AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC 2022 toppers from Karnataka: KSRTC ಬಸ್ ಚಾಲಕನ ಮಗ ಸೇರಿದಂತೆ 25 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆ

ಕರ್ನಾಟಕದ ಎಚ್‌ಎಸ್ ಭಾವನಾ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಇಡೀ ದೇಶದಲ್ಲಿ 55 ರ‍್ಯಾಂಕ್ ಗಳಿಸಿದ್ದಾರೆ.

UPSC 2022 toppers from Karnataka: KSRTC ಬಸ್ ಚಾಲಕನ ಮಗ ಸೇರಿದಂತೆ 25 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆ
UPSC 2022 ಫಲಿತಾಂಶ
TV9 Web
| Edited By: |

Updated on: May 23, 2023 | 6:42 PM

Share

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC Result 2022) ಇಂದು (May 23) ಸಿವಿಲ್ ಸರ್ವೀಸಸ್2022 ಪರೀಕ್ಷೆಯನ್ನು ಬಿಡುಗಡೆ ಮಾಡಿದೆ. ಈ ವರ್ಷವೂ ಮಹಿಳೆಯರು ಉನ್ನತ ಸ್ಥಾನಗಳಲ್ಲಿ ಪ್ರಾಬಲ್ಯ ಸಾಧಿಸಿದರು, ಇಶಿತಾ ಕಿಶೋರ್ AIR 1 ಅನ್ನು ಪಡೆದುಕೊಂಡು ಮೊದಲ ಸ್ಥಾನದಲ್ಲಿದ್ದರೆ, ಉಳಿದಂತೆ ಗರಿಮಾ ಲೋಹಿಯಾ, ಉಮಾ ಹರತಿ ಎನ್ ಮತ್ತು ಸ್ಮೃತಿ ಮಿಶ್ರಾ ಅಗ್ರ ಸ್ಥಾನದಲ್ಲಿದ್ದಾರೆ. ಕರ್ನಾಟಕದಿಂದ 25 ವಿದ್ಯಾರ್ಥಿಗಳು ಕೇಂದ್ರ ಲೋಕಸೇವಾ ಆಯೋಗ (UPSC) 2022 ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರಲ್ಲಿ ಒಬ್ಬ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮಗ 589ನೇ ರ‍್ಯಾಂಕ್ ಪಡೆದಿದ್ದಾನೆ. ಯುಪಿಎಸ್‌ಸಿ ಫಲಿತಾಂಶ ಮಂಗಳವಾರ (ಮೇ 23) ಪ್ರಕಟವಾಗಿದೆ.

ಸಿದ್ದಲಿಂಗಪ್ಪ ಕೆ ಪೂಜಾರ್

ಸಿದ್ದಲಿಂಗಪ್ಪ ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ಬಡ ಕುಟುಂಬದಿಂದ ಬಂದವರು. ಅವರ ತಂದೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಚಾಲಕ. ಅವರು ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿ UPSC ಪರೀಕ್ಷೆಯಲ್ಲಿ 589 ನೇ ಸ್ಥಾನ ಪಡೆಡಿದ್ದಾರೆ.

ಪೂಜಾ ಮುಕುಂದ್

ಮೈಸೂರಿನ ಕುವೆಂಪು ನಗರದ ಪೂಜಾ UPSC ಪರೀಕ್ಷೆಯಲ್ಲಿ 390ನೇ ರ್ಯಾಂಕ್ ಗಳಿಸಿದ್ದಾರೆ. ಯಾವುದೇ ಕೋಚಿಂಗ್ ತರಗತಿಗಳಿಗೆ ಹಾಜರಾಗದೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಪೂಜಾ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಪೂಜಾ, ಇದು ತನ್ನ ತಾಯಿಯ ಕನಸು ಮತ್ತು ಅದನ್ನು ನನಸಾಗಿಸಲು ಸಂತೋಷವಾಗಿದೆ ಎಂದು ಹೇಳಿದರು. ಪೂಜಾ ಇಂಜಿನಿಯರಿಂಗ್ ಮುಗಿಸಿ ಪರೀಕ್ಷೆಗೆ ತಯಾರಿ ಆರಂಭಿಸಿದ್ದಾಳೆ.

ಇದನ್ನೂ ಓದಿ: UPSC ಪರೀಕ್ಷೆಯಲ್ಲಿ 362ನೇ ರ‍್ಯಾಂಕ್ ಪಡೆದ ಬೆಳಗಾವಿಯ ಶ್ರುತಿ ಯರಗಟ್ಟಿ

ಮೇಘನಾ ಐ.ಎನ್

ನಿವೃತ್ತ ಉಪ ಸಂರಕ್ಷಣಾಧಿಕಾರಿಯಾಗಿರುವ ಅರಣ್ಯ ಅಧಿಕಾರಿಯ ಪುತ್ರಿ ಮೇಘನಾ ಯುಪಿಎಸ್‌ಸಿ ಪರೀಕ್ಷೆಯಲ್ಲಿ 617ನೇ ರ್ಯಾಂಕ್ ಪಡೆದಿದ್ದಾರೆ. ಇವರು ತಮ್ಮ ಎರಡನೇ ಪ್ರಯತ್ನದಲ್ಲಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಬೆಂಗಳೂರಿನ ಬಿಎಂಎಸ್ ಕಾಲೇಜಿನಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಪದವಿ ಪಡೆದ ನಂತರ ಪರೀಕ್ಷೆಗೆ ತಯಾರಿ ನಡೆಸಿದ್ದಾರೆ. ಮೇಘನಾಗೆ ಐಪಿಎಸ್ ಅಧಿಕಾರಿಯಾಗುವ ನಿರೀಕ್ಷೆ ಇದೆ.

ಮತ್ತಷ್ಟು ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?