AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣ; ಕಾರವಾರ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದ. ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣ; ಕಾರವಾರ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಸಾಂಕೇತಿಕ ಚಿತ್ರ
TV9 Web
| Edited By: sandhya thejappa|

Updated on:Jun 18, 2022 | 4:29 PM

Share

ಕಾರವಾರ: ಇಂದು (ಜೂನ್ 18) ಪ್ರಕಟವಾದ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ (PUC Result) ಅನುತ್ತೀರ್ಣರಾದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿದ್ದಾನೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಗ್ರಾಮದಲ್ಲಿ ಸಂಭವಿಸಿದೆ. ಪ್ರಣಮ್ ಈಶ್ವರ್ ನಾಯ್ಕ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಎ.ವಿ ಬಾಳಿಗ ಕಾಲೇಜಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡಿದ್ದ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದ. ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಯಾವ ಯಾವ ಜಿಲ್ಲೆಯಲ್ಲಿ ಎಷ್ಟು ಫಲಿತಾಂಶ? ದಕ್ಷಿಣ ಕನ್ನಡ ಶೇ.88.02, ಉಡುಪಿ ಶೇ.86.38, ವಿಜಯಪುರ ಶೇ.77.14, ಬೆಂಗಳೂರು ದಕ್ಷಿಣ ಶೇ.76.24, ಉತ್ತರ ಕನ್ನಡ ಶೇ.74.33, ಕೊಡಗು ಶೇ.73.22, ಬೆಂಗಳೂರು ಉತ್ತರ ಶೇ.72.01, ಶಿವಮೊಗ್ಗ ಶೇ.70.14, ಚಿಕ್ಕಮಗಳೂರು ಶೇ.69.42, ಬಾಗಲಕೋಟೆ ಶೇ.68.69, ಚಿಕ್ಕೋಡಿ ಶೇ.68, ಬೆಂಗಳೂರು ಗ್ರಾಮಾಂತರ ಶೇ.67.86, ಹಾಸನ ಶೇ.67.28, ಹಾವೇರಿ ಶೇ.66.64, ಧಾರವಾಡ ಶೇ.65.66, ಚಿಕ್ಕಬಳ್ಳಾಪುರ ಶೇ.64.49, ಮೈಸೂರು ಶೇ.64.45, ಚಾಮರಾಜನಗರ ಶೇ.63.02, ದಾವಣಗೆರೆ ಶೇ.62.72, ಕೊಪ್ಪಳ ಶೇ.62.04, ಬೀದರ್ ಶೇ.60.78, ಗದಗ ಶೇ.60.63, ಯಾದಗಿರಿ ಶೇ.60.59, ಕೋಲಾರ ಶೇ.60.41, ರಾಮನಗರ ಶೇ.60.22, ಬೆಳಗಾವಿ ಶೇ.59.88, ಕಲಬುರಗಿ ಶೇ.59.17, ತುಮಕೂರು ಶೇ.58.90, ಮಂಡ್ಯ ಶೇ.58.77, ರಾಯಚೂರು ಶೇ.57.93, ಬಳ್ಳಾರಿ ಶೇ.55.48, ಚಿತ್ರದುರ್ಗ ಶೇ.49.31 ಫಲಿತಾಂಶ ಪಡೆದುಕೊಂಡಿದೆ.

ಕಳೆದ ಎಪ್ರಿಲ್ 23 ರಿಂದ ಮೇ 18ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಈ ಪೈಕಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ದಾಖಲಾಗಿದ್ದರು. ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಕಲಾ ವಿಭಾಗಕ್ಕೆ 2,28,167 ಮಂದಿ, ವಾಣಿಜ್ಯ ವಿಭಾಗಕ್ಕೆ 2,45,519 ಮಂದಿ ಮತ್ತು ವಿಜ್ಞಾನ ವಿಭಾಗದಲ್ಲಿ 2,10,569 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಇದನ್ನೂ ಓದಿ
Image
Viral Video: ಮದುವೆಯ ಸಂಭ್ರಮದಲ್ಲಿ ತೇಲಾಡಿದ ವರನಿಂದ ವಧುವಿಗೆ ಒಂದೇ ಒಂದು ಕಿಕ್! ವಿಡಿಯೋ ವೈರಲ್
Image
WI vs BAN: ಬಿಟ್ಟಿದ್ದು ಬರೋಬ್ಬರಿ 24 ಕ್ಯಾಚ್! ಗಲ್ಲಿ ಕ್ರಿಕೆಟ್ ನೆನಪಿಸಿದ ಬಾಂಗ್ಲಾ ತಂಡ; ಗೆಲುವಿನ ಸನಿಹದಲ್ಲಿ ವಿಂಡೀಸ್
Image
Assam Flood: ಅಸ್ಸಾಂನಲ್ಲಿ ಭಾರೀ ಪ್ರವಾಹದಿಂದ ಜನಜೀವನ ಅಸ್ತವ್ಯಸ್ತ; 19 ಲಕ್ಷ ಜನರಿಗೆ ಸಂಕಷ್ಟ
Image
IND vs SA 5th T20 Match Live Streaming: ಹರಿಣಗಳನ್ನು ಮಣಿಸಿ ಸರಣಿ ಗೆಲ್ಲುತ್ತಾ ಭಾರತ? ಪಂದ್ಯದ ಬಗ್ಗೆ ಒಂದಿಷ್ಟು ಮಾಹಿತಿ

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:43 pm, Sat, 18 June 22

Follow Us
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ