AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯಲು ಹಣ ಕೊಡಲಿಲ್ಲವೆಂದು ಪತ್ನಿಯನ್ನು ಅಮಾನುಷವಾಗಿ ಹತ್ಯೆಗೈದ ಪತಿ: ತಂದೆ ಕೃತ್ಯಕ್ಕೆ ಕೈಜೋಡಿಸಿದ ಪಾಪಿ ಮಗ

ಕುಡಿತದ ಚಟಕ್ಕೆ ಒಳಗಾಗಿದ್ದ ಪತಿ, ತನ್ನ ಪತ್ನಿಯನ್ನು ಅಮಾನುಷವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಇನ್ನು ತಂದೆಯ ಈ ಕೃತ್ಯಕ್ಕೆ ಮಗನೂ ಕೈಜೋಡಿಸಿದ್ದು ದುರಂತ.

ಕುಡಿಯಲು ಹಣ ಕೊಡಲಿಲ್ಲವೆಂದು ಪತ್ನಿಯನ್ನು ಅಮಾನುಷವಾಗಿ ಹತ್ಯೆಗೈದ ಪತಿ: ತಂದೆ ಕೃತ್ಯಕ್ಕೆ ಕೈಜೋಡಿಸಿದ ಪಾಪಿ ಮಗ
ಕೊಲೆ ಆರೋಪಿಗಳು
TV9 Web
| Edited By: |

Updated on:Dec 07, 2022 | 9:22 PM

Share

ಕಾರವಾರ: ಮದ್ಯ ಕುಡಿಯಲು ಹಣ ನೀಡಲಿಲ್ಲ ಎನ್ನುವ ಒಂದು ಕಾರಣಕ್ಕೆ ಪತಿರಾಯನೊಬ್ಬ ಕಟ್ಟಿಕೊಂಡ ಪತ್ನಿಯನ್ನೇ ಕೊಂದಿದ್ದಾನೆ (Murder).  ತಂದೆಯ ಈ ಕೃತ್ಯಕ್ಕೆ ಮಗನೂ ಕೈಜೋಡಿಸಿದ್ದಾನೆ ಎನ್ನುವುದು ದುರಂತ. ಉತ್ತರ ಕನ್ನಡ ಜಿಲ್ಲೆ (Uttara Kannada District) ಕುಮಟಾ ತಾಲೂಕಿನ ಕೂಜಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಆರೋಪಿಗಳಾದ ಪತಿ ವಿಶ್ವೇಶ್ವರ ಭಟ್(69), ಮಗ ಮಧುಕರ ಭಟ್​(33) ಕುಡಿತದ ಚಟ ಬೆಳೆಸಿಕೊಂಡಿದ್ದರು. ಇಂದು(ಡಿ.07) ಕುಡಿಯಲು ಹಣ ನೀಡಲಿಲ್ಲವೆಂದು ಇಬ್ಬರು ಸೇರಿ ಗೀತಾ ಭಟ್​ಳನ್ನು (64) ಕೊಲೆ ಮಾಡಿದ್ದಾರೆ. ಸದ್ಯ ಆರೋಪಿ ಮಧುಕರ್ ಭಟ್​ನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಗದಗನಲ್ಲಿ ಮತ್ತೊಂದು ಚಾಕು ಇರಿತ: ಒಂದೇ ವಾರದಲ್ಲಿ ಮೂರು ಪ್ರಕರಣ, ಬೆಚ್ಚಿಬಿದ್ದ ಜನ

ದಿನನಿತ್ಯ ಮನೆಯಲ್ಲಿ ತನ್ನ ಕುಡಿತಕ್ಕೆ ಹಣ ನೀಡುವಂತೆ ಗೀತಾ ಭಟ್​ಳ ಮಗ ಮತ್ತು ಗಂಡ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಇವರ ಮನೆಯಲ್ಲಿ ಕುಡಿತದ ಕಾರಣದಿಂದ ದಿನವೂ ಕಲಹ ನಡೆಯುತ್ತಲೇ ಇತ್ತು. ಎದಿನಂತೆ ಇಂದೂ ಕೂಡಾ ಹಣ ನೀಡುವಂತೆ ಜಗಳವಾಡಿದ್ದಾರೆ. ಆದರೆ ಹಣ ನೀಡದ ಕಾರಣ ತಂದೆ-ಮಗ ಸೇರಿಕೊಂಡು ಗೀತಾ ಭಟ್​ಳನ್ನು ಕಟ್ಟಿಗೆಯಿಂದ ಹೊಡೆದು ಕೊಂದ್ದಿದ್ದಾರೆ.

ಇನ್ನು ವಿಷಯ ತಿಳಿದು ಸ್ಥಳಕ್ಕೆ ಕುಮಟಾ ಪಿಎಸ್‌ಐ ನವೀನಕುಮಾರ ಹಾಗೂ ಸಿಬ್ಬಂದಿಗಳು ಭೇಟಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:21 pm, Wed, 7 December 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ