Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ನಿರ್ಲಕ್ಷ್ಯ: ರೈತರಿಗೆ ಶಾಪವಾದ ಭದ್ರಾ ಮೇಲ್ದಂಡೆ ಯೋಜನೆ

ಚಿಕ್ಕಮಗಳೂರು: ದೇವರು ಕೊಟ್ರೂ ಪೂಜಾರಿ ಕೊಡ್ಲಿಲ್ಲ ಅಂತಾರಲ್ಲ ಹಾಗಾಗಿದೆ ಆ ಜಿಲ್ಲೆಯ ಅನ್ನದಾತರ ಪರಿಸ್ಥಿತಿ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಂಗಾರದಂತಹ ಬೆಳೆಯನ್ನ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಯಾರೋ ಮಾಡಿದ ತಪ್ಪಿಗಾಗಿ ಸಾವಿರಾರು ರೈತರು ಅಕ್ಷರಶಃ ಕಣ್ಣೀರು ಹಾಕುವಂತಾಗಿದೆ. ರೈತರಿಗೆ ವರವಾಗಬೇಕಿದ್ದ ಭದ್ರಾ ಮೇಲ್ದಂಡೆ ಯೋಜನೆ, ತರೀಕೆರೆ ತಾಲೂಕಿನ ಚೌಳಹಿರಿಯೂರು ಹೋಬಳಿಯ ಸಾವಿರಾರು ರೈತರಿಗೆ ಶಾಪವಾಗಿದೆ. ರೈತರ ಬದುಕಲ್ಲಿ ಚೆಲ್ಲಾಟವಾಡಿದ ಅಧಿಕಾರಿಗಳು: ತರೀಕೆರೆ ತಾಲೂಕಿನ ಲಕ್ಕವಳ್ಳಿ ಭದ್ರಾ ಡ್ಯಾಂನಿಂದ ಚಿತ್ರದುರ್ಗದ ಹಿರಿಯೂರಿನ ವಾಣಿ ವಿಲಾಸ ಸಾಗರಕ್ಕೆ ನೀರು ಹರಿಸಲು ಹೋಗಿ […]

ಅಧಿಕಾರಿಗಳ ನಿರ್ಲಕ್ಷ್ಯ: ರೈತರಿಗೆ ಶಾಪವಾದ ಭದ್ರಾ ಮೇಲ್ದಂಡೆ ಯೋಜನೆ
Follow us
ಸಾಧು ಶ್ರೀನಾಥ್​
|

Updated on:Dec 07, 2019 | 8:28 AM

ಚಿಕ್ಕಮಗಳೂರು: ದೇವರು ಕೊಟ್ರೂ ಪೂಜಾರಿ ಕೊಡ್ಲಿಲ್ಲ ಅಂತಾರಲ್ಲ ಹಾಗಾಗಿದೆ ಆ ಜಿಲ್ಲೆಯ ಅನ್ನದಾತರ ಪರಿಸ್ಥಿತಿ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಂಗಾರದಂತಹ ಬೆಳೆಯನ್ನ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಯಾರೋ ಮಾಡಿದ ತಪ್ಪಿಗಾಗಿ ಸಾವಿರಾರು ರೈತರು ಅಕ್ಷರಶಃ ಕಣ್ಣೀರು ಹಾಕುವಂತಾಗಿದೆ. ರೈತರಿಗೆ ವರವಾಗಬೇಕಿದ್ದ ಭದ್ರಾ ಮೇಲ್ದಂಡೆ ಯೋಜನೆ, ತರೀಕೆರೆ ತಾಲೂಕಿನ ಚೌಳಹಿರಿಯೂರು ಹೋಬಳಿಯ ಸಾವಿರಾರು ರೈತರಿಗೆ ಶಾಪವಾಗಿದೆ.

ರೈತರ ಬದುಕಲ್ಲಿ ಚೆಲ್ಲಾಟವಾಡಿದ ಅಧಿಕಾರಿಗಳು: ತರೀಕೆರೆ ತಾಲೂಕಿನ ಲಕ್ಕವಳ್ಳಿ ಭದ್ರಾ ಡ್ಯಾಂನಿಂದ ಚಿತ್ರದುರ್ಗದ ಹಿರಿಯೂರಿನ ವಾಣಿ ವಿಲಾಸ ಸಾಗರಕ್ಕೆ ನೀರು ಹರಿಸಲು ಹೋಗಿ ಅಧಿಕಾರಿಗಳು ರೈತರ ಬದುಕಲ್ಲಿ ಚೆಲ್ಲಾಟವಾಡಿದ್ದಾರೆ. ಸಮರ್ಪಕ ಚಾನೆಲ್ ಇಲ್ಲದ ಕಾರಣ ಡ್ಯಾಂ ನೀರು, ರೈತರ ಜಮೀನುಗಳ ಮೇಲೆ ಬಂದು ಕಳೆದ ಕೆಲವು ದಿನಗಳಿಂದಲೂ ಹೊಲಗದ್ದೆಗಳು ಮುಳುಗಡೆಯಾಗಿವೆ. ಚೌಳಹಿರಿಯೂರು ಹೋಬಳಿಯ ಹೆಚ್.ತಿಮ್ಮಾಪುರ, ಹನುಮನಹಳ್ಳಿ, ಕಲ್ಕೆರೆ ಗಡಿಭಾಗ, ಚಿಕ್ಕಬಳ್ಳೇಕೆರೆ, ಹಡಗಲು, ಆಸಂದಿ ಸೇರಿದಂತೆ ಹತ್ತಾರು ಹಳ್ಳಿಗಳ ರೈತರ ಬದುಕು ಅಕ್ಷರಶಃ ನೀರಲ್ಲಿ ಮುಳುಗಿ ಹೋಗಿದೆ.

ಈರುಳ್ಳಿ ಬೆಳೆ ಸಂಪೂರ್ಣ ಮುಳುಗಡೆ: ಸದ್ಯ ಈರುಳ್ಳಿಗೆ ಬಂಗಾರದ ಬೆಲೆಯಿದ್ದು, ಇನ್ನೇನು ಕಟಾವಿಗೆ ರೆಡಿಯಿದ್ದ ಸಾವಿರಾರು ಎಕರೆ ಈರುಳ್ಳಿ ಬೆಳೆ ಸಂಪೂರ್ಣ ಮುಳುಗಡೆಯಾಗಿದೆ. ಹೀಗಾಗಿ, ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಈರುಳ್ಳಿ ಬೆಳೆಯನ್ನ ರೈತರು ಕಳೆದುಕೊಂಡು ಕೈ ಕೈ ಹಿಸುಕಿಕೊಳ್ಳುವಂತಾಗಿದೆ. ಅಧಿಕಾರಿಗಳ ಎಡವಟ್ಟಿನಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಅಧಿಕಾರಿಗಳು ಮಾಡಿದ ಎಡವಟ್ಟಿಗೆ ರೈತರು ಬದುಕು ನರಕವಾಗಿದೆ. ಆದಷ್ಟು ಬೇಗ ಅನ್ನದಾತರ ಬದುಕನ್ನ ಮುಳುಗಿಸಿದ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಪರಹಾರ ನೀಡಬೇಕಿದೆ. ಇಲ್ಲವಾದ್ರೆ ರೈತರು ದೊಡ್ಡ ಮಟ್ಟದಲ್ಲಿ ಹೋರಾಟಕ್ಕೆ ಇಳಿಯೋ ಗ್ಯಾರಂಟಿ.

Published On - 8:27 am, Sat, 7 December 19

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ