AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Unlock‌ 3.O: ಇಂದಿನಿಂದ ಫ್ರೀಡೌನ್ ಜೀವನ ಆರಂಭ​, ಆದರೆ?

ಬೆಂಗಳೂರು: ಮಧ್ಯರಾತ್ರಿಯಿಂದ್ಲೇ ದೇಶಾದ್ಯಂತ ಅನ್‌ಲಾಕ್‌ 3.0 ಜಾರಿಯಾಗಿದೆ. ಕಂಟೇನ್ಮೆಂಟ್‌ ಜೋನ್‌ಗಳನ್ನ ಹೊರತುಪಡಿಸಿ ಉಳಿದೆಡೆ ಅನ್‌ಲಾಕ್‌ 3.0 ನಿಯಮಗಳು ಅನ್ವಯವಾಗಲಿದ್ದು, ಕರ್ನಾಟಕದಲ್ಲೂ ಕೂಡ ಕೇಂದ್ರದ ಮಾರ್ಗಸೂಚಿಯನ್ನ ಯಥಾವತ್ತಾಗಿ ಪಾಲನೆ ಮಾಡಲಾಗಿದೆ. ನೈಟ್‌ ಕರ್ಫ್ಯೂ ಎಂಡ್.. ಸಂಡೇ ಲಾಕ್‌ಡೌನ್‌ಗೂ ಬ್ರೇಕ್..! ಕಳೆದ ಬುಧವಾರ ಕೇಂದ್ರ ಸರ್ಕಾರ ಅನ್‌ಲಾಕ್‌ 3.O ಮಾರ್ಗಸೂಚಿಯನ್ನ ಬಿಡುಗಡೆ ಮಾಡಿತ್ತು. ಅದೇ ಮಾರ್ಗಸೂಚಿಯನ್ನೇ ರಾಜ್ಯ ಸರ್ಕಾರವೂ ಪಾಲನೆ ಮಾಡಿದ್ದು, ಇಂದಿನಿಂದ ಜಾರಿಗೆ ಬಂದಿದೆ. ದಿನೇ ದಿನೆ ಸೋಂಕು ಹೆಚ್ಚಳವಾಗಿರೋದ್ರಿಂದ ಶಾಲಾ ಕಾಲೇಜು ಮತ್ತು ಖಾಸಗಿ ಕೋಚಿಂಗ್ ಸೆಂಟರ್​ಗಳ […]

Unlock‌ 3.O: ಇಂದಿನಿಂದ ಫ್ರೀಡೌನ್ ಜೀವನ ಆರಂಭ​, ಆದರೆ?
KUSHAL V
|

Updated on: Aug 01, 2020 | 7:18 AM

Share

ಬೆಂಗಳೂರು: ಮಧ್ಯರಾತ್ರಿಯಿಂದ್ಲೇ ದೇಶಾದ್ಯಂತ ಅನ್‌ಲಾಕ್‌ 3.0 ಜಾರಿಯಾಗಿದೆ. ಕಂಟೇನ್ಮೆಂಟ್‌ ಜೋನ್‌ಗಳನ್ನ ಹೊರತುಪಡಿಸಿ ಉಳಿದೆಡೆ ಅನ್‌ಲಾಕ್‌ 3.0 ನಿಯಮಗಳು ಅನ್ವಯವಾಗಲಿದ್ದು, ಕರ್ನಾಟಕದಲ್ಲೂ ಕೂಡ ಕೇಂದ್ರದ ಮಾರ್ಗಸೂಚಿಯನ್ನ ಯಥಾವತ್ತಾಗಿ ಪಾಲನೆ ಮಾಡಲಾಗಿದೆ.

ನೈಟ್‌ ಕರ್ಫ್ಯೂ ಎಂಡ್.. ಸಂಡೇ ಲಾಕ್‌ಡೌನ್‌ಗೂ ಬ್ರೇಕ್..! ಕಳೆದ ಬುಧವಾರ ಕೇಂದ್ರ ಸರ್ಕಾರ ಅನ್‌ಲಾಕ್‌ 3.O ಮಾರ್ಗಸೂಚಿಯನ್ನ ಬಿಡುಗಡೆ ಮಾಡಿತ್ತು. ಅದೇ ಮಾರ್ಗಸೂಚಿಯನ್ನೇ ರಾಜ್ಯ ಸರ್ಕಾರವೂ ಪಾಲನೆ ಮಾಡಿದ್ದು, ಇಂದಿನಿಂದ ಜಾರಿಗೆ ಬಂದಿದೆ. ದಿನೇ ದಿನೆ ಸೋಂಕು ಹೆಚ್ಚಳವಾಗಿರೋದ್ರಿಂದ ಶಾಲಾ ಕಾಲೇಜು ಮತ್ತು ಖಾಸಗಿ ಕೋಚಿಂಗ್ ಸೆಂಟರ್​ಗಳ ಓಪನ್‌ಗೆ ಸರ್ಕಾರ ಅನುಮತಿ ಕೊಟ್ಟಿಲ್ಲ. ನೈಟ್‌ ಕರ್ಫ್ಯೂ ತೆರವು ಮಾಡೋದ್ರ ಜೊತೆಗೆ ಸಂಡೇ ಲಾಕ್‌ಡೌನ್‌ ಕೂಡ ಎಂಡ್‌ ಮಾಡಲಾಗಿದೆ. ಆದ್ರೆ ಕಂಟೇನ್‌ಮೆಂಟ್‌ ಜೋನ್‌ಗಳಲ್ಲಿ ಇದ್ಯಾವುದೂ ಅನ್ವಯ ಆಗೋದಿಲ್ಲ. ಕಂಟೇನ್ಮೆಂಟ್‌ ಜೋನ್‌ಗಳಲ್ಲಿ ಲಾಕ್‌ಡೌನ್ ನಿಯಮಗಳೇ ಜಾರಿಯಲ್ಲಿರಲಿದೆ.

ಅನ್​ಲಾಕ್​ 3.0 ರೂಲ್ಸ್ 1. ಇಂದಿನಿಂದ ನೈಟ್ ಕರ್ಫ್ಯೂಗೆ ಕಂಪ್ಲೀಟ್ ಗುಡ್ ಬೈ 2. ರಾತ್ರಿ ವೇಳೆ ಜನ, ವಾಹನ ಸಂಚಾರಕ್ಕೆ ಇಲ್ಲ ಯಾವುದೇ ಅಡೆತಡೆ 3.ಆಗಸ್ಟ್ 5ರಿಂದ ಯೋಗ ಸೆಂಟರ್, ಜಿಮ್ ಓಪನ್​ಗೆ ಅನುಮತಿ 4.ದೈಹಿಕ ಅಂತರ ಪಾಲಿಸಿ ಸ್ವಾತಂತ್ರ್ಯೋತ್ಸವ ಆಚರಣೆಗೆ ಅನುಮತಿ 5.ಶಾಲಾ-ಕಾಲೇಜು, ಕೋಚಿಂಗ್ ಸೆಂಟರ್​ ಆಗಸ್ಟ್​ 31ರವರೆಗೆ ಕ್ಲೋಸ್ 6.ಮೆಟ್ರೋ ಸಂಚಾರವಿಲ್ಲ, ಥಿಯೇಟರ್​ಗಳು, ಸ್ವಿಮ್ಮಿಂಗ್ ಪೂಲ್ಸ್ ಬಂದ್ 7.ಮನರಂಜನಾ ಪಾರ್ಕ್​ಗಳು, ಬಾರ್​ಗಳು, ಆಡಿಟೋರಿಯಂಗಳು ಬಂದ್ 8.ರಂಗ ಮಂದಿರಗಳು, ಕಲ್ಯಾಣ ಮಂಟಪಗಳ ರೀತಿಯ ಕೇಂದ್ರಗಳು ಬಂದ್ 9.ಧಾರ್ಮಿಕ, ರಾಜಕೀಯ, ಕ್ರೀಡೆ, ಶೈಕ್ಷಣಿಕ ಕಾರ್ಯಕ್ರಮಕ್ಕಿಲ್ಲ ಅನುಮತಿ 10.ಮನರಂಜನೆ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳಿಗಿಲ್ಲ ಅನುಮತಿ 11.ಮದುವೆಗೆ 50 ಜನ, ಅಂತ್ಯಕ್ರಿಯೆಯಲ್ಲಿ 20 ಜನರಿಗೆ ಮಾತ್ರ ಅನುಮತಿ

ಈ ಮೂಲಕ ಲಾಕ್​ಡೌನ್ ಸೀಲ್​ಡೌನ್​ನಲ್ಲಿ ಜೀವನ ಸಾಗಿಸಿದ್ದ ಜನ, ಇಂದಿನಿಂದ ಫ್ರೀಡೌನ್ ಜೀವನ ಆರಂಭಿಸಲಿದ್ದಾರೆ. ಸರ್ಕಾರ ಹೊಸ ರೂಲ್ಸ್ ಮೂಲಕ ಜನಜೀವನವನ್ನ, ಕೊರೊನಾಗೂ ಮುನ್ನ ಇದ್ದ ರೀತಿ ಸಾಮಾನ್ಯ ಸ್ಥಿತಿಗೆ ತರಲು ಪ್ರಯತ್ನಿಸುತ್ತಿದೆ. ಸರ್ಕಾರದ ಜೊತೆ ಜನ ಕೈ ಜೋಡಿಸಿದ್ರೆ, ಈ ಪ್ರಕ್ರಿಯೆ ಸುಲಭವಾಗಲಿದೆ. ಅಲ್ದೆ, ಕೊರೊನಾ ಮಹಾಮಾರಿಯ ವಿರುದ್ಧವೂ ಗೆಲುವು ಸಾಧಿಸಬಹುದಾಗಿದೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!