AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹವಾಮಾನ ವೈಪರೀತ್ಯ: ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ

ಹವಾಮಾನ ವೈಪರೀತ್ಯದಿಂದ 27 ಮೀನುಗಾರರಿದ್ದ ಗೋವಾ ಮೂಲದ ಬೋಟ್ ಅರಬ್ಬಿ ಸಮುದ್ರದಲ್ಲಿ ಕಾಣೆಯಾಗಿದೆ. ನವೆಂಬರ್​​ 29 ರಂದು ಗೋವಾದ ಪಣಜಿಯಿಂದ ಹೊರಟಿದ್ದ ಬೋಟ್ ಅಂಕೋಲ ತಾಲೂಕಿನ ಬೆಲೆಕೇರಿ ಸಮುದ್ರ ಭಾಗದಲ್ಲಿ ಕೊನೆಯ ಲೊಕೇಷನ್ ತೋರಿಸಿತ್ತು.

ಹವಾಮಾನ ವೈಪರೀತ್ಯ: ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 05, 2023 | 7:57 AM

Share

ಉತ್ತರ ಕನ್ನಡ, ಡಿಸೆಂಬರ್​ 05: ಹವಾಮಾನ ವೈಪರೀತ್ಯದಿಂದ (Weather extremes) 27 ಮೀನುಗಾರರಿದ್ದ (Fishers) ಗೋವಾ (Goa) ಮೂಲದ ಬೋಟ್ ಅರಬ್ಬಿ ಸಮುದ್ರದಲ್ಲಿ (Arabian Sea) ಕಾಣೆಯಾಗಿದೆ. ನವೆಂಬರ್​​ 29 ರಂದು ಗೋವಾದ ಪಣಜಿಯಿಂದ ಹೊರಟಿದ್ದ ಬೋಟ್ ಅಂಕೋಲ ತಾಲೂಕಿನ ಬೆಲೆಕೇರಿ ಸಮುದ್ರ ಭಾಗದಲ್ಲಿ ಕೊನೆಯ ಲೊಕೇಷನ್ ತೋರಿಸಿತ್ತು. ಇಂಜಿನ್‌ನಲ್ಲಿ ಸಮಸ್ಯೆಯಾಗಿ ಸಮುದ್ರದಲ್ಲಿ ಬೋಟ್‌ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬೋಟ್‌ ಮಾಲೀಕ ಮಾಹಿತಿ ಕೋಸ್ಟ್‌ಗಾರ್ಡ್ಸ್‌ಗೆ ಮಾಹಿತಿ ನೀಡಿದ್ದಾರೆ. ಕೋಸ್ಟ್​​ಗಾರ್ಡ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಿಚಾಂಗ್​ ಚಂಡಮಾರುತದ ಪರಿಣಾಮ ಸೋಮವಾರ ಚೆನ್ನೈನಲ್ಲಿ ಭಾರೀ ಮಳೆ ಸುರಿಯಿತು. ಅಲ್ಲದೆ ತಮಿಳುನಾಡಿನ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಉಂಟಾಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ತಮಿಳುನಾಡಿನ ಉತ್ತರ ಕರಾವಳಿ, ಆಂಧ್ರಪ್ರದೇಶ ಮತ್ತು ಯಾನಂನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಚಂಡಮಾರುತ ಇಂದು (ಡಿ.05) ಆಂಧ್ರಪ್ರದೇಶದ ಕಡೆಗೆ ಚಲಿಸಲಿದೆ.

ಇದನ್ನೂ ಓದಿ: ಮಿಚಾಂಗ್ ಚಂಡಮಾರುತ ಎಫೆಕ್ಟ್: ಕರ್ನಾಟಕದಿಂದ ತಮಿಳುನಾಡಿಗೆ ತೆರಳಬೇಕಿದ್ದ 10ಕ್ಕೂ ಹೆಚ್ಚು ರೈಲು ಕ್ಯಾನ್ಸಲ್

ಮಿಚಾಂಗ್​ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೂ ಬೀರಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಕಳೆದ ಎರಡು ದಿನಗಳಿಂದ ತಂಪು ಗಾಳಿ ಬೀಸುತ್ತಿದೆ. ಜೊತೆಗೆ ಮೋಡ ಕವಿದ ವಾತಾವರಣೆವಿದೆ. ಬೆಂಗಳೂರಿನ ಸುತ್ತಮುತ್ತ ಮಂಗಳವಾರ ಮೋಡ ಕವಿದ ವಾತಾವರಣ ಇದೆ. ಕೆಲವಡೆ ಸಾಧಾರಣ ಮಳೆಯಾಗಲಿದೆ. ಬೆಳಗಿನ ಜಾವದಿಂದಲೇ ಮಂಜು ಮುಸುಕಿದ ವಾತಾವರಣ ಇದೆ. ಗರಿಷ್ಠ ಉಷ್ಣಾಂಶ 24 ಇದ್ದರೆ, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್​ ಇರಲಿದೆ.

ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವಿದೆ. ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ವರುಣರಾಯ ಕೃಪೆ ತೋರಲಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
ಡಿವೈಡರ್ ಹಾರಿ ಬಸ್​ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಡಿವೈಡರ್ ಹಾರಿ ಬಸ್​ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!
ಗಿಲ್ಲಿಯ ‘ದೊಡ್ಡವ್ವ..’ ಹಾಡು ಹೇಳಿದ ಅಶ್ವಿನಿ ತಾಯಿ
ಗಿಲ್ಲಿಯ ‘ದೊಡ್ಡವ್ವ..’ ಹಾಡು ಹೇಳಿದ ಅಶ್ವಿನಿ ತಾಯಿ
ಚಿತ್ರದುರ್ಗ ಬಸ್ ದುರಂತ: 42 ಶಾಲಾ ಮಕ್ಕಳು ಪವಾಡಸದೃಶವಾಗಿ ಪಾರು
ಚಿತ್ರದುರ್ಗ ಬಸ್ ದುರಂತ: 42 ಶಾಲಾ ಮಕ್ಕಳು ಪವಾಡಸದೃಶವಾಗಿ ಪಾರು
ಬಸ್ ಹೊತ್ತಿ ಉರಿದ ಭಯಾನಕ ಘಟನೆ ಬಗ್ಗೆ ವಿವರಿಸಿದ ಕ್ಲೀನರ್
ಬಸ್ ಹೊತ್ತಿ ಉರಿದ ಭಯಾನಕ ಘಟನೆ ಬಗ್ಗೆ ವಿವರಿಸಿದ ಕ್ಲೀನರ್
ಬಿಗ್ ಬಾಸ್ ಮನೆಗೆ ಬಂತು ಗಿಲ್ಲಿ ಕುಟುಂಬ; ಮಾಡಿದ ಕಂಪ್ಲೇಂಟ್ ಏನು?
ಬಿಗ್ ಬಾಸ್ ಮನೆಗೆ ಬಂತು ಗಿಲ್ಲಿ ಕುಟುಂಬ; ಮಾಡಿದ ಕಂಪ್ಲೇಂಟ್ ಏನು?
ಎಲ್ಲೆಲ್ಲೂ ‘45’, ‘ಮಾರ್ಕ್’ ಸಿನಿಮಾ ಸಂಭ್ರಮ; ಅದ್ದೂರಿ ಸ್ವಾಗತ
ಎಲ್ಲೆಲ್ಲೂ ‘45’, ‘ಮಾರ್ಕ್’ ಸಿನಿಮಾ ಸಂಭ್ರಮ; ಅದ್ದೂರಿ ಸ್ವಾಗತ
ಚಿತ್ರದುರ್ಗ ಭೀಕರ ಬಸ್ ಅಪಘಾತ: ಬಸ್ ಚಾಲಕ, ನಿರ್ವಾಹಕ ಗ್ರೇಟ್ ಎಸ್ಕೇಪ್
ಚಿತ್ರದುರ್ಗ ಭೀಕರ ಬಸ್ ಅಪಘಾತ: ಬಸ್ ಚಾಲಕ, ನಿರ್ವಾಹಕ ಗ್ರೇಟ್ ಎಸ್ಕೇಪ್