AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Jyothi Scheme: ಗೃಹಜ್ಯೋತಿ ಯೋಜನೆಗೆ ಅಭೂತಪೂರ್ವ ರೆಸ್ಪಾನ್ಸ್​​: ಇಲ್ಲಿಯವರೆಗೆ ಅರ್ಜಿ ಸಲ್ಲಿಸಿದವರೆಷ್ಟು? ಇಲ್ಲಿದೆ ಅಂಕಿ-ಅಂಶ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಅಭೂತಪೂರ್ವ ಯಶಸ್ಸು ದೊರೆತಿದೆ. ಈ ಯಶಸ್ಸಿನ ಮೂಲಕ ಇಂಧನ ಇಲಾಖೆ ಹೊಸ ಮೈಲ್ಲಿಗಲ್ಲು ಸಾಧಿಸಿದೆ. ಅತ್ಯಂತ ವೇಗದಲ್ಲಿ ಗೃಹಜ್ಯೋತಿ ಯೋಜನೆ ರಾಜ್ಯದ ಜನರಿಗೆ ತಲುಪುತ್ತಿದ್ದು, ದಿನದಿಂದ ‌ದಿನಕ್ಕೆ ಅರ್ಜಿದಾರರ‌ ಸಂಖ್ಯೆ ‌ಏರಿಕೆ‌ಯಾಗುತ್ತಿದೆ.

Gruha Jyothi Scheme: ಗೃಹಜ್ಯೋತಿ ಯೋಜನೆಗೆ ಅಭೂತಪೂರ್ವ ರೆಸ್ಪಾನ್ಸ್​​: ಇಲ್ಲಿಯವರೆಗೆ ಅರ್ಜಿ ಸಲ್ಲಿಸಿದವರೆಷ್ಟು? ಇಲ್ಲಿದೆ ಅಂಕಿ-ಅಂಶ
ಗೃಹಜ್ಯೋತಿ ಯೋಜನೆ
Poornima Agali Nagaraj
| Edited By: |

Updated on: Jul 06, 2023 | 9:51 AM

Share

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ (Five Guarantees) ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ (Gruha Jyothi Scheme) ಅಭೂತಪೂರ್ವ ಯಶಸ್ಸು ದೊರೆತಿದೆ. ಈ ಯಶಸ್ಸಿನ ಮೂಲಕ ಇಂಧನ ಇಲಾಖೆ (Energy Department) ಹೊಸ ಮೈಲ್ಲಿಗಲ್ಲು ಸಾಧಿಸಿದೆ. ಅತ್ಯಂತ ವೇಗದಲ್ಲಿ ಗೃಹಜ್ಯೋತಿ ಯೋಜನೆ ರಾಜ್ಯದ ಜನರಿಗೆ ತಲುಪಲುತ್ತಿದ್ದು, ದಿನದಿಂದ ‌ದಿನಕ್ಕೆ ಅರ್ಜಿದಾರರ‌ ಸಂಖ್ಯೆ ‌ಏರಿಕೆ‌ಯಾಗುತ್ತಿದೆ. ಗೃಹಜ್ಯೋತಿ ಯೋಜನೆಗೆ ಅರ್ಜಿ ಆರಂಭವಾಗಿ 17 ದಿನಗಳಲ್ಲಿ ಒಂದು ಕೋಟಿ ಜನ ನೋಂದಣಿ ಮಾಡಿದ್ದಾರೆ. ಒಟ್ಟು 100,20,163ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆ ಆರಂಭ, ಯಾರಿಗೆ ವಿದ್ಯುತ್ ಫ್ರೀ, ಯಾರು ಬಿಲ್ ಕಟ್ಬೇಕು​? ಇಲ್ಲಿದೆ ವಿವರ

ನಿನ್ನೆ (ಜು.05) ಹೆಚ್ಚಿನ ಪ್ರಮಾಣದಲ್ಲಿ ಅರ್ಜಿ ಸಲ್ಲಕೆಯಾಗಿದ್ದವು. ಆದರೆ‌‌ ಇಂದು (ಜು.06) ದ್ವಿಮುಖವಾಗುವ ಸಾಧ್ಯತೆ ಇದೆ. ನಿನ್ನೆ ರಾತ್ರಿ 10.15ರ ವೇಳೆಗೆ ಒಟ್ಟು 2.13.465 ಲಕ್ಷ ಅರ್ಜಿದಾರರು ಅರ್ಜಿ ಸಲ್ಲಿಸಿದ್ದರು.

ಯಾವ ಯಾವ ಎಸ್ಕಾಂಗಳಲ್ಲಿ ಎಷ್ಟು ಅರ್ಜಿ ಸಲ್ಲಿಕೆ

  1. ಬೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 41.14.567 ಲಕ್ಷ ಜನರಿಂದ ಅರ್ಜಿ ಸಲ್ಲಿಕೆ‌
  2. ಚೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 15.35.045 ಲಕ್ಷ ಜನರಿಂದ ಅರ್ಜಿ ಸಲ್ಲಿಕೆ
  3. ಜೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 10.54.359 ಲಕ್ಷ ಜನರಿಂದ ಅರ್ಜಿ ಸಲ್ಲಿಕೆ
  4. ಹೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 21.09.473ಲಕ್ಷ ಗ್ರಾಹಕರಿಂದ‌ ಅರ್ಜಿ ಸಲ್ಲಿಕೆ
  5. ಮೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 11.56 294ಲಕ್ಷ ಗ್ರಾಹಕರಿಂದ ಅರ್ಜಿ ಸಲ್ಲಿಕೆ
  6. HRECS ವ್ಯಾಪ್ತಿಯಲ್ಲಿ ಒಟ್ಟು 50.425ಸಾವಿರ ಜನರಿಂದ ಅರ್ಜಿ ಸಲ್ಲಿಕೆ

ಇನ್ನು ಒಟ್ಟು ರಾಜ್ಯಾದ್ಯಂತ 100.20163ಲಕ್ಷ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ತಿಂಗಳ ಅಂತ್ಯದ ವೇಳೆಗೆ 1.50 ಕೋಟಿ ಅರ್ಜಿ ನೊಂದಣಿ ಆಗುವ ಸಾದ್ಯತೆ ಇದೆ. ಇಂಧನ ಇಲಾಖೆ ಈಗಾಗಲೆ ಅರ್ಜಿ ಸಲ್ಲಿಕೆಗೆ ವೈಬ್​​​​ಸೈಟ್​​ ಸರಳೀಕರಣ ‌ಮಾಡಿದೆ. ಗೃಹಜ್ಯೋತಿ ಯೋಜನೆ ಜುಲೈ 1 ರಿಂದ ಅನ್ವಯವಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಜು.25 ಆಗಿದೆ. ಜು. 25 ರ ನಂತರ ಅರ್ಜಿ ಸಲ್ಲಿಸಿದರೇ ಆಗಸ್ಟ್​ ತಿಂಗಳ ಉಚಿತ ವಿದ್ಯುತ್  ಸೆಪ್ಟೆಂಬರ್ ತಿಂಗಳಿಗೆ ಸಿಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ನರೇಗಾ ಹೆಸರು ಬದಲಾವಣೆ ವಿವಾದ, ರಾಜ್ಯಪಾಲರ ಭಾಷಣ
ನರೇಗಾ ಹೆಸರು ಬದಲಾವಣೆ ವಿವಾದ, ರಾಜ್ಯಪಾಲರ ಭಾಷಣ
ರೋಡ್​​ಶೋ ವೇಳೆ ಮೀನು  ಹಿಡಿದು ಕುಣಿದ ಪಟಾಕಿ ರಕ್ಷಿತಾ
ರೋಡ್​​ಶೋ ವೇಳೆ ಮೀನು  ಹಿಡಿದು ಕುಣಿದ ಪಟಾಕಿ ರಕ್ಷಿತಾ
ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ
ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ
ಬೀದಿಯಲ್ಲಿ ವ್ಯಕ್ತಿಯ ಬೆನ್ನಟ್ಟಿ ಚಾಕುವಿನಿಂದ ಇರಿದು ಪುರುಷರ ಗುಂಪು
ಬೀದಿಯಲ್ಲಿ ವ್ಯಕ್ತಿಯ ಬೆನ್ನಟ್ಟಿ ಚಾಕುವಿನಿಂದ ಇರಿದು ಪುರುಷರ ಗುಂಪು
ಮಾಲೀಕರ ಅಂತ್ಯಕ್ರಿಯೆಗೂ ಟ್ರ್ಯಾಕ್ಟರ್ ಹತ್ತಿ ಬಂದ ನಾಯಿ
ಮಾಲೀಕರ ಅಂತ್ಯಕ್ರಿಯೆಗೂ ಟ್ರ್ಯಾಕ್ಟರ್ ಹತ್ತಿ ಬಂದ ನಾಯಿ