AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಖಂಡನೊಂದಿಗೆ ಮಹಿಳೆಯ ಹೆಸರು ಬಳಕೆ ಆರೋಪ: ಯುವಕನೋರ್ವನಿಗೆ ಹಿಗ್ಗಾಮುಗ್ಗಾ ಥಳಿತ

ಕಾಂಗ್ರೆಸ್ ಮುಖಂಡನೊಂದಿಗೆ ಮಹಿಳೆಯ ಹೆಸರು ಸೇರಿಸಿ ಕೆಟ್ಟ ಪದ ಬಳಕೆ ಆರೋಪ ಹಿನ್ನಲೆ, ಯುವಕನೋರ್ವನಿಗೆ ಮಹಿಳೆ ಚಪ್ಪಲಿಯಿಂದ ಹಿಗ್ಗಾಮುಗ್ಗಾ ತಳಿಸಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಅಳ್ವಕೋಡಿಯಲ್ಲಿ ನಡೆದಿದೆ. ಹಲ್ಲೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಲ್ಲೆ ನಡೆಸಿದವರ ವಿರುದ್ಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕಾಂಗ್ರೆಸ್ ಮುಖಂಡನೊಂದಿಗೆ ಮಹಿಳೆಯ ಹೆಸರು ಬಳಕೆ ಆರೋಪ: ಯುವಕನೋರ್ವನಿಗೆ ಹಿಗ್ಗಾಮುಗ್ಗಾ ಥಳಿತ
ಯುವಕನಿಗೆ ಥಳಿತ
ವಿನಾಯಕ ಬಡಿಗೇರ್​
| Edited By: |

Updated on:Oct 18, 2023 | 8:10 PM

Share

ಕಾರವಾರ, ಅಕ್ಟೋಬರ್​​​​ 18: ಕಾಂಗ್ರೆಸ್ ಮುಖಂಡ (Congress leader) ನೊಂದಿಗೆ ಮಹಿಳೆಯ ಹೆಸರು ಸೇರಿಸಿ ಕೆಟ್ಟ ಪದ ಬಳಕೆ ಆರೋಪ ಹಿನ್ನಲೆ, ಯುವಕನೋರ್ವನಿಗೆ ಮಹಿಳೆ ಚಪ್ಪಲಿಯಿಂದ ಹಿಗ್ಗಾಮುಗ್ಗಾ ತಳಿಸಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಅಳ್ವಕೋಡಿಯಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡ ಗಜೂ ನಾಯ್ಕ ಅವರ ಸ್ಟೇಪ್ನಿ ಎಂದು ಮಹಿಳೆ ಗಂಡನ ಮುಂದೆ ವ್ಯಕ್ತಿಯೋರ್ವ ನಿಂದಿಸಿದ ಆರೋಪದ ಮೇಲೆ ಇಬ್ಬರು ತಳಿಸಿ ಅದನ್ನ ವಿಡಿಯೋ ಮಾಡಿ ಸಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.

ಕುಮಟಾದ ಕೃಷ್ಣ ನಾಯ್ಕ ಎಂಬ ವ್ಯಕ್ತಿಯೇ ಹಲ್ಲೆಗೊಳಗಾದವನಾಗಿದ್ದಾನೆ. ಕಾಂಗ್ರೆಸ್ ಮುಖಂಡ ಗಜೂ ನಾಯ್ಕ ಮತ್ತು ಅಳ್ವೆಕೋಡಿಯ ಸವಿತಾ ಪಟಗಾರ್ ಇಬ್ಬರ ನಡುವೆ ಸಂಬಂಧವಿದೆ ಎಂದು ಸವಿತಾ ಅವರ ಗಂಡನ ಮುಂದೆ ಈತ ಹೇಳಿ ನಿಂದಿಸಿದ್ದಾನೆ. ವಿಷಯ ತಿಳಿದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಲ್ಲೆ ನಡೆಸಿದವರ ವಿರುದ್ಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಆರೋಪಿಯನ್ನ ಬಂಧಿಸಲು ಹೋಗಿದ್ದ ಪೊಲೀಸ್​ ಸಿಬ್ಬಂದಿಗೆ ಚಾಕು ಇರಿತ; ಮುಂದೆನಾಯ್ತು?

ಮತ್ತೊಂದು ಪ್ರಕರಣದಲ್ಲಿ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ಬಳಿಯಿರುವ ದುಬೈ ಮಾರ್ಕೆಟ್​ನಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿದ ಯುವಕರ ಗುಂಪೊಂದು ಅಂಗಡಿ ಮಾಲೀಕನಿಗೆ ತಳಿಸಿದ ಘಟನೆ ಇತ್ತೀಚೆಗೆ ನಡೆದಿತ್ತು. ಗ್ರಾಹಕನೋರ್ವ ಪವರ್ ಬ್ಯಾಂಕ್ ರಿಪೇರಿಗೆಂದು ಅಂಗಡಿಗೆ ಬಂದಿದ್ದ. ಅಂಗಡಿ ಮಾಲೀಕ ನಾವು ಮೊಬೈಲ್ ಹೊರತು ಬೇರೆ ಯಾವುದನ್ನೂ ರಿಪೇರಿ ಮಾಡುವುದಿಲ್ಲ ಎಂದಿದ್ದ. ಈ ವೇಳೆ ಮಾತಿಗೆ ಮಾತು ಬೆಳೆದು ಬಂದಿದ್ದ ಯುವಕ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದ.

ಮಹಿಳೆಯಿಂದ ಮೊಬೈಲ್ ಕಿತ್ತು ಪರಾರಿಯಾದ ದುಷ್ಕರ್ಮಿಗಳು

ಬೆಂಗಳೂರು: ದುಷ್ಕರ್ಮಿಗಳು ಮಹಿಳೆಯಿಂದ ಮೊಬೈಲ್ ಕಿತ್ತು ಪರಾರಿಯಾಗಿರುವಂತಹ ಘಟನೆ ಬಾಣಸ್ವಾಡಿ ರೈಲ್ವೇ ನಿಲ್ದಾಣದ ಬಳಿ ನಡೆದಿತ್ತು. ಮಹಿಳೆಯೊಬ್ಬಳೇ ಹೋಗುತ್ತಿರುವುದನ್ನು ಒಂದು ಬಾರಿ ನೋಡಿ, ಮತ್ತೆ ವಾಪಾಸ್ ಬಂದು ಮೊಬೈಲ್ ಕಸಿದು ಪರಾರಿಯಾಗಿದ್ದರು.

ಇದನ್ನೂ ಓದಿ: ಕಾರವಾರ: ಕತ್ತು ಸೀಳಿ ಪತ್ನಿಯನ್ನೇ ಭೀಕರವಾಗಿ ಹತ್ಯೆಗೈದ ಪತಿ, ಎರಡು ಮಕ್ಕಳು ಅನಾಥ

ಬೈಕ್​ನಲ್ಲಿ ಬಂದ ಇಬ್ಬರಿಂದ ಕೃತ್ಯ ಎಸಗಲಾಗಿದ್ದು, ನಿನ್ನೆ ರಾತ್ರಿ ವೇಳೆ 7 ಗಂಟೆಯ ಸಂಧರ್ಭದಲ್ಲಿ ನಡೆದಿತ್ತು. ಈ ಕುರಿತು ಬಾಣಸ್ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:07 pm, Wed, 18 October 23

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ