AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಲ್ಲಾಪುರ: ಗುಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ, 10 ಜನ ಸಾವು

ಬುಧವಾರ ಬೆಳ್ಳಂಬೆಳಗ್ಗೆಯೇ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಗುಳ್ಳಾಪುರ ಘಟ್ಟ ಪ್ರದೇಶದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ 10 ಜನ ದುರ್ಮರಣಕ್ಕೀಡಾಗಿದ್ದರೆ, 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ವಿವರಗಳು ಇಲ್ಲಿವೆ.

ಯಲ್ಲಾಪುರ: ಗುಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ, 10 ಜನ ಸಾವು
ಪಲ್ಟಿಯಾದ ಲಾರಿ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: Ganapathi Sharma

Updated on:Jan 22, 2025 | 11:51 AM

ಕಾರವಾರ, ಜನವರಿ 22: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.​ ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ತರಕಾರಿ ತುಂಬಿದ್ದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು.

ಮೃತರು ಹಾವೇರಿ ಜಿಲ್ಲೆ ಸವಣೂರು ಮೂಲದವರೆಂಬ ಮಾಹಿತಿ ದೊರೆತಿದೆ. ನಸುಕಿನ‌ ಜಾವ ರಸ್ತೆಯಲ್ಲಿ ಮಂಜು ಮುಸುಕಿದ್ದರಿಂದ ಲಾರಿ ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ರೇನ್ ಮೂಲಕ ಶವಗಳನ್ನು ಹೊರತೆಗೆಯಲಾಗುತ್ತಿದೆ.

ಘಟನಾ ಸ್ಥಳಕ್ಕೆ ಎಸ್​ಪಿ ನಾರಾಯಣ್​​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜತೆಗೆ, ಅಪಘಾತದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.

ಮೃತಪಟ್ಟವರ ವಿವರ

  • ಫಯಾಜ್ ಜಮಖಂಡಿ – 45 ವರ್ಷ
  • ವಾಸೀಂ ಮುಡಗೇರಿ –  35 ವರ್ಷ
  • ಇಜಾಜ್ ಮುಲ್ಲಾ – 20 ವರ್ಷ
  • ಸಾದೀಕ್ ಭಾಷ್ – 30 ವರ್ಷ
  • ಗುಲಾಮ್ ಹುಷೇನ್ ಜವಳಿ – 40 ವರ್ಷ
  • ಇಮ್ತಿಯಾಜ್ ಮುಳಕೇರಿ – 36 ವರ್ಷ
  • ಅಲ್ಪಾಜ್ ಜಾಫರ್ ಮಂಡಕ್ಕಿ – 25 ವರ್ಷ
  • ಜೀಲಾನಿ ಅಬ್ದುಲ್ ಜಖಾತಿ – 25 ವರ್ಷ
  • ಅಸ್ಲಂ ಬಾಬುಲಿ ಬೆಣ್ಣಿ – 24 ವರ್ಷ

‘ಟಿವಿ9’ ಜೊತೆ ಘಟನೆ ವಿವರ ಹಂಚಿಕೊಂಡ ಗಾಯಾಳು

ಭೀಕರ ಅಪಘಾತದ ಬಗ್ಗೆ ಗಾಯಾಳು ಮೊಹಮ್ಮದ್‌ ‘ಟಿವಿ9’ ಜತೆ ಮಾಹಿತಿ ಹಂಚಿಕೊಂಡಿದ್ದಾರೆ. ನಸುಕಿನ 3.30 ಗಂಟೆಗೆ ಅಪಘಾತ ಆಗಿದೆ. ನಾನು ಮಲಗಿದ್ದೆ, ಟೈರ್ ಬ್ಲಾಸ್ಟ್ ಆದ ಹಾಗೆ ಸದ್ದು ಕೇಳಿತು. ನಂತರ ಘಟನೆ ಸಂಭವಿಸಿತು ಎಂದು ಅವರು ತಿಳಿಸಿದ್ದಾರೆ.

ನಾವೆಲ್ಲ ಪ್ರತಿ ವಾರ ಸಂತೆಗೆ ಹೋಗುತ್ತೇವೆ. ಸವಣೂರಿನಿಂದ ಸಂತೆಗೆ ಹೋಗುತ್ತಿದ್ದೆವು. ತರಕರಾರಿ, ಹಣ್ಣು ವ್ಯಾಪಾರ ಮಾಡುತ್ತಿದ್ದೆವು. ಘಟನೆ ಸಂಭವಿಸಿದಾಗ ಎಲ್ಲ ತರಕಾರಿಗಳು ನಮ್ಮ ಮೈ ಮೇಲೆ ಬಿದ್ದಿದ್ದವು ಎಂದು ಮೊಹಮ್ಮದ್‌ ಹೇಳಿದ್ದಾರೆ.

ಇದನ್ನೂ ಓದಿ: ಗರ್ಭ ಧರಿಸಿದ ಹಸು ತಲೆ ಕಡಿದು ಮಾಂಸ ಕದ್ದ ಕೇಸ್​: ಮೂರೇ ದಿನದಲ್ಲಿ ಆರೋಪಿಗಳ ಬಂಧನ

ಸವಣೂರು ಪಟ್ಟಣದಲ್ಲಿ ನಿರವಮೌನ

ಮೃತರ ತವರೂರಾದ ಸವಣೂರು ಪಟ್ಟಣದಲ್ಲಿ ನಿರವಮೌನ ಆವರಿಸಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸೂಕ್ತವಾದ ಪರಿಹಾರ ಕೊಡುವಂತೆ ಸ್ಥಳಿಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಒಂದೇ ಕಡೆ 10 ಜನರಿಗೂ ಜನಾದಿಕಿ ನಮಾಜ್ ಮಾಡಲು ನಿರ್ಧಾರ ಕೈಗೊಳ್ಳಲಾಗಿದ್ದು, ಸಣೂರು ಪಟ್ಟಣದ ಇದ್ಗಾ ಮೈದಾನದಲ್ಲಿ ನಮಾಜ್ ನಡೆಯಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:24 am, Wed, 22 January 25

ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು