AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sun Halo ಬೆಂಗಳೂರಿನ ತಿಳಿ ಆಗಸದಲ್ಲಿ ಸೂರ್ಯನ ಸುತ್ತ ಬೆಳಕಿನ ಉಂಗುರ, ಏನಿದು ಸೌರಪ್ರಭೆ?

Sun Halo in Bengaluru: ಸೂರ್ಯನ ಸುತ್ತಲೂ ಗೋಚರಿಸಿದ ಈ ಉಂಗುರಾಕೃತಿಯೇ ಸೌರಪ್ರಭೆ (Sun Halo). ತಿಳಿ ಆಗಸದಲ್ಲಿ ಗೋಚರಿಸಿದ ಈ ವಿದ್ಯಮಾನವನ್ನು ಹಲವಾರು ಮಂದಿ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿದ್ದಾರೆ

Sun Halo ಬೆಂಗಳೂರಿನ ತಿಳಿ ಆಗಸದಲ್ಲಿ ಸೂರ್ಯನ ಸುತ್ತ ಬೆಳಕಿನ ಉಂಗುರ, ಏನಿದು ಸೌರಪ್ರಭೆ?
ಸೌರ ಪ್ರಭೆ (ಕೃಪೆ: ಸಂಯುಕ್ತಾ ಹೊರನಾಡ್ ಟ್ವಿಟರ್ ಖಾತೆ)
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on:May 24, 2021 | 3:36 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆ ಸರಿ ಸುಮಾರು 11ಗಂಟೆಯ ವೇಳೆಗೆ ಸೂರ್ಯನ ಸುತ್ತ ಸಂಪೂರ್ಣ ಕಾಮನಬಿಲ್ಲು ಗೋಚರಿಸಿದೆ. ಸೂರ್ಯನ ಸುತ್ತಲೂ ಗೋಚರಿಸಿದ ಈ ಉಂಗುರಾಕೃತಿಯೇ ಸೌರಪ್ರಭೆ (Sun Halo). ತಿಳಿ ಆಗಸದಲ್ಲಿ ಗೋಚರಿಸಿದ ಈ ವಿದ್ಯಮಾನವನ್ನು ಹಲವಾರು ಮಂದಿ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿದ್ದಾರೆ.

ಏನಿದು ಸೌರಪ್ರಭೆ? ಇದು ಅನೇಕ ಜನರಿಗೆ ಅತ್ಯಂತ ವಿಶಿಷ್ಟವಾದರೂ, ಈ ವಿದ್ಯಮಾನವು ಅಪರೂಪವಲ್ಲ. ‘ಸನ್ ಹ್ಯಾಲೊ’ ಅಥವಾ ಸೌರಪ್ರಭೆ ಎಂದು ಕರೆಯಲ್ಪಡುವ ಇದು ಮೋಡಗಳೊಳಗೆ ಇರುವ ಮಂಜುಗಡ್ಡೆಯ ಹರಳುಗಳಿಗೆ ಸೂರ್ಯನ ಬೆಳಕು ಪ್ರತಿಫಲಿಸಿದಾಗ ಉಂಟಾಗುವ ವಿದ್ಯಮಾನವಾಗಿದೆ. ಸೂರ್ಯನ ಸುತ್ತಲಿನ ತ್ರಿಜ್ಯದಿಂದಾಗಿ ಇದನ್ನು ’22 ಡಿಗ್ರಿ ಹ್ಯಾಲೊ ಎಂದೂ ಕರೆಯುತ್ತಾರೆ.

22-ಡಿಗ್ರಿ ಸೌರಪ್ರಭೆ ಆಪ್ಟಿಕಲ್ ವಿದ್ಯಮಾನವಾಗಿದ್ದು ಅದು ಮಂಜುಗಡ್ಡೆಯ ಹರಳುಳೆಡಿಯಲ್ಲಿ ಸೂರ್ಯರಶ್ಮಿಯ ಪ್ರತಿಫಲನವಾಗಿದೆ. ಸೂರ್ಯನ ಪ್ರಭಾವಲಯ ಅಥವಾ ಸಾಂದರ್ಭಿಕವಾಗಿ ಚಂದ್ರನನ್ನು (ಚಂದ್ರನ ಉಂಗುರ ಅಥವಾ ಚಳಿಗಾಲದ ಪ್ರಭಾವಲಯ ಎಂದೂ ಕರೆಯುತ್ತಾರೆ), ಸಿರಸ್ ಮೋಡಗಳಲ್ಲಿ (ಚದುರಿರುವ ಕೂದಲಿನಂತಿರುವ ಚಿಕ್ಕ ಮೋಡಗಳು) ಇರುವ ಷಟ್ಬುಜಾಕೃತಿಯ ಹಿಮದ ಹರಳುಗಳ ಮೂಲಕ ಸೂರ್ಯನ ಅಥವಾ ಚಂದ್ರನ ಕಿರಣಗಳು ಹಾಯ್ದು ವಕ್ರೀಭವನಗೊಂಡಾಗ ಇದು ಸಂಭವಿಸುತ್ತದೆ. ಈ ಮೋಡಗಳು ಲಕ್ಷಾಂತರ ಸಣ್ಣ ಮಂಜುಗಡ್ಡೆಯ ಹರಳುಗಳನನು ಒಳಗೊಂಡಿರುತ್ತವೆ. ಇಲ್ಲಿ ಬೆಳಕು ಬೆಳಕನ್ನು ವಕ್ರೀಭವನಕ್ಕೊಳಗಾಗ, ವಿಭಜಿಸಿ ಮತ್ತು ಪ್ರತಿಫಲಿಸುವಾಗ ವೃತ್ತಾಕಾರದ ಮಳೆಬಿಲ್ಲು ರೂಪುಗೊಳ್ಳುತ್ತದೆ.

ಸೂರ್ಯ ಅಥವಾ ಚಂದ್ರನ ಸುತ್ತ ಒಂದು ಉಂಗುರ ರಚನೆಗೆ ಕಾರಣವಾಗುವ ಮತ್ತೊಂದು ವಿದ್ಯಮಾನವೇ -ಕರೋನಾ. ಆದಾಗ್ಯೂ, 22-ಡಿಗ್ರಿ ಪ್ರಭಾವಲಯಕ್ಕಿಂತ ಭಿನ್ನವಾಗಿದ್ದು ಇದು ಮಂಜುಗಡ್ಡೆಯ ಹರಳುಗಳಿಗೆ ಬದಲಾಗಿ ನೀರಿನ ಹನಿಗಳಿಂದ ಉತ್ಪತ್ತಿಯಾಗುತ್ತದೆ. ಇದು ತುಂಬಾ ಚಿಕ್ಕದಾಗಿದೆ ಮತ್ತು ಹೆಚ್ಚು ವರ್ಣಮಯವಾಗಿರುತ್ತದೆ.

ಇದನ್ನೂ ಓದಿ: Cyclone Yaas: 4 ದಿನ ಮುಂಚೆಯೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಇದು ಪ್ರಚಂಡ ಮಾರುತ ಯಾಸ್​ ಪರಿಣಾಮ: ಏನಿದರ ಪ್ರಕೋಪ?

‘ಅಲೋಪಥಿ ಬಗ್ಗೆ ನೀವಾಡಿದ ಮಾತುಗಳು ಸರಿಯಲ್ಲ..ಕೊವಿಡ್ ವಾರಿಯರ್ಸ್​ಗೆ ಅಗೌರವ ತೋರಿದ್ದೀರಿ’-ಬಾಬಾ ರಾಮ್​ದೇವ್​ಗೆ ಡಾ.ಹರ್ಷವರ್ಧನ್ ಪತ್ರ

Published On - 2:13 pm, Mon, 24 May 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ