೇಳಿದರು. ಪ್ರಧಾನಿ ಮೋದಿ ನೇತೃತ್ವದ ಸರ್ಕಾರ 7 ವರ್ಷ ಪೂರೈಸಿರುವ ಬಗ್ಗೆಯೂ ಸಂತಸ ವ್ಯಕ್ತಪಡಿಸಿದರು.

ಮೀಸಲಾತಿ ಪ್ರಮಾಣ ಶೇಕಡಾ 50 ಮೀರಬಾರದು ಅಂತ ಕೋರ್ಟ್ ಹೇಳಿದೆ. ಇದು ನ್ಯಾಯಾಲಯದ ಅಭಿಪ್ರಾಯ. ಆದರೆ ಮೀಸಲಾತಿ ಹೆಚ್ಚಿಸುವ ಅಗತ್ಯ ಇದೆ. ಈ ಕುರಿತು ಕೇಂದ್ರ ಸರ್ಕಾರ ನಿಯಮ ರೂಪಿಸಬೇಕಿದೆ. ರಾಜ್ಯಗಳಿಗೆ ಮೀಸಲಾತಿ ಕೊಡುವ ಅಧಿಕಾರ ಇದೆ. ಸಂವಿಧಾನದ 102 ವಿಧಿಯನ್ವಯ ರಾಜ್ಯಗಳಿಗೂ ಮೀಸಲಾತಿ ಹೆಚ್ಚಿಸುವ ಅಧಿಕಾರ ಇದೆ. ಮೀಸಲಾತಿ ಹೆಚ್ಚಳ ಸಂಬಂಧ ಸಂವಿಧಾನದ ತಿದ್ದುಪಡಿ ಆಗಬೇಕಿದೆ ಎಂದು ಅಠಾವಳೆ ಅಭಿಪ್ರಾಯಪಟ್ಟರು.

ಕೆಲವರು ಜಮೀನ್ದಾರರು, ಅಧಿಕರಿಗಳು, ಹಣವಂತರು ಮೀಸಲಾತಿಯ ಲಾಭ ಪಡೆಯುತ್ತಿದ್ದಾರೆ. ಎಲ್ಲಾ ಸಮುಧಾಯದಲ್ಲಿ ಬಡವಾರು ಹಿಂದೂಳಿದವರು ಇದ್ದಾರೆ. ಹಾಗಾಗಿ ಅವಶ್ಯಕತೆ ಇಲ್ಲದವರಿಗೆ ಮೀಸಲಾತಿ ಸಿಗಬಾರದು. ಯಾರಿಗೆ ಅವಶ್ಯಕತೆ ಇದೆಯೋ ಅವರಿಗೆ ಮನ್ನಣೆ ನೀಡಬೇಕು ಎಂದು ಉಳ್ಳವರು ಮೀಸಲಾತಿ ಪಡೆಯುತ್ತಿರುವುದಕ್ಕೆ ಅಠಾವಳೆ ಆಕ್ಷೇಪ ವ್ಯಕ್ತಪಡಿಸಿದರು.

ಸಬ್‌ ಕಾ ಸಾಥ್ ಸಬ್‌ ಕಾ ವಿಕಾಸ್ ಅಡಿ ಸರ್ಕಾರದ ಕೆಲಸ ಸಾಗುತ್ತಿದೆ. ಜನ್‌ಧನ್ ಯೋಜನೆ, ಮುದ್ರಾ ಯೋಜನೆ ಯಶಸ್ವಿಯಾಗಿವೆ. ಇದರಿಂದ ಸರ್ಕಾರದ ಪ್ರಯೋಜನ ‌ಪಡೆಯಲು ಸಾಧ್ಯವಾಗಿದೆ ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿಕೆ ನೀಡಿದರು. ಮುದ್ರಾ ಯೋಜನೆಯಿಂದ ಯುವಕರಿಗೆ ಸಾಲ ಸಿಕ್ಕಿದೆ. ಯಾವುದೇ ಗ್ಯಾರಂಟಿ ಇಲ್ಲದೆ ಸಾಲ ಪಡೆಯಬಹುದಾಗಿದೆ ಎಂದೂ ಅವರು ಹೇಳಿದರು.

ಇದನ್ನೂ ಓದಿ: ರಾಹುಲ್ ಗಾಂಧಿ ದಲಿತ ಯುವತಿಯನ್ನು ಮದುವೆಯಾಗಲಿ..ನಮ್ಮ ಇಲಾಖೆಯಿಂದ 2.5 ಲಕ್ಷ ರೂ. ಕೊಡುತ್ತೇನೆ: ರಾಮದಾಸ್​ ಅಠಾವಳೆ

ರಾಜ್ಯದ ಗೋಹತ್ಯೆ ನಿಷೇಧ ಕಾಯ್ದೆ, ಮರಾಠ ನಿಗಮ ಸ್ಥಾಪನೆ ನಿರ್ಧಾರವನ್ನು ಸಮರ್ಥಿಸಿಕೊಂಡ ರಾಮದಾಸ್ ಅಠಾವಳೆ

Published On - 2:46 pm, Sun, 11 July 21

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ