AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಮಕ್ಕಳ ಸೆಳೆಯಲು ಐಸ್ ಕ್ರೀಂಗೆ ಡ್ರಗ್ಸ್ ಹಾಕಲಾಗ್ತಿದೆ: ಶಿಕ್ಷಣ ಸಚಿವ ಗಂಭೀರ ಹೇಳಿಕೆ

ಚಾಮರಾಜನಗರ: ಚಂದನವನಕ್ಕೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಶುರುವಾದಾಗಿನಿಂದ ರಾಜ್ಯದಲ್ಲಿ ಹಬ್ಬಿರುವ ಗಾಂಜಾ ಘಾಂಟು ಬಯಲಾಗುತ್ತಿದೆ. ಅಲ್ಲದೆ ಕೊರೊನಾದಿಂದಾಗಿ ಖಿನ್ನತೆಗೆ ಒಳಗಾದವರು ಡ್ರಗ್ಸ್ ಮೊರೆ ಹೋಗುತ್ತಿದ್ದಾರೆ ಎಂಬ ಸುದ್ದಿಯನ್ನು ಸಹ ವರದಿ ಮಾಡಲಾಗಿದೆ. ಈ ನಡುವೆ ಸಚಿವ ಸುರೇಶ್ ಕುಮಾರ್ ಶಾಲಾ ಮಕ್ಕಳನ್ನು ಸೆಳೆಯಲು ಐಸ್ ಕ್ರೀಂಗೆ ಡ್ರಗ್ಸ್ ಹಾಕಲಾಗ್ತಿದೆ ಎಂದು ಗಂಭೀರ ಹೇಳಿಕೆ ನೀಡಿದ್ದಾರೆ. ‘ಈ ವಿಷಯ ಹೊಸದೇನೂ ಅಲ್ಲ, ಶಬ್ದವೇಧಿ ಚಿತ್ರ ಸಹ ನಿರ್ಮಾಣವಾಗಿತ್ತು’ ಹೌದು ಚಾಮರಾಜನಗರದಲ್ಲಿ ಸಚಿವ ಎಸ್. ಸುರೇಶ್ ಕುಮಾರ್ […]

ಶಾಲಾ ಮಕ್ಕಳ ಸೆಳೆಯಲು ಐಸ್ ಕ್ರೀಂಗೆ ಡ್ರಗ್ಸ್ ಹಾಕಲಾಗ್ತಿದೆ: ಶಿಕ್ಷಣ ಸಚಿವ ಗಂಭೀರ ಹೇಳಿಕೆ
ಆಯೇಷಾ ಬಾನು
| Edited By: |

Updated on: Sep 07, 2020 | 1:44 PM

Share

ಚಾಮರಾಜನಗರ: ಚಂದನವನಕ್ಕೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಶುರುವಾದಾಗಿನಿಂದ ರಾಜ್ಯದಲ್ಲಿ ಹಬ್ಬಿರುವ ಗಾಂಜಾ ಘಾಂಟು ಬಯಲಾಗುತ್ತಿದೆ. ಅಲ್ಲದೆ ಕೊರೊನಾದಿಂದಾಗಿ ಖಿನ್ನತೆಗೆ ಒಳಗಾದವರು ಡ್ರಗ್ಸ್ ಮೊರೆ ಹೋಗುತ್ತಿದ್ದಾರೆ ಎಂಬ ಸುದ್ದಿಯನ್ನು ಸಹ ವರದಿ ಮಾಡಲಾಗಿದೆ. ಈ ನಡುವೆ ಸಚಿವ ಸುರೇಶ್ ಕುಮಾರ್ ಶಾಲಾ ಮಕ್ಕಳನ್ನು ಸೆಳೆಯಲು ಐಸ್ ಕ್ರೀಂಗೆ ಡ್ರಗ್ಸ್ ಹಾಕಲಾಗ್ತಿದೆ ಎಂದು ಗಂಭೀರ ಹೇಳಿಕೆ ನೀಡಿದ್ದಾರೆ.

‘ಈ ವಿಷಯ ಹೊಸದೇನೂ ಅಲ್ಲ, ಶಬ್ದವೇಧಿ ಚಿತ್ರ ಸಹ ನಿರ್ಮಾಣವಾಗಿತ್ತು’ ಹೌದು ಚಾಮರಾಜನಗರದಲ್ಲಿ ಸಚಿವ ಎಸ್. ಸುರೇಶ್ ಕುಮಾರ್ ಮಕ್ಕಳನ್ನು ಸೆಳೆಯಲು ಐಸ್ ಕ್ರೀಂಗೆ ಚಾಕೋಲೇಟ್‌ಗೂ ಡ್ರಗ್ಸ್ ಬೆರೆಸುತ್ತಿದ್ದಾರೆ. ವಿದ್ಯಾರ್ಥಿಗಳು ಡ್ರಗ್ಸ್‌ಗೆ ಅಡಿಕ್ಟ್ ಆಗುವ ಆತಂಕವಿದೆ ಎಂದು ಹೇಳಿದ್ದಾರೆ. ಆದರೆ ಈ ವಿಷಯ ಹೊಸದೇನೂ ಅಲ್ಲ. ಈ ಹಿಂದೆ ಉಪ ಸ್ಪೀಕರ್ ಆಗಿದ್ದವರ ನೇತೃತ್ವದಲ್ಲಿ ವರದಿ ಸಲ್ಲಿಕೆ ಆಗಿತ್ತು. ವರದಿ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲಾಗಿತ್ತು. ಡ್ರಗ್ಸ್ ಸೇವನೆ ಸಮಾಜಕ್ಕೆ ಮಾರಕ ಎಂದು ಹೇಳಿದ್ರು.

ಮಕ್ಕಳಿಗೆ ಈ ರೀತಿ ತಿನ್ನುವ ಪದಾರ್ಥಗಳಲ್ಲಿ ಡ್ರಗ್ಸ್ ನೀಡುವುದು ಹಾಗೂ ಉನ್ನತ ಮಟ್ಟದ ಶಾಲೆಗಳ ಮಕ್ಕಳಿಗೆ ಡ್ರಗ್ಸ್ ಪೂರೈಸುವುದು ನಡೆಯುತ್ತಲೇ ಇರುತ್ತದೆ. ಇದನ್ನೇ ಆಧರಿಸಿ ಡಾ ರಾಜ್​ ಕುಮಾರ್ ಅವರ ಶಬ್ದವೇಧಿ ಚಿತ್ರ ಸಹ ನಿರ್ಮಾಣವಾಗಿತ್ತು. ಆದರೆ ಈ ಬಗ್ಗೆ ಸರ್ಕಾರ ಇನ್ನು ಹೆಚ್ಚಿನ ಗಮನ ಹರಿಸಬೇಕಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ