AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sun Halo ಬೆಂಗಳೂರಿನ ತಿಳಿ ಆಗಸದಲ್ಲಿ ಸೂರ್ಯನ ಸುತ್ತ ಬೆಳಕಿನ ಉಂಗುರ, ಏನಿದು ಸೌರಪ್ರಭೆ?

Sun Halo in Bengaluru: ಸೂರ್ಯನ ಸುತ್ತಲೂ ಗೋಚರಿಸಿದ ಈ ಉಂಗುರಾಕೃತಿಯೇ ಸೌರಪ್ರಭೆ (Sun Halo). ತಿಳಿ ಆಗಸದಲ್ಲಿ ಗೋಚರಿಸಿದ ಈ ವಿದ್ಯಮಾನವನ್ನು ಹಲವಾರು ಮಂದಿ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿದ್ದಾರೆ

Sun Halo ಬೆಂಗಳೂರಿನ ತಿಳಿ ಆಗಸದಲ್ಲಿ ಸೂರ್ಯನ ಸುತ್ತ ಬೆಳಕಿನ ಉಂಗುರ, ಏನಿದು ಸೌರಪ್ರಭೆ?
ಸೌರ ಪ್ರಭೆ (ಕೃಪೆ: ಸಂಯುಕ್ತಾ ಹೊರನಾಡ್ ಟ್ವಿಟರ್ ಖಾತೆ)
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on:May 24, 2021 | 3:36 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆ ಸರಿ ಸುಮಾರು 11ಗಂಟೆಯ ವೇಳೆಗೆ ಸೂರ್ಯನ ಸುತ್ತ ಸಂಪೂರ್ಣ ಕಾಮನಬಿಲ್ಲು ಗೋಚರಿಸಿದೆ. ಸೂರ್ಯನ ಸುತ್ತಲೂ ಗೋಚರಿಸಿದ ಈ ಉಂಗುರಾಕೃತಿಯೇ ಸೌರಪ್ರಭೆ (Sun Halo). ತಿಳಿ ಆಗಸದಲ್ಲಿ ಗೋಚರಿಸಿದ ಈ ವಿದ್ಯಮಾನವನ್ನು ಹಲವಾರು ಮಂದಿ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿದ್ದಾರೆ.

ಏನಿದು ಸೌರಪ್ರಭೆ? ಇದು ಅನೇಕ ಜನರಿಗೆ ಅತ್ಯಂತ ವಿಶಿಷ್ಟವಾದರೂ, ಈ ವಿದ್ಯಮಾನವು ಅಪರೂಪವಲ್ಲ. ‘ಸನ್ ಹ್ಯಾಲೊ’ ಅಥವಾ ಸೌರಪ್ರಭೆ ಎಂದು ಕರೆಯಲ್ಪಡುವ ಇದು ಮೋಡಗಳೊಳಗೆ ಇರುವ ಮಂಜುಗಡ್ಡೆಯ ಹರಳುಗಳಿಗೆ ಸೂರ್ಯನ ಬೆಳಕು ಪ್ರತಿಫಲಿಸಿದಾಗ ಉಂಟಾಗುವ ವಿದ್ಯಮಾನವಾಗಿದೆ. ಸೂರ್ಯನ ಸುತ್ತಲಿನ ತ್ರಿಜ್ಯದಿಂದಾಗಿ ಇದನ್ನು ’22 ಡಿಗ್ರಿ ಹ್ಯಾಲೊ ಎಂದೂ ಕರೆಯುತ್ತಾರೆ.

22-ಡಿಗ್ರಿ ಸೌರಪ್ರಭೆ ಆಪ್ಟಿಕಲ್ ವಿದ್ಯಮಾನವಾಗಿದ್ದು ಅದು ಮಂಜುಗಡ್ಡೆಯ ಹರಳುಳೆಡಿಯಲ್ಲಿ ಸೂರ್ಯರಶ್ಮಿಯ ಪ್ರತಿಫಲನವಾಗಿದೆ. ಸೂರ್ಯನ ಪ್ರಭಾವಲಯ ಅಥವಾ ಸಾಂದರ್ಭಿಕವಾಗಿ ಚಂದ್ರನನ್ನು (ಚಂದ್ರನ ಉಂಗುರ ಅಥವಾ ಚಳಿಗಾಲದ ಪ್ರಭಾವಲಯ ಎಂದೂ ಕರೆಯುತ್ತಾರೆ), ಸಿರಸ್ ಮೋಡಗಳಲ್ಲಿ (ಚದುರಿರುವ ಕೂದಲಿನಂತಿರುವ ಚಿಕ್ಕ ಮೋಡಗಳು) ಇರುವ ಷಟ್ಬುಜಾಕೃತಿಯ ಹಿಮದ ಹರಳುಗಳ ಮೂಲಕ ಸೂರ್ಯನ ಅಥವಾ ಚಂದ್ರನ ಕಿರಣಗಳು ಹಾಯ್ದು ವಕ್ರೀಭವನಗೊಂಡಾಗ ಇದು ಸಂಭವಿಸುತ್ತದೆ. ಈ ಮೋಡಗಳು ಲಕ್ಷಾಂತರ ಸಣ್ಣ ಮಂಜುಗಡ್ಡೆಯ ಹರಳುಗಳನನು ಒಳಗೊಂಡಿರುತ್ತವೆ. ಇಲ್ಲಿ ಬೆಳಕು ಬೆಳಕನ್ನು ವಕ್ರೀಭವನಕ್ಕೊಳಗಾಗ, ವಿಭಜಿಸಿ ಮತ್ತು ಪ್ರತಿಫಲಿಸುವಾಗ ವೃತ್ತಾಕಾರದ ಮಳೆಬಿಲ್ಲು ರೂಪುಗೊಳ್ಳುತ್ತದೆ.

ಸೂರ್ಯ ಅಥವಾ ಚಂದ್ರನ ಸುತ್ತ ಒಂದು ಉಂಗುರ ರಚನೆಗೆ ಕಾರಣವಾಗುವ ಮತ್ತೊಂದು ವಿದ್ಯಮಾನವೇ -ಕರೋನಾ. ಆದಾಗ್ಯೂ, 22-ಡಿಗ್ರಿ ಪ್ರಭಾವಲಯಕ್ಕಿಂತ ಭಿನ್ನವಾಗಿದ್ದು ಇದು ಮಂಜುಗಡ್ಡೆಯ ಹರಳುಗಳಿಗೆ ಬದಲಾಗಿ ನೀರಿನ ಹನಿಗಳಿಂದ ಉತ್ಪತ್ತಿಯಾಗುತ್ತದೆ. ಇದು ತುಂಬಾ ಚಿಕ್ಕದಾಗಿದೆ ಮತ್ತು ಹೆಚ್ಚು ವರ್ಣಮಯವಾಗಿರುತ್ತದೆ.

ಇದನ್ನೂ ಓದಿ: Cyclone Yaas: 4 ದಿನ ಮುಂಚೆಯೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಇದು ಪ್ರಚಂಡ ಮಾರುತ ಯಾಸ್​ ಪರಿಣಾಮ: ಏನಿದರ ಪ್ರಕೋಪ?

‘ಅಲೋಪಥಿ ಬಗ್ಗೆ ನೀವಾಡಿದ ಮಾತುಗಳು ಸರಿಯಲ್ಲ..ಕೊವಿಡ್ ವಾರಿಯರ್ಸ್​ಗೆ ಅಗೌರವ ತೋರಿದ್ದೀರಿ’-ಬಾಬಾ ರಾಮ್​ದೇವ್​ಗೆ ಡಾ.ಹರ್ಷವರ್ಧನ್ ಪತ್ರ

Published On - 2:13 pm, Mon, 24 May 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ