AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಖಂಡನೊಂದಿಗೆ ಮಹಿಳೆಯ ಹೆಸರು ಬಳಕೆ ಆರೋಪ: ಯುವಕನೋರ್ವನಿಗೆ ಹಿಗ್ಗಾಮುಗ್ಗಾ ಥಳಿತ

ಕಾಂಗ್ರೆಸ್ ಮುಖಂಡನೊಂದಿಗೆ ಮಹಿಳೆಯ ಹೆಸರು ಸೇರಿಸಿ ಕೆಟ್ಟ ಪದ ಬಳಕೆ ಆರೋಪ ಹಿನ್ನಲೆ, ಯುವಕನೋರ್ವನಿಗೆ ಮಹಿಳೆ ಚಪ್ಪಲಿಯಿಂದ ಹಿಗ್ಗಾಮುಗ್ಗಾ ತಳಿಸಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಅಳ್ವಕೋಡಿಯಲ್ಲಿ ನಡೆದಿದೆ. ಹಲ್ಲೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಲ್ಲೆ ನಡೆಸಿದವರ ವಿರುದ್ಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕಾಂಗ್ರೆಸ್ ಮುಖಂಡನೊಂದಿಗೆ ಮಹಿಳೆಯ ಹೆಸರು ಬಳಕೆ ಆರೋಪ: ಯುವಕನೋರ್ವನಿಗೆ ಹಿಗ್ಗಾಮುಗ್ಗಾ ಥಳಿತ
ಯುವಕನಿಗೆ ಥಳಿತ
ವಿನಾಯಕ ಬಡಿಗೇರ್​
| Edited By: |

Updated on:Oct 18, 2023 | 8:10 PM

Share

ಕಾರವಾರ, ಅಕ್ಟೋಬರ್​​​​ 18: ಕಾಂಗ್ರೆಸ್ ಮುಖಂಡ (Congress leader) ನೊಂದಿಗೆ ಮಹಿಳೆಯ ಹೆಸರು ಸೇರಿಸಿ ಕೆಟ್ಟ ಪದ ಬಳಕೆ ಆರೋಪ ಹಿನ್ನಲೆ, ಯುವಕನೋರ್ವನಿಗೆ ಮಹಿಳೆ ಚಪ್ಪಲಿಯಿಂದ ಹಿಗ್ಗಾಮುಗ್ಗಾ ತಳಿಸಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಅಳ್ವಕೋಡಿಯಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡ ಗಜೂ ನಾಯ್ಕ ಅವರ ಸ್ಟೇಪ್ನಿ ಎಂದು ಮಹಿಳೆ ಗಂಡನ ಮುಂದೆ ವ್ಯಕ್ತಿಯೋರ್ವ ನಿಂದಿಸಿದ ಆರೋಪದ ಮೇಲೆ ಇಬ್ಬರು ತಳಿಸಿ ಅದನ್ನ ವಿಡಿಯೋ ಮಾಡಿ ಸಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.

ಕುಮಟಾದ ಕೃಷ್ಣ ನಾಯ್ಕ ಎಂಬ ವ್ಯಕ್ತಿಯೇ ಹಲ್ಲೆಗೊಳಗಾದವನಾಗಿದ್ದಾನೆ. ಕಾಂಗ್ರೆಸ್ ಮುಖಂಡ ಗಜೂ ನಾಯ್ಕ ಮತ್ತು ಅಳ್ವೆಕೋಡಿಯ ಸವಿತಾ ಪಟಗಾರ್ ಇಬ್ಬರ ನಡುವೆ ಸಂಬಂಧವಿದೆ ಎಂದು ಸವಿತಾ ಅವರ ಗಂಡನ ಮುಂದೆ ಈತ ಹೇಳಿ ನಿಂದಿಸಿದ್ದಾನೆ. ವಿಷಯ ತಿಳಿದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಲ್ಲೆ ನಡೆಸಿದವರ ವಿರುದ್ಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಆರೋಪಿಯನ್ನ ಬಂಧಿಸಲು ಹೋಗಿದ್ದ ಪೊಲೀಸ್​ ಸಿಬ್ಬಂದಿಗೆ ಚಾಕು ಇರಿತ; ಮುಂದೆನಾಯ್ತು?

ಮತ್ತೊಂದು ಪ್ರಕರಣದಲ್ಲಿ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ಬಳಿಯಿರುವ ದುಬೈ ಮಾರ್ಕೆಟ್​ನಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿದ ಯುವಕರ ಗುಂಪೊಂದು ಅಂಗಡಿ ಮಾಲೀಕನಿಗೆ ತಳಿಸಿದ ಘಟನೆ ಇತ್ತೀಚೆಗೆ ನಡೆದಿತ್ತು. ಗ್ರಾಹಕನೋರ್ವ ಪವರ್ ಬ್ಯಾಂಕ್ ರಿಪೇರಿಗೆಂದು ಅಂಗಡಿಗೆ ಬಂದಿದ್ದ. ಅಂಗಡಿ ಮಾಲೀಕ ನಾವು ಮೊಬೈಲ್ ಹೊರತು ಬೇರೆ ಯಾವುದನ್ನೂ ರಿಪೇರಿ ಮಾಡುವುದಿಲ್ಲ ಎಂದಿದ್ದ. ಈ ವೇಳೆ ಮಾತಿಗೆ ಮಾತು ಬೆಳೆದು ಬಂದಿದ್ದ ಯುವಕ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದ.

ಮಹಿಳೆಯಿಂದ ಮೊಬೈಲ್ ಕಿತ್ತು ಪರಾರಿಯಾದ ದುಷ್ಕರ್ಮಿಗಳು

ಬೆಂಗಳೂರು: ದುಷ್ಕರ್ಮಿಗಳು ಮಹಿಳೆಯಿಂದ ಮೊಬೈಲ್ ಕಿತ್ತು ಪರಾರಿಯಾಗಿರುವಂತಹ ಘಟನೆ ಬಾಣಸ್ವಾಡಿ ರೈಲ್ವೇ ನಿಲ್ದಾಣದ ಬಳಿ ನಡೆದಿತ್ತು. ಮಹಿಳೆಯೊಬ್ಬಳೇ ಹೋಗುತ್ತಿರುವುದನ್ನು ಒಂದು ಬಾರಿ ನೋಡಿ, ಮತ್ತೆ ವಾಪಾಸ್ ಬಂದು ಮೊಬೈಲ್ ಕಸಿದು ಪರಾರಿಯಾಗಿದ್ದರು.

ಇದನ್ನೂ ಓದಿ: ಕಾರವಾರ: ಕತ್ತು ಸೀಳಿ ಪತ್ನಿಯನ್ನೇ ಭೀಕರವಾಗಿ ಹತ್ಯೆಗೈದ ಪತಿ, ಎರಡು ಮಕ್ಕಳು ಅನಾಥ

ಬೈಕ್​ನಲ್ಲಿ ಬಂದ ಇಬ್ಬರಿಂದ ಕೃತ್ಯ ಎಸಗಲಾಗಿದ್ದು, ನಿನ್ನೆ ರಾತ್ರಿ ವೇಳೆ 7 ಗಂಟೆಯ ಸಂಧರ್ಭದಲ್ಲಿ ನಡೆದಿತ್ತು. ಈ ಕುರಿತು ಬಾಣಸ್ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:07 pm, Wed, 18 October 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?