AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ನೂತನ ತಂತ್ರಜ್ಞಾನ ಬಳಕೆ; ಡ್ರೋನ್ ಕ್ಯಾಮರಾ ನೀಡಲಿದೆ ಅಪಾಯದ ಮುನ್ಸೂಚನೆ

ಉತ್ತರಕನ್ನಡ ಜಿಲ್ಲಾಡಳಿತ ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಫಂಡ್‌ನಿಂದ ಡ್ರೋನ್ ಖರೀದಿಗಾಗಿ ಪೊಲೀಸ್ ಇಲಾಖೆಗೆ ಫಂಡ್ ನೀಡಲಾಗಿದ್ದು, ಎರಡು ಡ್ರೋನ್​ಗಳಲ್ಲಿ ಭಟ್ಕಳ, ಕುಮಟಾ, ಶಿರಸಿ ಯಲ್ಲಾಪುರಗಳಲ್ಲಿದ್ದರೇ, ಇನ್ನೊಂದು ಕಾರವಾರ, ಅಂಕೋಲಾ, ಜೋಯಿಡಾ, ದಾಂಡೇಲಿ ಹಳಿಯಾಳ ತಾಲೂಕಿನಲ್ಲಿ ಇರಲಿದೆ.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ನೂತನ ತಂತ್ರಜ್ಞಾನ ಬಳಕೆ; ಡ್ರೋನ್ ಕ್ಯಾಮರಾ ನೀಡಲಿದೆ ಅಪಾಯದ ಮುನ್ಸೂಚನೆ
ಡ್ರೋನ್ ಕ್ಯಾಮೆರಾ
Follow us
preethi shettigar
| Updated By: ಆಯೇಷಾ ಬಾನು

Updated on: Apr 10, 2021 | 8:51 AM

ಉತ್ತರ ಕನ್ನಡ: ಇತ್ತೀಚಿನ ವರ್ಷಗಳಲ್ಲಿ ನೆರೆ-ಪ್ರವಾಹ ಕರಾವಳಿ, ಮಲೆನಾಡು ಹಾಗೂ ಗುಡ್ಡಗಾಡು ಪ್ರದೇಶಗಳ ಜನರನ್ನು ಕಾಡುತ್ತಿರುವ ಸಮಸ್ಯೆ. ಪ್ರಕೃತಿ ವಿಕೋಪ ಸಂಭವಿಸಿದರೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿ ಬಿಡುತ್ತದೆ. ಸಮುದ್ರದ ಅಲೆಗಳ ಆರ್ಭಟ, ಭೂಕುಸಿತವಾಗಿ ಜನರ ರಕ್ಷಣೆಯೇ ದೊಡ್ಡ ಸವಾಲಾಗುತ್ತದೆ. ಆದರೆ ಇನ್ನು ಮುಂದೆ ಸಂಕಷ್ಟ ಎದುರಾದಲ್ಲಿ ಕೂಡಲೇ ಜನರಿಗೆ ಸ್ಪಂದಿಸಲು ಸಹಾಯವಾಗುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ನೂತನ ತಂತ್ರಜ್ಞಾನ ಬಳಕೆ ಮಾಡಲು ಮುಂದಾಗಿದೆ.

ಸೈಕ್ಲೋನ್​ನಿಂದ ಮೀನುಗಾರರನ್ನು ರಕ್ಷಿಸುವುದು, ಗುಡ್ಡ ಕುಸಿತ, ಭೂ ಕುಸಿತ, ಕಾಡಿನಲ್ಲಿ ಬೆಂಕಿ ಕಾಣಿಸಿಕೊಳ್ಳುವುದು ಇವೆಲ್ಲವನ್ನು ಎದುರಿಸಲು ಒಂದು ಯೋಜನೆ ರೂಪಿಸಲಾಗಿದೆ. ಅದರಂತೆ ಅಪಾಯದಲ್ಲಿ ಜನರು ಸಿಲುಕಿದ್ದಾರೋ, ಪ್ರಾಣಿಗಳು ಸಿಲುಕಿವೆಯೋ ಅಥವಾ ಕಾಡುಗಳ ರಕ್ಷಣೆ ಹೇಗೆ ಸಾಧ್ಯ ಎನ್ನುವ ಸವಾಲುಗಳಿಗೆ ಈ ಯೋಜನೆ ಪರಿಹಾರವಾಗಲಿದೆ. ಡ್ರೋನ್ ಕ್ಯಾಮೆರಾವನ್ನ ಪೊಲೀಸ್ ಇಲಾಖೆ ಬಳಸಲು ಮುಂದಾಗಿದೆ.

ಉತ್ತರಕನ್ನಡ ಜಿಲ್ಲಾಡಳಿತ ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಫಂಡ್‌ನಿಂದ ಡ್ರೋನ್ ಖರೀದಿಗಾಗಿ ಪೊಲೀಸ್ ಇಲಾಖೆಗೆ ಫಂಡ್ ನೀಡಲಾಗಿದ್ದು, ಎರಡು ಡ್ರೋನ್​ಗಳಲ್ಲಿ ಭಟ್ಕಳ, ಕುಮಟಾ, ಶಿರಸಿ ಯಲ್ಲಾಪುರಗಳಲ್ಲಿದ್ದರೇ, ಇನ್ನೊಂದು ಕಾರವಾರ, ಅಂಕೋಲಾ, ಜೋಯಿಡಾ, ದಾಂಡೇಲಿ ಹಳಿಯಾಳ ತಾಲೂಕಿನಲ್ಲಿ ಇರಲಿದೆ. ಪೊಲೀಸ್ ಇಲಾಖೆಯ ಸಿವಿಲ್, ಡಿಎಆರ್, ಮತ್ತು ವೈರಲೆಸ್ ವಿಭಾಗದ ಆರು ಸಿಬ್ಬಂದಿಗಳಿಗೆ ಈ ಡ್ರೋನ್ ಕ್ಯಾಮರಾದ ಆಪರೇಟಿಂಗ್ ತರಬೇತಿ ನೀಡಲಾಗಿದೆ.

drone camera

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ನೂತನ ತಂತ್ರಜ್ಞಾನ ಬಳಕೆ

ಅಂದಹಾಗೆ ಈ ಡ್ರೋನ್‌ನ ವಿಶೇಷ ಎಂದರೆ ಇದು 40-50ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದು, ಸುಮಾರು 3ರಿಂದ 4 ಕಿ.ಮೀ.ವರೆಗೆ ಸಾಗುತ್ತದೆ. ಅಲ್ಲದೇ,  ಸುಮಾರು 1 ಕಿ.ಮೀ. ದೂರದವರೆಗಿನ ವಸ್ತುವಿನ ಚಿತ್ರವನ್ನು ಕೂಡಾ ಈ ಡ್ರೋನ್ ಸ್ಪಷ್ಟವಾಗಿ ಕ್ಯಾಪ್ಚರ್ ಮಾಡಿಕೊಳ್ಳುತ್ತದೆ. ಇದರಲ್ಲಿ ಆಟೋ ಪೈಲೆಟ್ ವ್ಯವಸ್ಥೆಯಿದ್ದು, ಒಂದು ವೇಳೆ ಗಾಳಿ ವೇಗ ಜಾಸ್ತಿ ಇದ್ದರೆ ಅಥವಾ ಬ್ಯಾಟರಿ ಲೋ ಇದ್ದರೆ ಈ ಡ್ರೋನ್ ಆಪರೇಟರ್ ಬಳಿಯೇ ಬಂದು ಸೇರಿಕೊಳ್ಳುತ್ತದೆ.

ಎದುರಲ್ಲಿ ಹಕ್ಕಿಗಳು ಬಂದಲ್ಲಿ ಅದೇ ಅವುಗಳನ್ನು ಡಿಟೆಕ್ಟ್ ಮಾಡಿ ಪಕ್ಕಕ್ಕೆ ಸರಿಯುತ್ತದೆ. ಈ ಆಧುನಿಕ ಡ್ರೋನ್ ಅನ್ನು ಪೊಲೀಸ್ ಇಲಾಖೆ ಖರೀದಿಸಿದೆ. ಭೌಗೋಳಿಕವಾಗಿ ವಿಸ್ತಾರವಾಗಿರುವ ಉತ್ತರ ಕನ್ನಡ ಜಿಲ್ಲೆಗೆ ಇದು ಅಗತ್ಯ ಕೂಡ ಆಗಿದೆ. ನೆರೆ ಬಂದಾಗ, ಕಾಡು ಅಥವಾ ಇತರ ಅನಾಹುತವಾದ ಸಮಯದಲ್ಲಿ ಇದರ ಉಪಯೋಗ ಬಹಳವಾಗಿದ್ದು, ಸಮುದ್ರದಲ್ಲಿ ಯಾರಾದರು ಸಿಕ್ಕಿದಲ್ಲಿ ಅವರ ಪರಿಸ್ಥಿತಿ ಪರಿಶೀಲಿಸಲು ಸಾಧ್ಯವಾಗಲಿದೆ. ಹೀಗಾಗಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರೆಸ್ಕ್ಯೂ ಮಾಡಲು ಈ ಡ್ರೋನ್ ಸಹಾಯವಾಗಲಿದೆ ಎಂದು ಉತ್ತರ ಕನ್ನಡದ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಹೇಳಿದ್ದಾರೆ.

ಒಟ್ಟಿನಲ್ಲಿ ಜನರ ಹಾಗೂ ಪರಿಸರದ ರಕ್ಷಣೆಗಾಗಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಇದೀಗ ಡ್ರೋನ್ ಬಳಕೆಗೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆ. ಪೊಲೀಸರ ಸೇವೆ ಹಾಗೂ ರಕ್ಷಣಾ ಕಾರ್ಯಗಳ ಉದ್ದೇಶದಿಂದ ತಂದಿರುವ ಈ ಡ್ರೋನ್​ನಿಂದ ಜಿಲ್ಲೆಯ ಜನರಿಗೆ ಇನ್ನಷ್ಟು ಸಹಾಯವಾಗಬಹುದೆಂಬ ವಿಚಾರ ಖುಷಿಯ ಸಂಗತಿಯಾಗಿದೆ.

ಇದನ್ನೂ ಓದಿ: 

ಕೊರೊನಾ ನೈಟ್​ ಕರ್ಫ್ಯೂ ಜಾರಿ; ಪೊಲೀಸ್​ ಅಧಿಕಾರಿಗಳ ಜೊತೆ ಇಂದು ಕಮಲ್ ಪಂತ್ ಸಭೆ

ಗಣಿನಾಡಿನಲ್ಲಿ ಸಿಸಿ ಕ್ಯಾಮರಾ ಕಣ್ಗಾವಲು.. ಪೊಲೀಸ್ ಇಲಾಖೆಯಿಂದ ವಿನೂತನ ಹೆಜ್ಜೆ

(Uttara Kannada District Police Department Utilizing new technology to solve problems by using drone camera )

ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ