ಇಡ್ಲಿ ಬಳಿಕ ಬಟಾಣಿಯಲ್ಲೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ: ಆರೋಗ್ಯ ಇಲಾಖೆ

ಹಸಿರು ಬಟಾಣಿಗಳಿಗೆ ಕೃತಕ ಬಣ್ಣದ ಬಳಕೆಯಿಂದಾಗಿ ಅವು ಅಸುರಕ್ಷಿತವಾಗಿರುವುದನ್ನು ಬೆಂಗಳೂರಿನ ಆಹಾರ ಇಲಾಖೆ ಪತ್ತೆಹಚ್ಚಿದೆ. 36 ಮಾದರಿಗಳ ಪರೀಕ್ಷೆಯಲ್ಲಿ 28 ಕ್ಕೂ ಹೆಚ್ಚು ಮಾದರಿಗಳು ಅಸುರಕ್ಷಿತ ಎಂದು ಕಂಡುಬಂದಿದೆ. ಇದರಿಂದಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಯಿದೆ. ಇದರ ಜೊತೆಗೆ, ಇಲಾಖೆ ಹೋಟೆಲ್‌ಗಳಲ್ಲಿ ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಿದೆ.

ಇಡ್ಲಿ ಬಳಿಕ ಬಟಾಣಿಯಲ್ಲೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ: ಆರೋಗ್ಯ ಇಲಾಖೆ
ಬಟಾಣಿ
Edited By:

Updated on: Feb 28, 2025 | 9:47 AM

ಬೆಂಗಳೂರು, ಫೆಬ್ರವರಿ 28: ಬೆಂಗಳೂರಿನ (Bengaluru) ಆಹಾರಪ್ರಿಯರಿಗೆ ಆಹಾರ ಇಲಾಖೆ (Food Department) ಮತ್ತೊಂದು ಶಾಕಿಂಗ್ ಸುದ್ದಿ ನೀಡಿದೆ. ಇಡ್ಲಿ ಬಳಿಕ ಹಸಿರು ಬಟಾಣಿ (Peas) ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗದಿಂದ ದೃಢಪಟ್ಟಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿನ ಸುಮಾರು 36 ಮಾದರಿಯ ಹಸಿರು ಬಟಾಣಿ ಮಾದರಿಗಳನ್ನು ಪಡೆದಿದ್ದ ಆಹಾರ ಇಲಾಖೆ ಅವುಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿತ್ತು. ಇದೀಗ ಪ್ರಯೋಗಾಲಯ ವರದಿ ಬಂದಿದ್ದು, 28 ಕ್ಕೂ ಹೆಚ್ಚು ಹಸಿರು ಬಟಾಣಿ ಮಾದರಿಗಳು ಅಸುರಕ್ಷಿತ ಎಂಬ ಶಾಕಿಂಗ್ ವಿಚಾರ ಬೆಳಕಿಗೆ ಬಂದಿದೆ.

ಬಟಾಣಿ ಆರೋಗ್ಯಕ್ಕೆ ಮಾರಕ ಹೇಗೆ?

ಬಟಾಣಿ ಹಸಿರಾಗಿ ಕಾಣಲು ಕೃತಕ ಬಣ್ಣ ಬಳಸಲಾಗುತ್ತಿದೆ ಎಂಬ ಅಂಶ ವರದಿಯಲ್ಲಿ ಉಲ್ಲೇಖವಾಗಿದೆ.
ಕಲರ್ ಬಳಕೆಯಿಂದ ಬಟಾಣಿ ಸಾಮಾನ್ಯಕ್ಕಿಂತ ಹೆಚ್ಚು ಹಸಿರಾಗಿ ಕಾಣುತ್ತಿದ್ದು, ಜನರನ್ನು ಆಕರ್ಶಿಸುತ್ತಿದೆ. ಬಟಾಣಿಯಲ್ಲಿ ಬಣ್ಣ ಬಳಕೆ ಮಾಡುತ್ತಿರುವುದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಬಟಾಣಿಯ ಬಣ್ಣ ಕಿಡ್ನಿಯ ಮೇಲೆ ಪರಿಣಾಮ ಬೀರಲಿದೆ ಎಂದು ವರದಿಯಲ್ಲಿ ಬಹಿರಂಗಗೊಂಡಿದೆ. ಈ ಹಿನ್ನೆಲೆಯಲ್ಲಿ ಅಲರ್ಟ್ ಆದ ಆರೋಗ್ಯ ಹಾಗೂ ಆಹಾರ ಸುರಕ್ಷತಾ ಇಲಾಖೆ ಕೃತಕ ಬಣ್ಣ ಬಳಸಿ ಬಟಾಣಿ ಮಾರಟ ಮಾಡುವ ವ್ಯಾಪರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ.

ಇದನ್ನೂ ಓದಿ: ಬೆಂಗಳೂರಿಗರಿಗೆ ಶಾಕಿಂಗ್ ಸುದ್ದಿ: ಇಡ್ಲಿ ತಿಂದರೆ ಬರಬಹುದು ಕ್ಯಾನ್ಸರ್‌! ಆಘಾತಕಾರಿ ವರದಿ ಬಹಿರಂಗ

ಇದನ್ನೂ ಓದಿ
ಗೋಬಿ, ಕಬಾಬ್​ ಬಳಿಕ ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ!
ಆಹಾರದಲ್ಲಿ ಕೃತಕ ಬಣ್ಣ ಬಳಸುವುದರಿಂದ ಏನೆಲ್ಲಾ ಆರೋಗ್ಯ ಸಮಸ್ಯೆ?
ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಬಳಕೆ ಬ್ಯಾನ್!
ಕಾಟನ್ ಕ್ಯಾಂಡಿ, ಗೋಬಿ ಮಂಚೂರಿಯನ್​ನಲ್ಲಿರುವ ರೊಡಮೈನ್-ಬಿ ಎಷ್ಟು ಅಪಾಯಕಾರಿ?

ಬಟಾಣಿಯಲ್ಲಿ ಕೃತಕ ಕಲರ್ ಬಳಕೆ ವಿಚಾರವಾಗಿ ಆಹಾರ ತಜ್ಞೆ ಡಾ. ಕೀರ್ತಿ ಹಿರಿಸಾವೆ ಮಾತನಾಡಿ, ಬಟಾಣಿಯಲ್ಲಿ ಕ್ಲೋರೋಫಿಲ್ ಅಂಶ ಇರುತ್ತೆ. ಹಸಿ ಬಟಾಣಿಗೆ ಮ್ಯಾಲಚೈಟ್ ಗ್ರೀನ್ ಬಳಕೆ ಮಾಡಲಾಗುತ್ತದೆ. ಇದು ಮನುಷ್ಯರ ಆರೋಗ್ಯಕ್ಕೆ ಒಳ್ಳೆಯದಲ್ಲ. ಈ ಮ್ಯಾಲಚೈಟ್ ಗ್ರೀನ್ ಕಿಡ್ನಿ ಮೇಲೆ ಪರಿಣಾಮ ಬೀರುತ್ತದೆ. ಇದು ಯೂರಿನ್ ಪ್ರೊಡಕ್ಷನ್ ಹಾಗೂ ಯೂರಿನ್​ ಪ್ಯೂರಿಫೈ ಮೇಲೆ ಪರಿಣಾಮ ಬೀರುತ್ತದೆ. ಈ ಹಿನ್ನೆಲೆ ಬಣ್ಣ ಹಾಕಿದ ಬಟಾಣಿ ಬಳಕೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಹೇಳಿದರು.

ಹೋಟೇಲ್​ಗಳ​ ಮೇಲೆ ಆಹಾರ ಇಲಾಖೆ ದಾಳಿ

ಆಹಾರ ಇಲಾಖೆ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಬೆಂಗಳೂರಿನ ವಿವಿಧ ನಗರದಲ್ಲಿನ ಹೋಟೆಲ್​ಗಳಿಗೆ ಭೇಟಿ ನೀಡಿದ್ದಾರೆ. ವಲಯವಾರು ಹೋಟೆಲ್​ಗಳ ಮೇಲೆ ರೇಡ್ ಮಾಡಿರುವ ಆಹಾರ ಇಲಾಖೆ ಅಧಿಕಾರಿಗಳು ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಬಳಕೆ ಆಗುತ್ತಿದಿಯಾ ಎಂದು ಪರಿಶೀಲನೆ ನಡೆಸಿದರು. ಪ್ಲಾಸ್ಟಿಕ್​ ಬಳಸುತ್ತಿರುವ ಹೋಟೆಲ್​ಗಳಿಗೆ ನೋಟಿಸ್ ಜೊತೆಗೆ ದಂಡ ಹಾಕುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:13 am, Fri, 28 February 25

Follow Us