AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್​ಲಾಕ್ ಮಾಡುವುದು ಸುಲಭ ಆದರೆ, ಅನ್​ಲಾಕ್ ನಂತರ ವೈರಸ್ ಹರಡುವ ಸಾಧ್ಯತೆ‌ಯಿದೆ: ಗೌರವ್​ ಗುಪ್ತಾ

ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ನೈಟ್ ಕರ್ಫ್ಯೂ ಹಾಗೂ ವಿಕೇಂಡ್ ಕರ್ಫ್ಯೂ ಸಡಿಲಿಕೆ ಆಗಲಿದೆ. ಈ ಬಗ್ಗೆ ಅಧಿಕಾರಿಗಳ ಹಂತದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.

ಅನ್​ಲಾಕ್ ಮಾಡುವುದು ಸುಲಭ ಆದರೆ, ಅನ್​ಲಾಕ್ ನಂತರ ವೈರಸ್ ಹರಡುವ ಸಾಧ್ಯತೆ‌ಯಿದೆ: ಗೌರವ್​ ಗುಪ್ತಾ
ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ
TV9 Web
| Edited By: |

Updated on: Jul 02, 2021 | 12:23 PM

Share

ಬೆಂಗಳೂರು: ಅನ್​ಲಾಕ್ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್​ ಗುಪ್ತಾ ಕೊರೊನಾ‌ ಸೋಂಕಿತರ ಸಂಖ್ಯೆ ಕಡಿಮೆ ಆಗಿರುವ ಕಾರಣ ಎಲ್ಲಾ ಚಟುವಟಿಕೆಗಳನ್ನು ಓಪನ್ ಮಾಡಬೇಕಿದೆ.ಎಲ್ಲಾ ವ್ಯಾಪಾರ- ವ್ಯವಹಾರವನ್ನು ಆರಂಭಿಸಲು ಸಾಕಷ್ಟು ಜನ ಮನವಿ ಮಾಡಿಕೊಂಡಿದ್ದಾರೆ. ಆದರೆ ಅನ್​ಲಾಕ್ ಮಾಡುವುದು ಸುಲಭ ಆದರೆ, ಅನ್​ಲಾಕ್ ನಂತರ ವೈರಸ್ ಹರಡುವ ಸಾಧ್ಯತೆ‌ಯಿದೆ. ಸದ್ಯ ಬೃಹತ್ ಮಾರುಕಟ್ಟೆಗಳನ್ನು ಓಪನ್ ಮಾಡಲ್ಲ. ಮಾರುಕಟ್ಟೆಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಆದೇಶ ಆಗುತ್ತದೆ ಎಂದು ತಿಳಿಸಿದ್ದಾರೆ.

ಅನ್​ಲಾಕ್​ 3.0 ವಿಚಾರವಾಗಿ ಮಾತನಾಡಿದ ಅವರು ಥಿಯೇಟರ್​ಗಳು ತುಂಬಾ ಅಪಾಯಕಾರಿ ಇದ್ದ ಹಾಗೇ. ಎರಡ್ಮೂರು ಗಂಟೆಗಳ ಕಾಲ ಜನರು ಮುಚ್ಚಿದ ಕೋಣೆಯಲ್ಲಿ ಇರಬೇಕಾಗುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಥಿಯೇಟರ್​ಗಳನ್ನ ಓಪನ್ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ನೈಟ್ ಕರ್ಫ್ಯೂ ಹಾಗೂ ವಿಕೇಂಡ್ ಕರ್ಫ್ಯೂ ಸಡಿಲಿಕೆ ಆಗಲಿದೆ. ಈ ಬಗ್ಗೆ ಅಧಿಕಾರಿಗಳ ಹಂತದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.

ಸೋಮವಾರದಿಂದಲೇ ಮಾಲ್ ಓಪನ್ ಸಾಧ್ಯತೆ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆ ಪ್ರಾರಂಭಿಸಿದೆ. ತಜ್ಞರ ಸಲಹೆಗೆ ಅನುಸಾರವಾಗಿ ಈಗಾಗಲೇ ಅನ್​ಲಾಕ್​ 2.0 ಆರಂಭವಾಗಿದ್ದು, ಇದೀಗ ಜುಲೈ 5 ರಿಂದ ಅನ್​ಲಾಕ್​ 3.O ಜಾರಿಯಾಗಲಿದೆ. ಇದರಲ್ಲಿ ರಾಜ್ಯ ಸರ್ಕಾರ ಮಾಲ್​ಗೆ ರಿಲೀಫ್​ ನೀಡಲು ನಿರ್ಧರಿಸಿದೆ. ಇನ್ನು ಥಿಯೇಟರ್, ಪಬ್, ಕ್ಲಬ್, ಬಾರ್, ಸ್ವಿಮ್ಮಿಂಗ್ ಪೂಲ್​ಗಳಿಗೂ ರಿಲೀಫ್ ನೀಡುವ ಸಾಧ್ಯತೆ ಇದೆ.

ಅನ್​ಲಾಕ್ 3.O ನಲ್ಲಿ ನೈಟ್ ಕರ್ಫ್ಯೂ ಜಾರಿಗೆ ಬಂದಲ್ಲಿ ಮಾಲ್​ಗಳ ತೆರವು ಸಮಯದಲ್ಲಿ ಕೆಲವೊಂದು ಬದಲಾವಣೆಯಾಗಲಿದೆ. ಅದರಂತೆ ಬೆಳಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆವರೆಗೂ ಮಾಲ್​ಗಳು ಓಪನ್ ಮಾಡಲು ಯೋಜನೆ ರೂಪಿಸಲಾಗಿದೆ. ಸಾಮಾನ್ಯವಾಗಿ 10 ಗಂಟೆಗೆ ಓಪನ್ ಆಗುತ್ತಿದ್ದ ಮಾಲ್​ಗಳು. ನೈಟ್ ಕರ್ಫ್ಯೂ ಜಾರಿಗೆ ಬಂದರೆ, ಬೆಳಗ್ಗೆ ಬೇಗನೆ ಓಪನ್ ಮಾಡಲು ಯೋಜನೆ ರೂಪಿಸಲಾಗಿದೆ.

ಕೊರೊನಾ ಪಾಸಿಟಿವ್ ರೇಟ್ ಕಡಿಮೆ ಇದ್ದಲ್ಲಿ ಅನ್​ಲಾಕ್​ 3.O ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. ಅದರಂತೆ ರಾಜ್ಯದ ಪಾಸಿಟಿವ್ ರೇಟ್ ಗಮನದಲ್ಲಿರಿಸಿಕೊಂಡು ಮಾಲ್​ ಓಪನ್​ಗೆ ಮುಂದಾಗಿದೆ. ಇನ್ನು ಕಳೆದ ಎರಡೂವರೆ ತಿಂಗಳಿಂದ ಬಂದ್ ಆಗಿದ್ದ ಥಿಯೇಟರ್, ಪಬ್, ಬಾರ್, ಕ್ಲಬ್, ಸ್ವಿಮ್ಮಿಂಗ್ ಪೂಲ್​ಗಳಿಗೆ ಅನುಮತಿ ಕೊಡುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Unlock: 3ನೇ ಹಂತದ ಅನ್​ಲಾಕ್; ಸೋಮವಾರದಿಂದಲೇ ಮಾಲ್ ಓಪನ್ ಸಾಧ್ಯತೆ, ಷರತ್ತುಗಳು ಅನ್ವಯ

ಜನಸಾಮಾನ್ಯರ ಜೀವನ ಸಹಜ ಸ್ಥಿತಿಗೆ ತರಬೇಕಿದೆ, ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ: ಗೌರವ್ ಗುಪ್ತಾ

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ