AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಧನಿಂದ ಅತ್ಯಾಚಾರ ಪ್ರಯತ್ನ ಆರೋಪ; ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಬ್ಬಿನಹೊಳೆ ಬಳಿ ಸಿ.ಆರ್.ಪಿ.ಎಫ್​ ನಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ಸಂಬಂಧದಲ್ಲಿ ಅಕ್ಕನ ಗಂಡನ ತಮ್ಮನಾಗಿರುವ  ಕೊಟ್ರೇಶ್ (46 ವರ್ಷ) ಎಂಬಾತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯೋಧನಿಂದ ಅತ್ಯಾಚಾರ ಪ್ರಯತ್ನ ಆರೋಪ; ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಆರೋಪಿ ಯೋಧ
ಸೂರಜ್​, ಮಹಾವೀರ್​ ಉತ್ತುರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 18, 2024 | 7:07 PM

Share

ಉತ್ತರ ಕನ್ನಡ, ಜೂ.18: ಸಿ.ಆರ್.ಪಿ.ಎಫ್​ ನಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ಸಂಬಂಧದಲ್ಲಿ ಅಕ್ಕನ ಗಂಡನ ತಮ್ಮನಾಗಿರುವ  ಕೊಟ್ರೇಶ್ (46 ವರ್ಷ) ಎಂಬಾತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ರೇಣುಕಾ ಪಟ್ಟೇದ (40 ವರ್ಷ) ಎಂಬುವವರು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಧಾರವಾಡದ ಅಣ್ಣಿಗೇರಿ ಮೂಲದ ಯೋಧನಾದ ಕೊಟ್ರೇಶ್,  ಅಕ್ಕನ ಹತ್ತಿರ ಕರೆದುಕೊಂಡು ಹೋಗುತ್ತೇನೆ ಎಂದು ಕರೆದುಕೊಂಡು ಬಂದು ಸಿದ್ದಾಪುರ ತಾಲೂಕಿನ ಕಬ್ಬಿನಹೊಳೆ ಬಳಿ ಕೃತ್ಯಕ್ಕೆ ಯತ್ನಿಸಿದ್ದಾನೆ. ಇದಕ್ಕೆ ಮಹಿಳೆ ಒಪ್ಪದಿದ್ದಾಗ ಕಾರು ಹತ್ತಿಸಿ ಕೊಲೆಗೆ ಪ್ರಯತ್ನಪಟ್ಟಿದ್ದು, ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಐಸ್​ ಕ್ರೀಮ್ ಕೊಡಿಸುವುದಾಗಿ ಬಾಲಕ ಕಿಡ್ನಾಪ್

ಬೆಂಗಳೂರು: ಐಸ್ ಕ್ರೀಮ್ ಕೊಡಿಸುವುದಾಗಿ ಆಮಿಷ ತೋರಿಸಿ ಸಿನಿಮಾ ಸ್ಟೈಲ್​ನಲ್ಲಿ ಬಾಲಕನನ್ನ ಕಿಡ್ನಾಪ್ ಮಾಡಿದ ಘಟನೆ ನಿನ್ನೆ(ಜೂ.17) ಸಂಜೆ 6 ಗಂಟೆ ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡತೋಗೂರು ಬಳಿ ನಡೆದಿದೆ. ರಾಜಸ್ಥಾನ ಮೂಲದ ಮಾರ್ವಾಡಿ ದಂಪತಿಯ 9 ವರ್ಷದ ಬಾಲಕನನ್ನ ಮೊಹಮದ್ ಜಶಿಮುದ್ದೀನ್ ಶೇಕ್(24) ಎಂಬಾತ ಕಿಡ್ನಾಪ್ ಮಾಡಿದ್ದ.

ಇದನ್ನೂ ಓದಿ:ಇನ್​ಸ್ಟಾಗ್ರಾಂನಿಂದ ಹುಟ್ಟಿದ ಸ್ನೇಹ, ಮಹಿಳೆಗೆ ಕೆಲಸ ಕೊಡಿಸುವುದಾಗಿ ಕರೆದೊಯ್ದು ಹೋಟೆಲ್​ನಲ್ಲಿ ಸಾಮೂಹಿಕ ಅತ್ಯಾಚಾರ

ಪೋಷಕರಿಗೆ ಕರೆ ಮಾಡಿ ಹತ್ತು ಲಕ್ಷಕ್ಕೆ ಬೇಡಿಕೆ

ಮನೆ ಬಳಿಯಿದ್ದ ಬಾಲಕನಿಗೆ ಐಸ್ ಕ್ರೀಂ ಕೊಡಿಸುವುದಾಗಿ ಆಸೆ ತೋರಿಸಿ ಕೃತ್ಯ ಎಸಗಿದ್ದ. ಬಳಿಕ ಪೋಷಕರಿಗೆ ಕರೆ ಮಾಡಿ ಹತ್ತು ಲಕ್ಷಕ್ಕೆ ಬೇಡಿಕೆಯಿಟ್ಟಿದ್ದಾನೆ. ಈ ವೇಳೆ ಪೊಲೀಸರಿಗೆ ಕಣ್ಣು ತಪ್ಪಿಸಿ ವೀರಸಂದ್ರ, ಹುಸ್ಕೂರು ಸುತ್ತಮುತ್ತ ಬಾಲಕನ ಜೊತೆ ಓಡಾಟ ನಡೆಸಿದ್ದಾನೆ. ಈ ಮೂಲಕ ಪದೇ ಪದೇ ಲೋಕೇಶನ್ ಬದಲಿಸುತ್ತಿದ್ದ. ಕೊನೆಗೆ ಇಂದು(ಜೂ.18) ಮಧ್ಯಾಹ್ನ ಬಾಲಕ ಸಹಿತ ಆರೋಪಿಯನ್ನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಅರೆಸ್ಟ್ ಮಾಡಿದ್ದು, ಬಾಲಕನ ಕಿಡ್ನಾಪ್ ಪ್ರಕರಣ ಸುಖಾಂತ್ಯಗೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ