AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರೂರು ಗುಡ್ಡ ಕುಸಿತ ಸ್ಥಳದಲ್ಲೇ ಲಾರಿ ಚಾಲಕನ ಮೊಬೈಲ್ ಲೊಕೇಶನ್ ಪತ್ತೆ: ಕಾರ್ಯಾಚರಣೆ ಚುರುಕು

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತವಾಗಿ ಇಂದಿಗೆ ನಾಲ್ಕುವಾಗಿದೆ. ನಿನ್ನೆ ಬೆಂಜ್​​ ಕಾರು ಲೊಕೇಶನ್​ ಪತ್ತೆಯಾಗಿದ್ದು, ಇಂದು ಚಾಲಕ ಸಮೇತ ಟಿಂಬರ್ ಲಾರಿ ಲೊಕೇಶನ್​ ಮತ್ತು ಮೊವೈಲ್ ಲೊಕೇಶನ್ ಪತ್ತೆಯಾಗಿದೆ. ಮಣ್ಣು ಕುಸಿತ ಸ್ಥಳದಲ್ಲೇ ಸಿಕ್ಕಿರುವ ಮಾಹಿತಿ ಸಿಕ್ಕಿದ್ದು, ಅಬ್ಬರದ ಮಳೆಯಲ್ಲೂ ಕಾರ್ಯಾಚರಣೆ ವೇಗ ಪಡೆದುಕೊಂಡಿದೆ.

ಶಿರೂರು ಗುಡ್ಡ ಕುಸಿತ ಸ್ಥಳದಲ್ಲೇ ಲಾರಿ ಚಾಲಕನ ಮೊಬೈಲ್ ಲೊಕೇಶನ್ ಪತ್ತೆ: ಕಾರ್ಯಾಚರಣೆ ಚುರುಕು
ಶಿರೂರು ಗುಡ್ಡ ಕುಸಿತ ಸ್ಥಳದಲ್ಲೇ ಲಾರಿ ಚಾಲಕನ ಮೊಬೈಲ್ ಲೊಕೇಶನ್ ಪತ್ತೆ, ಕಾರ್ಯಚರಣೆ ಚುರುಕು
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Jul 19, 2024 | 3:48 PM

Share

ಕಾರವಾರ, ಜುಲೈ 19: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು (Shiroor) ಗುಡ್ಡ ಕುಸಿತವಾಗಿ ಇಂದಿಗೆ ನಾಲ್ಕು ದಿನವಾಗಿದೆ. ಧಾರಾಕಾರ ಮಳೆ ಮಧ್ಯೆ ತೆರುವು ಕಾರ್ಯಾಚರಣೆ ಮುಂದುವರೆದಿದೆ. ಈ ಮಧ್ಯೆ ಮಣ್ಣು ಕುಸಿತ ಸ್ಥಳದಲ್ಲೇ ಚಾಲಕ ಸಮೇತ ಟಿಂಬರ್ ಲಾರಿ (lorry) ಲೊಕೇಶನ್​ ಮತ್ತು ಮೊವೈಲ್ ಲೊಕೇಶನ್ ಪತ್ತೆ ಆಗಿದೆ. ಚಾಲಕ ಅರ್ಜುನ ಬಗ್ಗೆ ಅಧಿಕೃತ ಮಾಹಿತಿ ದೊರೆಯುತ್ತಿದ್ದಂತೆ ಕಾರ್ಯಾಚರಣೆ ವೇಗ ಪಡೆದುಕೊಂಡಿದೆ.

ಘಟನೆಯಂದು ಬೆಳಿಗ್ಗೆ 11 ಗಂಟೆಗೆ ಲಾರಿ ಚಾಲಕ ಅರ್ಜುನ್​ನ ಮೊಬೈಲ್​ ಸ್ವಿಚ್ ಆಫ್ ಆಗಿತ್ತು. ಆದರೆ ಜಿಪಿಎಸ್​ನಲ್ಲಿ ಗುಡ್ಡ ಕುಸಿತದ ಸ್ಥಳದಲ್ಲೇ ಲಾರಿ ಇರುವುದಾಗಿ ತೋರಿಸಿದೆ. ಹೀಗಾಗಿ ಆತಂಕಗೊಂಡ ಲಾರಿ ಮಾಲೀಕ ಪೊಲೀಸರಿಗೆ ರಕ್ಷಣೆ ಮಾಡುವಂತೆ ಮನವಿ ಮಾಡಿದ್ದಾರೆ. ಆದರೆ ಯಾರು ಕೂಡ ಸ್ಪಂದಿಸಿರಲಿಲ್ಲ.

ಇದನ್ನೂ ಓದಿ: ಶಿರೂರು ಬಳಿ ಗುಡ್ಡ ಕುಸಿತ: ಮಣ್ಣಿನಡಿ ಬೆಂಜ್ ​ಕಾರಿನ ಲೊಕೇಶನ್ ಪತ್ತೆ, ಮತ್ತಷ್ಟು ಹೆಚ್ಚಿಸಿದ ಆತಂಕ

ಜಿಪಿಎಸ್​ ನೋಡುವಂತೆ ಹೇಳಿದರು ಕೇಳಿರಲಿಲ್ಲ. ಫೋನ್ ಟ್ರ್ಯಾಕ್ ಮಾಡುವಂತೆ ಮನವಿ ಮಾಡಿದರು ಕೇರ್ ಮಾಡಿಲ್ಲ. ದಯವಿಟ್ಟು ನಮ್ಮ ಚಾಲಕ ಅರ್ಜುನ ನನ್ನು ಬದುಕಿಸಿ ಕೊಡಿ ಎಂದು ಟಿವಿ9 ಬಳಿ ಲಾರಿ ಮಾಲೀಕ ಅಳಲು ತೊಡಿಕೊಂಡಿದ್ದರು. ಬಳಿಕ ಚಾಲಕನನ್ನು ಹುಡುಕಿ ಕೊಡುವಂತೆ ಲಾರಿ ಮಾಲೀಕ ಸಹಿತ ಕಂಪನಿಯವರು ಜಿಲ್ಲಾಡಳಿತಕ್ಕೆ ಅಧಿಕೃತ ಮಾಹಿತಿ ನೀಡಿದ್ದರು. ಈ ಹಿನ್ನೆಲೆ ಅಬ್ಬರದ ಮಳೆಯಲ್ಲೂ ಜಿಲ್ಲಾಡಳಿತ ಕಾರ್ಯಾಚರಣೆ ಮುಂದುವರೆದಿದೆ.

ಲಾರಿ ಚಾಲಕ ಅರ್ಜುನ್ ಮೂಲತಃ ಕೇರಳ ಮೂಲದವರು. ಇನ್ನು ಕೇರಳ ಮೂಲದ ಮುಬೀನ್ ಒಡೆತನದ KA-15-A7427 ವೈಟ್ ಕಲರ್ ಬೆಂಜ್ ಲಾರಿ ಸೇರಿದೆ. ಈಗಾಗಲೇ ಪಕ್ಕದ ಗುಡ್ಡ ಕುಸಿಯುವ ಹಂತದಲ್ಲಿರುವುದರಿಂದ ಘಟನಾ ಸ್ಥಳಕ್ಕೆ ಮಾಧ್ಯಮದವರನ್ನು ಸಂಪೂರ್ಣವಾಗಿ ನಿರ್ಬಂಧ ಹೇರಲಾಗಿದೆ.

ಇದನ್ನೂ ಓದಿ: ಅಂಕೋಲ ಬಳಿ ಗುಡ್ಡ ಕುಸಿತಕ್ಕೆ ಬಲಿಯಾದವರ ಸಂಖ್ಯೆ ಒಂಭತ್ತಲ್ಲ, ಇಪ್ಪತ್ತಕ್ಕೂ ಹೆಚ್ಚು!

ಪ್ರಾಣ ಒತ್ತೆಯಿಟ್ಟು ಎನ್​ಡಿಆರ್​ಎಫ್​ ಮತ್ತು ಎಸ್​ಡಿಆರ್​ಎಫ್​ ತಂಡ ಕಾರ್ಯಾಚರಣೆ ಮಾಡುತ್ತಿದೆ. ರಾಷ್ಟ್ರೀಯ ಹೇದ್ದಾರಿಯ ಮೇಲೆ ಟನ್ ಗಂಟಲೇ ಮಣ್ಣು ಹಾಗೂ ಬಂಡೆ ಕಲ್ಲು ಬಿದ್ದಿರುವ ಹಿನ್ನೆಲೆ ಅಬ್ಬರದ ಮಳೆಯ ಮಧ್ಯೆ ತೆರವು ಮಾಡುವುದು ಭಾರಿ ಕಷ್ಟ ಆಗುತ್ತಿದೆ. ಆದರೆ ಯಾವಾಗ ಅರ್ಜುನ ಬಗ್ಗೆ ಅಧಿಕೃತ ಮಾಹಿತಿ ದೊರೆಯುತ್ತುದ್ದಂತೆ ಕಾರ್ಯಾಚರಣೆ ವೇಗ ಪಡೆದುಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:46 pm, Fri, 19 July 24

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?