AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tulsi Gowda: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ಆರೋಗ್ಯದಲ್ಲಿ ಏರುಪೇರು: ಐಸಿಯುನಲ್ಲಿ ಚಿಕಿತ್ಸೆ

ವೃಕ್ಷಮಾತೆ ಎಂದೇ ಪ್ರಸಿದ್ಧರಾಗಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ಆರೋಗ್ಯದಲ್ಲಿ ಏರುಪೇರಾಗಿದೆ. ವಯೋಸಹಜ ಕಾಯಿಲೆ, ಉಸಿರಾಟದ ಸಮಸ್ಯೆಯಿಂದ ಅಸ್ವಸ್ಥಗೊಂಡಿದ್ದು, ಕಾರವಾರದ ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

Tulsi Gowda: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ಆರೋಗ್ಯದಲ್ಲಿ ಏರುಪೇರು: ಐಸಿಯುನಲ್ಲಿ ಚಿಕಿತ್ಸೆ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತುಳಸಿಗೌಡ
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ|

Updated on:Apr 22, 2024 | 10:45 PM

Share

ಕಾರವಾರ, ಏಪ್ರಿಲ್ 22: ವೃಕ್ಷಮಾತೆ ಎಂದೇ ಪ್ರಸಿದ್ಧರಾಗಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿ ಗೌಡ (Tulsi Gowda) ಆರೋಗ್ಯದಲ್ಲಿ ಏರುಪೇರಾಗಿದೆ. ವಯೋಸಹಜ ಕಾಯಿಲೆ, ಉಸಿರಾಟದ ಸಮಸ್ಯೆಯಿಂದ ಅಸ್ವಸ್ಥಗೊಂಡಿದ್ದು, ಕಾರವಾರದ ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಾಳಿ ಗ್ರಾಮದವರಾದ ತುಳಸಿ ಗೌಡ ಅವರು ಹಾಲಕ್ಕಿ ಬುಡಕಟ್ಟು ಜನಾಂಗಕ್ಕೆ ಸೇರಿದ್ದಾರೆ.

30 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಟ್ಟಿದ್ದಾರೆ. ಅವರ ಕೆಲಸವನ್ನು ಮೆಚ್ಚಿ ಭಾರತ ಸರ್ಕಾರವು 2021ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಯಾವುದೇ ಜಾತಿಯ ಮರಗಳ ತಾಯಿ ಮರವನ್ನು ಗುರುತಿಸುವ ಸಾಮರ್ಥ್ಯ ಹೊಂದಿರುವ ತುಳಸಿ ಗೌಡ ಅವರನ್ನು “ಎನ್ಸೈಕ್ಲೋಪೀಡಿಯಾ ಆಫ್ ದಿ ಫಾರೆಸ್ಟ್” ಎಂದು ಕೂಡ ಕರೆಯಲಾಗುತ್ತದೆ.

ಇದನ್ನೂ ಓದಿ: ತುಳಸಿ ಗೌಡ, ಅಬ್ದುಲ್‌ ಖಾದರ್​ ನಡಕಟ್ಟಿನ್​​ಗೆ ಒಲಿದ ಗೌರವ ಡಾಕ್ಟರೇಟ್

ಸಾಲುಮರದ ತಿಮ್ಮಕ್ಕನವರಂತೆ ಇವರೂ ಕೂಡ ರಸ್ತೆ ಬದಿಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಕಾಯಕದಲ್ಲಿ ತೊಡಗಿದ್ದಾರೆ. ಅವರ ಈ ಪರಿಸರ ಪ್ರೇಮ ಮತ್ತು ಅದರ ಬಗೆಗಿನ ನಿಷ್ಠೆಯನ್ನು ಪರಿಗಣಿಸಿ ಇತ್ತೀಚೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್​ ನೀಡಿದೆ.

ಇದನ್ನೂ ಓದಿ: ಪ್ರಚಾರದ ಮಧ್ಯೆ ವೃಕ್ಷ ಮಾತೆಯರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ: ತುಳಸಿ ಗೌಡ, ಸುಕ್ರಿ ಬೊಮ್ಮಗೌಡಗೆ ಗೌರವ ನಮನ

ಬಡ ಕುಟುಂಬದಲ್ಲಿ ಜನಿಸಿದ ಅವರು ಕೇವಲ 2 ವರ್ಷದವಳಿದ್ದಾಗ ತಂದೆಯನ್ನು ಕಳೆದುಕೊಂಡರು. ಚಿಕ್ಕ ಮಗುವಾಗಿದ್ದಾಗ, ಅವರು ತನ್ನ ತಾಯಿಯೊಂದಿಗೆ ಸ್ಥಳೀಯ ನರ್ಸರಿಯಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು. ತುಳಸಿ ಗೌಡ ಅವರು ಯಾವತ್ತೂ ಶಾಲೆಗೆ ಹೋಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:27 pm, Mon, 22 April 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ