AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್​ ರೇವಣ್ಣಗೆ ಮತ್ತೊಂದು ಶಾಕ್

ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣರಿಗೆ ಮತ್ತೆ ಹಿನ್ನಡೆಯಾಗಿದೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಸಲ್ಲಿಸಿದ್ದ 'ಬಿ' ರಿಪೋರ್ಟ್ ಅನ್ನು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ತಿರಸ್ಕರಿಸಿತ್ತು. ಜೊತೆಗೆ ಮರು ತನಿಖೆಗೆ ಕೋರ್ಟ್‌ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಇದೀಗ ಕೋರ್ಟ್​, ಸೂರಜ್ ರೇವಣ್ಣಗೆ ಮತ್ತೊಂದು ಶಾಕ್ ಕೊಟ್ಟಿದೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್​ ರೇವಣ್ಣಗೆ ಮತ್ತೊಂದು ಶಾಕ್
Suraj Revanna
Ramesha M
| Edited By: |

Updated on:Feb 17, 2026 | 7:30 PM

Share

ಬೆಂಗಳೂರು, (ಫೆಬ್ರವರಿ 17):  ಜೆಡಿಎಸ್ ಎಂಎಲ್​​​ಸಿ ಸೂರಜ್ ರೇವಣ್ಣ (Suraj Revanna) ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಮರುಪರಿಶೀಲನಾ‌ ಅರ್ಜಿಯನ್ನು ಕೋರ್ಟ್​ ವಜಾ ಮಾಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಆದೇಶ ಹೊರಡಿಸಿದ್ದಾರೆ.

ಇದೇ ಕೇಸಿನಲ್ಲಿ ಜೈಲಿಗೆ ಹೋಗಿದ್ದ ಸೂರಜ್

ಇನ್ನು ಜೆಡಿಎಸ್‌ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಡಾ.ಸೂರಜ್‌ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಬಳಿಕ ಸೂರಜ್‌ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿತ್ತು. ಈ ಹಿನ್ನೆಲೆ ಸೂರಜ್​ ಒಂದು ತಿಂಗಳ ಬಳಿಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು.

ಇದನ್ನೂ ಓದಿ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್​ ರೇವಣ್ಣಗೆ ಶಾಕ್ ಕೊಟ್ಟ ಕೋರ್ಟ್

ಪ್ರಕರಣದ ಹಿನ್ನೆಲೆ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 2024ರ ಜೂನ್ 22 ರಂದು ಸಂತ್ರಸ್ತ ದೂರು ನೀಡಿದ್ದರು. ಇದರ ಆಧಾರದಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್​​ಗಳ ಅಡಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಹಾಸನದ ಜಿಲ್ಲಾ ಪೊಲೀಸ್ ಠಾಣೆಗೆ ಸಂತ್ರಸ್ತ ದೂರು ನೀಡಲು ಆಗಮಿಸಿದ್ದರು. ಆದರೆ, ನಂತರ ಅದನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ವರ್ಗಾಯಿಸಲಾಗಿತ್ತು. ಅದರಂತೆ, ಜೂನ್ 23 ರಂದು ಸೂರಜ್ ರೇವಣ್ಣರನ್ನು ಬಂಧಿಸಲಾಗಿತ್ತು.

ಮತ್ತೊಂದೆಡೆ, ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎಂಬವರು ಸಂತ್ರಸ್ತನ ವಿರುದ್ಧ ಪ್ರತಿ ದೂರು ನೀಡಿದ್ದರು. ಸೂರಜ್ ರೇವಣ್ಣ ವಿರುದ್ಧ ದೂರುದಾರ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿ, ಐದು ಕೋಟಿ ರೂ. ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಬ್ಲ್ಯಾಕ್​​ಮೇಲ್ ಮಾಡಿದ್ದರು ಎಂದು ಶಿವಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಎಲ್ಲ ಬೆಳವಣಿಗೆಗಳ ನಂತರ ರಾಜ್ಯ ಸರ್ಕಾರ, ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:16 pm, Tue, 17 February 26

ಮುಂಬೈ​​ನಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜಾಗಿಂಗ್; ಕಣ್ಣೆತ್ತೂ ನೋಡದ ಜನ
ಮುಂಬೈ​​ನಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜಾಗಿಂಗ್; ಕಣ್ಣೆತ್ತೂ ನೋಡದ ಜನ
ಮನೆಗಾಗಿ ಕಾಯುತ್ತಿದ್ದ ಕೋಗಿಲು ನಿವಾಸಿಗಳಿಗೆ ಬಿಗ್ ಶಾಕ್
ಮನೆಗಾಗಿ ಕಾಯುತ್ತಿದ್ದ ಕೋಗಿಲು ನಿವಾಸಿಗಳಿಗೆ ಬಿಗ್ ಶಾಕ್
ರಸ್ತೆ ಮಧ್ಯೆ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರೂ ಬಾರದ ಆಂಬುಲೆನ್ಸ್
ರಸ್ತೆ ಮಧ್ಯೆ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರೂ ಬಾರದ ಆಂಬುಲೆನ್ಸ್
ಮುಂಬೈನಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್​​ಗೆ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮುಂಬೈನಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್​​ಗೆ ಮೋದಿಯಿಂದ ಅಪ್ಪುಗೆಯ ಸ್ವಾಗತ
CBSE ವಿದ್ಯಾರ್ಥಿಗಳು, ಪೋಷಕರು ನೋಡಲೇಬೇಕಾದ ಸ್ಟೋರಿ ಇದು
CBSE ವಿದ್ಯಾರ್ಥಿಗಳು, ಪೋಷಕರು ನೋಡಲೇಬೇಕಾದ ಸ್ಟೋರಿ ಇದು
ಬೈಕ್​​ ಗುದ್ದಿದ ರಭಸಕ್ಕೆ ಹಾರಿಬಿದ್ದು ಪ್ರಾಣಬಿಟ್ಟ ಯುವತಿ
ಬೈಕ್​​ ಗುದ್ದಿದ ರಭಸಕ್ಕೆ ಹಾರಿಬಿದ್ದು ಪ್ರಾಣಬಿಟ್ಟ ಯುವತಿ
ಮೊದಲು ಪ್ರಕಟವಾಗುವ PU ಇಂಟರ್​​​ನಲ್ ಮಾರ್ಕ್ಸ್​​ ಹೇಗೆ? ಎಲ್ಲಿ ನೋಡಬೇಕು?
ಮೊದಲು ಪ್ರಕಟವಾಗುವ PU ಇಂಟರ್​​​ನಲ್ ಮಾರ್ಕ್ಸ್​​ ಹೇಗೆ? ಎಲ್ಲಿ ನೋಡಬೇಕು?
W,W,W,W,W,W,W,W: ವಿಕೆಟ್ ಮೇಲೆ ವಿಕೆಟ್: ಶಮಿ ಬೆಂಕಿ ಬೌಲಿಂಗ್
W,W,W,W,W,W,W,W: ವಿಕೆಟ್ ಮೇಲೆ ವಿಕೆಟ್: ಶಮಿ ಬೆಂಕಿ ಬೌಲಿಂಗ್
‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಯಾವಾಗ? ಬಿಡುಗಡೆ ದಿನಾಂಕ ನಿಗದಿ
‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಯಾವಾಗ? ಬಿಡುಗಡೆ ದಿನಾಂಕ ನಿಗದಿ
30 ನಿಮಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯ ಜೀವ ಉಳಿಸಿದ ವೈದ್ಯೆ
30 ನಿಮಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯ ಜೀವ ಉಳಿಸಿದ ವೈದ್ಯೆ