AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್​ಲಾಕ್ ಮಾಡುವುದು ಸುಲಭ ಆದರೆ, ಅನ್​ಲಾಕ್ ನಂತರ ವೈರಸ್ ಹರಡುವ ಸಾಧ್ಯತೆ‌ಯಿದೆ: ಗೌರವ್​ ಗುಪ್ತಾ

ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ನೈಟ್ ಕರ್ಫ್ಯೂ ಹಾಗೂ ವಿಕೇಂಡ್ ಕರ್ಫ್ಯೂ ಸಡಿಲಿಕೆ ಆಗಲಿದೆ. ಈ ಬಗ್ಗೆ ಅಧಿಕಾರಿಗಳ ಹಂತದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.

ಅನ್​ಲಾಕ್ ಮಾಡುವುದು ಸುಲಭ ಆದರೆ, ಅನ್​ಲಾಕ್ ನಂತರ ವೈರಸ್ ಹರಡುವ ಸಾಧ್ಯತೆ‌ಯಿದೆ: ಗೌರವ್​ ಗುಪ್ತಾ
ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ
TV9 Web
| Edited By: |

Updated on: Jul 02, 2021 | 12:23 PM

Share

ಬೆಂಗಳೂರು: ಅನ್​ಲಾಕ್ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್​ ಗುಪ್ತಾ ಕೊರೊನಾ‌ ಸೋಂಕಿತರ ಸಂಖ್ಯೆ ಕಡಿಮೆ ಆಗಿರುವ ಕಾರಣ ಎಲ್ಲಾ ಚಟುವಟಿಕೆಗಳನ್ನು ಓಪನ್ ಮಾಡಬೇಕಿದೆ.ಎಲ್ಲಾ ವ್ಯಾಪಾರ- ವ್ಯವಹಾರವನ್ನು ಆರಂಭಿಸಲು ಸಾಕಷ್ಟು ಜನ ಮನವಿ ಮಾಡಿಕೊಂಡಿದ್ದಾರೆ. ಆದರೆ ಅನ್​ಲಾಕ್ ಮಾಡುವುದು ಸುಲಭ ಆದರೆ, ಅನ್​ಲಾಕ್ ನಂತರ ವೈರಸ್ ಹರಡುವ ಸಾಧ್ಯತೆ‌ಯಿದೆ. ಸದ್ಯ ಬೃಹತ್ ಮಾರುಕಟ್ಟೆಗಳನ್ನು ಓಪನ್ ಮಾಡಲ್ಲ. ಮಾರುಕಟ್ಟೆಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಆದೇಶ ಆಗುತ್ತದೆ ಎಂದು ತಿಳಿಸಿದ್ದಾರೆ.

ಅನ್​ಲಾಕ್​ 3.0 ವಿಚಾರವಾಗಿ ಮಾತನಾಡಿದ ಅವರು ಥಿಯೇಟರ್​ಗಳು ತುಂಬಾ ಅಪಾಯಕಾರಿ ಇದ್ದ ಹಾಗೇ. ಎರಡ್ಮೂರು ಗಂಟೆಗಳ ಕಾಲ ಜನರು ಮುಚ್ಚಿದ ಕೋಣೆಯಲ್ಲಿ ಇರಬೇಕಾಗುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಥಿಯೇಟರ್​ಗಳನ್ನ ಓಪನ್ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ನೈಟ್ ಕರ್ಫ್ಯೂ ಹಾಗೂ ವಿಕೇಂಡ್ ಕರ್ಫ್ಯೂ ಸಡಿಲಿಕೆ ಆಗಲಿದೆ. ಈ ಬಗ್ಗೆ ಅಧಿಕಾರಿಗಳ ಹಂತದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.

ಸೋಮವಾರದಿಂದಲೇ ಮಾಲ್ ಓಪನ್ ಸಾಧ್ಯತೆ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆ ಪ್ರಾರಂಭಿಸಿದೆ. ತಜ್ಞರ ಸಲಹೆಗೆ ಅನುಸಾರವಾಗಿ ಈಗಾಗಲೇ ಅನ್​ಲಾಕ್​ 2.0 ಆರಂಭವಾಗಿದ್ದು, ಇದೀಗ ಜುಲೈ 5 ರಿಂದ ಅನ್​ಲಾಕ್​ 3.O ಜಾರಿಯಾಗಲಿದೆ. ಇದರಲ್ಲಿ ರಾಜ್ಯ ಸರ್ಕಾರ ಮಾಲ್​ಗೆ ರಿಲೀಫ್​ ನೀಡಲು ನಿರ್ಧರಿಸಿದೆ. ಇನ್ನು ಥಿಯೇಟರ್, ಪಬ್, ಕ್ಲಬ್, ಬಾರ್, ಸ್ವಿಮ್ಮಿಂಗ್ ಪೂಲ್​ಗಳಿಗೂ ರಿಲೀಫ್ ನೀಡುವ ಸಾಧ್ಯತೆ ಇದೆ.

ಅನ್​ಲಾಕ್ 3.O ನಲ್ಲಿ ನೈಟ್ ಕರ್ಫ್ಯೂ ಜಾರಿಗೆ ಬಂದಲ್ಲಿ ಮಾಲ್​ಗಳ ತೆರವು ಸಮಯದಲ್ಲಿ ಕೆಲವೊಂದು ಬದಲಾವಣೆಯಾಗಲಿದೆ. ಅದರಂತೆ ಬೆಳಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆವರೆಗೂ ಮಾಲ್​ಗಳು ಓಪನ್ ಮಾಡಲು ಯೋಜನೆ ರೂಪಿಸಲಾಗಿದೆ. ಸಾಮಾನ್ಯವಾಗಿ 10 ಗಂಟೆಗೆ ಓಪನ್ ಆಗುತ್ತಿದ್ದ ಮಾಲ್​ಗಳು. ನೈಟ್ ಕರ್ಫ್ಯೂ ಜಾರಿಗೆ ಬಂದರೆ, ಬೆಳಗ್ಗೆ ಬೇಗನೆ ಓಪನ್ ಮಾಡಲು ಯೋಜನೆ ರೂಪಿಸಲಾಗಿದೆ.

ಕೊರೊನಾ ಪಾಸಿಟಿವ್ ರೇಟ್ ಕಡಿಮೆ ಇದ್ದಲ್ಲಿ ಅನ್​ಲಾಕ್​ 3.O ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. ಅದರಂತೆ ರಾಜ್ಯದ ಪಾಸಿಟಿವ್ ರೇಟ್ ಗಮನದಲ್ಲಿರಿಸಿಕೊಂಡು ಮಾಲ್​ ಓಪನ್​ಗೆ ಮುಂದಾಗಿದೆ. ಇನ್ನು ಕಳೆದ ಎರಡೂವರೆ ತಿಂಗಳಿಂದ ಬಂದ್ ಆಗಿದ್ದ ಥಿಯೇಟರ್, ಪಬ್, ಬಾರ್, ಕ್ಲಬ್, ಸ್ವಿಮ್ಮಿಂಗ್ ಪೂಲ್​ಗಳಿಗೆ ಅನುಮತಿ ಕೊಡುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Unlock: 3ನೇ ಹಂತದ ಅನ್​ಲಾಕ್; ಸೋಮವಾರದಿಂದಲೇ ಮಾಲ್ ಓಪನ್ ಸಾಧ್ಯತೆ, ಷರತ್ತುಗಳು ಅನ್ವಯ

ಜನಸಾಮಾನ್ಯರ ಜೀವನ ಸಹಜ ಸ್ಥಿತಿಗೆ ತರಬೇಕಿದೆ, ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ: ಗೌರವ್ ಗುಪ್ತಾ

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು