AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanchari Vijay: ಅಮೆರಿಕ ರಾಯಭಾರ ಕಚೇರಿಯಿಂದಲೂ ನಟ ಸಂಚಾರಿ ವಿಜಯ್​ ನಿಧನಕ್ಕೆ ಸಂತಾಪ

Sanchari Vijay Death: ರಾಷ್ಟ್ರ ಪ್ರಶಸ್ತಿ ವಿಜೇತರಾಗಿದ್ದ ಸಂಚಾರಿ ವಿಜಯ್ ಅವರ ಅವರ ಕುಟುಂಬಕ್ಕೆ ಮತ್ತು ಅಭಿಮಾನಿ ಬಳಗಕ್ಕೆ ಸಂತಾಪ ಸೂಚಿಸಿರುವ ಅಮೆರಿಕ ರಾಯಭಾರಿ ಕಚೇರಿ, ಚೆನ್ನೈನಲ್ಲಿರುವ ಕಚೇರಿಯಲ್ಲಿ 2018ರಲ್ಲಿ ಪ್ರೈಡ್ ತಿಂಗಳ ಆಚರಣೆಯ ಪ್ರಯುಕ್ತ ತೃತೀಯ ಲಿಂಗಿ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ ನಾನು ಅವನಲ್ಲ ಅವಳು ಪ್ರದರ್ಶನದಲ್ಲಿ ಮತ್ತು ಸಂವಾದದಲ್ಲಿ ಸಂಚಾರಿ ವಿಜಯ್ ಆರ್​ಐಪಿ ಎಂದು ಟ್ವೀಟ್ ಮಾಡಿದೆ.

Sanchari Vijay: ಅಮೆರಿಕ ರಾಯಭಾರ ಕಚೇರಿಯಿಂದಲೂ ನಟ ಸಂಚಾರಿ ವಿಜಯ್​ ನಿಧನಕ್ಕೆ ಸಂತಾಪ
ಸಂಚಾರಿ ವಿಜಯ್
TV9 Web
| Edited By: |

Updated on: Jun 15, 2021 | 4:47 PM

Share

ಚಿಕ್ಕಮಗಳೂರು: ಕನ್ನಡದ ಹೆಮ್ಮೆಯ ನಟ, ಕಲಾವಿದ ಸಂಚಾರಿ ವಿಜಯ್ ನಿಧನಕ್ಕೆ ಚೆನ್ನೈನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸಂತಾಪ ಸೂಚಿಸಿ ಕನ್ನಡದಲ್ಲೇ ಟ್ವಿಟ್ ಮಾಡಿದೆ. ರಾಷ್ಟ್ರ ಪ್ರಶಸ್ತಿ ವಿಜೇತರಾಗಿದ್ದ ಸಂಚಾರಿ ವಿಜಯ್ ಅವರ ಅವರ ಕುಟುಂಬಕ್ಕೆ ಮತ್ತು ಅಭಿಮಾನಿ ಬಳಗಕ್ಕೆ ಸಂತಾಪ ಸೂಚಿಸಿರುವ ಅಮೆರಿಕ ರಾಯಭಾರಿ ಕಚೇರಿ, ಚೆನ್ನೈನಲ್ಲಿರುವ ಕಚೇರಿಯಲ್ಲಿ 2018ರಲ್ಲಿ ಪ್ರೈಡ್ ತಿಂಗಳ ಆಚರಣೆಯ ಪ್ರಯುಕ್ತ ತೃತೀಯ ಲಿಂಗಿ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ ನಾನು ಅವನಲ್ಲ ಅವಳು ಪ್ರದರ್ಶನದಲ್ಲಿ ಮತ್ತು ಸಂವಾದದಲ್ಲಿ ಸಂಚಾರಿ ವಿಜಯ್ ಆರ್​ಐಪಿ ಎಂದು ಟ್ವೀಟ್ ಮಾಡಿದೆ.

ಹುಟ್ಟೂರು ಪಂಚನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ನಟ ಸಂಚಾರಿ ವಿಜಯ್ ಅಂತ್ಯಕ್ರಿಯೆ

ಕನ್ನಡದ ಹೆಮ್ಮೆಯ ನಟ, ಕಲಾವಿದ ಸಂಚಾರಿ ವಿಜಯ್ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಚಿಕ್ಕಮಗಳೂರು ಜಿಲ್ಲೆಯ ಕಡೂಡು ತಾಲೂಕಿನ ಪಂಚನಹಳ್ಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಲಿಂಗಾಯತ ವಿಧಿವಿಧಾನಗಳೊಂದಿಗೆ ನೆರವೇರಿತು. ಸಚಿವ ಮಾಧುಸ್ವಾಮಿ, ಮಾಜಿ ಶಾಸಕ ವೈಎಸ್​ವಿ ದತ್ತ ಸರ್ಕಾರದ ಪರವಾಗಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. ಕುಪ್ಪೂರು ಯತೀಶ್ವರ ಶಿವಾಚಾರ್ಯಶ್ರೀ ನೇತೃತ್ವದಲ್ಲಿ ಪಾರ್ಥಿವ ಶರೀರವನ್ನು ಸಮಾಧಿಯೊಳಗೆ ಇರಿಸಿ  ಸಂಚಾರಿ ವಿಜಯ್ ಅವರ ಸಹೋದರರು ಪೂಜೆ ಸಲ್ಲಿಸಿದರು.

ಸಂಚಾರಿ ವಿಜಯ್ ಸ್ನೇಹಿತ ರಘು ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದ್ದು, ಅಂತಿಮ ದರ್ಶನಕ್ಕೆ ಗ್ರಾಮಸ್ಥರು ಮತ್ತು ಸ್ನೇಹಿತರು ನೆರೆದಿದ್ದರು.  ಬಿಲ್ವಪತ್ರೆ, ಭಸ್ಮ ಬಳಸಿ ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ಕುಪ್ಪೂರು ಯತೀಶ್ವರ ಶಿವಾಚಾರ್ಯಶ್ರೀ ತಿಳಿಸಿದ್ದಾರೆ. ಸ್ಥಳದಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದು, ಜಿಲ್ಲಾಧಿಕಾರಿ, ಎಸ್​ಪಿ ಸ್ಥಳದಲ್ಲೇ ಮೊಕ್ಕಾ ಹೂಡಿದ್ದಾರೆ. ಸಂಚಾರಿ ವಿಜಯ್ ಅಂತ್ಯಸಂಸ್ಕಾರದ ವಿಧಿ ವಿಧಾನಗಳು ನೆರವೇರುವ ಮುನ್ನ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಬೆಟ್ಟದಂತಹ ಕನಸು ಕಂಡಿದ್ದರು.. ಬೆಟ್ಟದಂತಹ ಕನಸು ಕಂಡಿದ್ರು.. ಬಹುದೊಡ್ಡ ಗುರಿ ಕಣ್ಮುಂದೆ ಇತ್ತು. ಕಷ್ಟಗಳು ಎದುರಾದ್ರೂ ಅವಕಾಶಗಳು ಕಡಿಮೆ ಸಿಕ್ಕರೂ ಹಿಂದೆ ಸರಿದಿರಲಿಲ್ಲ. ಸಹನೆ ಕಳೆದುಕೊಳ್ಳಲಿರಲಿಲ್ಲ. ಚಿಕ್ಕ ಚಿಕ್ಕ ಅವಕಾಶಗಳಲ್ಲೇ ತಮ್ಮನ್ನ ತಾವು ಗುರುತಿಸಿಕೊಂಡಿದ್ರು. ಹೀಗೆ ಸಿನಿಮಾ ಕ್ಷೇತ್ರದಲ್ಲೂ ಚಾಪು ಮೂಡಿಸಿದ್ದ ನಟ ಸಂಚಾರಿ ವಿಜಯ್ ಸಂಚಾರ ಮುಗಿಸಿದ್ದಾರೆ. ರಂಗಭೂಮಿ, ಧಾರವಾಹಿ, ಸಿನಿಮಾ ನಟನಾಗಿ ಮಿಂಚಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ಗೆ ಇಂದು ಅಂತಿಮ ನಮನ ಸಲ್ಲಿಸಲಾಗುತ್ತಿದೆ. ಈ ವೇಳೆ ಕುಟುಂಬಸ್ಥರು, ಗಣ್ಯರು, ಸ್ನೇಹಿತರು ಕಂಬನಿಯ ವಿದಾಯ ಹೇಳಿದ್ದಾರೆ. ತಮ್ಮ ಅಂಗಾಂಗ ದಾನ ಮಾಡಿರುವ ನಟ ಸಂಚಾರಿ ವಿಜಯ್​ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಇದನ್ನೂ ಓದಿ: Sanchari Vijay Funeral: ಹುಟ್ಟೂರು ಪಂಚನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ನಟ ಸಂಚಾರಿ ವಿಜಯ್ ಅಂತ್ಯಕ್ರಿಯೆ

Sanchari Vijay: ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಟೀಸರ್​ ನೋಡಿದರೆ ಕಲ್ಲು ಹೃದಯವೂ ಕರಗಲೇಬೇಕು

(US Consulate in Chennai tweeted condolences to Actor Sanchari Vijay death)

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?