Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಸಿ ತಾಲೂಕಿನ ಮತ್ತಿಘಟ್ಟದ ಬಳಿ ಭೂಕುಸಿತ: 1ಎಕರೆ ಅಡಿಕೆ ತೋಟ ನಾಶ

ಘಟನೆಯಲ್ಲಿ ಸುಮಾರು ಒಂದು ಎಕರೆ ಅಡಿಕೆ ತೋಟನಾಶವಾಗಿದೆ. 20 ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ ಎಂಬ ಮಾಹಿತಿ ದೊರೆತಿದೆ.

ಶಿರಸಿ ತಾಲೂಕಿನ ಮತ್ತಿಘಟ್ಟದ ಬಳಿ ಭೂಕುಸಿತ: 1ಎಕರೆ ಅಡಿಕೆ ತೋಟ ನಾಶ
ಅಡಿಕೆ ತೋಟ ನೆಲಸಮ
Follow us
guruganesh bhat
|

Updated on:Mar 23, 2021 | 6:31 PM

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮತ್ತಿಘಟ್ಟದ ಕೃಷಿ ಜಮೀನಿನಲ್ಲಿ ಭೂಕುಸಿತ ಸಂಭವಿಸಿದೆ. ಭೂಕುಸಿತದಿಂದ ಸುಮಾರು ಒಂದು ಎಕರೆ ಅಡಿಕೆ ತೋಟ ನಾಶವಾಗಿದ್ದು 20 ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ. ಹಿಂದಿನ ವರ್ಷದ ಮಳೆಗಾಲದಲ್ಲಿ ಸುರಿದ ಭಾರಿ ಮಳೆಗೆ ಬಿರುಕು ಬಿಟ್ಟಿದ್ದ ಭೂಮಿಯಲ್ಲಿ ಇಂದು ದಿಢೀರ್ ಭೂಕುಸಿತವಾಗಿ ಅಡಿಕೆ ತೋಟ ನಾಶವಾಗಿರುವ ಘಟನೆ ನಡೆದಿದೆ.

ಮತ್ತಿಘಟ್ಟ ಗ್ರಾಮದ ಕೆಳಗಿನಕೇರಿಯ ಮಧುಸೂದನ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಭೂಕುಸಿತ ಸಂಭವಿಸಿದೆ. ಘಟನೆಯಲ್ಲಿ ಸುಮಾರು ಒಂದು ಎಕರೆ ಅಡಿಕೆ ತೋಟನಾಶವಾಗಿದ್ದು 20 ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ ಎನ್ನಲಾಗಿದೆ. ಕಳೆದ ವರ್ಷ ಸುರಿದ ಭಾರಿ ಮಳೆಯಿಂದಾಗಿ ಭೂಮಿ ಬಿರುಕು ಬಿಟ್ಟಿತ್ತು. ಆದರೆ ಇಂದು ದಿಢೀರ್ ಭೂ ಕುಸಿತವಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.

MATTIGHATTA LANDSLIDE

ಭೂಕುಸಿತದ ದೃಶ್ಯ

ಪ್ರತಿವರ್ಷವೂ ಉತ್ತರ ಕನ್ನಡದಲ್ಲಿ ಒಂದಿಲ್ಲೊಂದು ಭೂಕುಸಿತಗಳು ಸಂಭವಿಸುತ್ತಿವೆ. ಹಿಂದಿನ ಮಳೆಗಾಲದಲ್ಲಿ ಯಲ್ಲಾಪುರ ತಾಲೂಕಿನ ಡಬ್ಗುಳಿ, ಅರಬೈಲ್ ಘಾಟ್, ಕೊಡ್ಲಗದ್ದೆ, ಶಿರಸಿ ತಾಲೂಕಿನ ಜಾಜಿಗುಡ್ಡೆ ಬಳಿ ಬುಕುಸಿತವಾಗಿತ್ತು. ಮಲೆನಾಡಿನ ಬೆಟ್ಟ ಗುಡ್ಡಗಳ ಮಣ್ಣು ಶಿಥಿಲವಾಗುತ್ತಿದ್ದು ಅಪಾಯದ ಮುನ್ಸೂಚನೆ ನೀಡಿದೆ.

SIRSI MATTIGHATTA

ಪ್ರತಿವರ್ಷವೂ ಉತ್ತರ ಕನ್ನಡದಲ್ಲಿ ಒಂದಿಲ್ಲೊಂದು ಭೂಕುಸಿತಗಳು ಸಂಭವಿಸುತ್ತಿವೆ.

ಇದನ್ನೂ ಓದಿ: ಸತತ ಮಳೆಗೆ ಉತ್ತರ ಕನ್ನಡದಲ್ಲಿ 1.5ಕಿ.ಮೀ. ಭೂಕುಸಿತ, ಆತಂಕದಲ್ಲಿ ಸ್ಥಳೀಯರು

Uttarakhand Glacier Burst: ಉತ್ತರಾಖಂಡ ದುರಂತಕ್ಕೆ ಏನು ಕಾರಣ? ಭೂಕುಸಿತವೇ? ಹಿಮನದಿ ಸ್ಫೋಟವೇ? ಇಲ್ಲಿದೆ ತಜ್ಞರ ವಿಶ್ಲೇಷಣೆ

Published On - 6:04 pm, Tue, 23 March 21

ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ