AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಿಯವರೆಗೆ ಇಸ್ಲಾಂ ಇರುತ್ತೋ ಅಲ್ಲಿವರೆಗೆ ಜಗತ್ತಿಗೆ ನೆಮ್ಮದಿ ಇಲ್ಲ: ಅನಂತಕುಮಾರ್ ಹೆಗಡೆ

ಉತ್ತರ ಕನ್ನಡ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರು ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಪಳ್ಳಿ ಮಸೀದಿ ಧ್ವಂಸದ ಬಗ್ಗೆ ಹೇಳಿಕೆ ನೀಡಿದ್ದ ಅನಂತಕುಮಾರ್ ಹೆಗಡೆ, ಇದೀಗ ಎಲ್ಲಿಯವರೆಗೆ ಇಸ್ಲಾಂ ಇರುತ್ತೋ ಅಲ್ಲಿವರೆಗೆ ಜಗತ್ತಿಗೆ ನೆಮ್ಮದಿಯಿಲ್ಲ ಎಂದಿದ್ದಾರೆ. ಅಲ್ಲದೆ, ಬಿಜೆಪಿ, ಸಂಘಪರಿವಾರ ಇದ್ದಲ್ಲಿ ಮಾತ್ರ ನೆಮ್ಮದಿ ಎಂದಿದ್ದಾರೆ.

ಎಲ್ಲಿಯವರೆಗೆ ಇಸ್ಲಾಂ ಇರುತ್ತೋ ಅಲ್ಲಿವರೆಗೆ ಜಗತ್ತಿಗೆ ನೆಮ್ಮದಿ ಇಲ್ಲ: ಅನಂತಕುಮಾರ್ ಹೆಗಡೆ
ಎಲ್ಲಿಯವರೆಗೆ ಇಸ್ಲಾಂ ಇರುತ್ತೋ ಅಲ್ಲಿವರೆಗೆ ಜಗತ್ತಿಗೆ ನೆಮ್ಮದಿಯಿಲ್ಲ: ಅನಂತಕುಮಾರ್ ಹೆಗಡೆ
ಸೂರಜ್​, ಮಹಾವೀರ್​ ಉತ್ತರೆ
| Updated By: Rakesh Nayak Manchi|

Updated on: Feb 16, 2024 | 7:05 AM

Share

ಕಾರವಾರ, ಫೆ.16: ಉತ್ತರ ಕನ್ನಡ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಅವರು ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಪಳ್ಳಿ ಮಸೀದಿ ಧ್ವಂಸದ ಬಗ್ಗೆ ಹೇಳಿಕೆ ನೀಡಿದ್ದ ಅನಂತಕುಮಾರ್ ಹೆಗಡೆ, ಇದೀಗ ಎಲ್ಲಿಯವರೆಗೆ ಇಸ್ಲಾಂ (Islam) ಇರುತ್ತೋ ಅಲ್ಲಿವರೆಗೆ ಜಗತ್ತಿಗೆ ನೆಮ್ಮದಿ ಇರುವುದಿಲ್ಲ ಎಂದಿದ್ದಾರೆ. ಅಲ್ಲದೆ, ಬಿಜೆಪಿ (BJP), ಸಂಘಪರಿವಾರ ಇದ್ದಲ್ಲಿ ಮಾತ್ರ ನೆಮ್ಮದಿ ಎಂದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಮಾತನಾಡಿದ ಅನಂತಕುಮಾರ್ ಹೆಗಡೆ, ಇಸ್ಲಾಂ ಇರುವವರೆಗೆ ಜಗತ್ತಿನಲ್ಲಿ ನೆಮ್ಮದಿ ಇರುವುದಿಲ್ಲ. ಇಂತಹ ಕಾಲಘಟ್ಟದಲ್ಲಿ ಹಿಂದೂ ಧರ್ಮ, ದೇಶ ಉಳಿಯಲು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕಾಗಿದೆ ಎಂದರು.

ಭಾರತೀಯ ಜನತಾ ಪಕ್ಷ, ಸಂಘ ಪರಿವಾರ ಇದ್ದಲ್ಲಿ ಜಗತ್ತಿಗೆ ನೆಮ್ಮದಿ ಇರಲಿದೆ. ನಾವಿಲ್ಲದಿದ್ದರೆ ಜಗತ್ತಿಗೆ ನೆಮ್ಮದಿ ಇಲ್ಲ, ಹಿಂದುತ್ವವೇ ದೇಶದ ಉಸಿರು ಎಂದ ಅನಂತಕುಮಾರ್ ಹೆಗಡೆ, ಬಿಜೆಪಿ ಉತ್ಸಾಹ ನೋಡಿ ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್​ನವರು ಶಸ್ತ್ರ ತ್ಯಜಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ವೈಚಾರಿಕವಾಗಿ ಗೆದ್ದು ತೋರಿಸಬೇಕಿದೆ ಎಂದರು.

ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಹಿಂದೂ ಫೈರ್​​ ಬ್ರ್ಯಾಂಡ್​ಗೆ ಹಿನ್ನಡೆ: ಅನಂತ್​ಕುಮಾರ್ ಹೆಗಡೆಗೆ ತಲೆನೋವಾದ ಸ್ವಪಕ್ಷದ ನಾಯಕರ ನಡೆ

ಈ ಹಿಂದೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಶ್ರೀರಾಮಮಂದಿರ ವಿಚಾರದಲ್ಲಿ ರಾಜಕೀಯ ಜಟಾಪಟಿ ಜ್ವಾಲೆಯಂತೆ ಹೊತ್ತಿ ಉರಿಯುತ್ತಿದ್ದ ನಡುವೆಯೇ “ಬಾಬ್ರಿ ಮಸೀದಿ ನಿರ್ನಾಮದಂತೆ ಭಟ್ಕಳದಲ್ಲಿಯೂ ಚಿನ್ನದ ಪಳ್ಳಿ ನೆಲಸಮವಾಗಲಿದೆ” ಎಂದು ಅನಂತಕುಮಾರ್ ಹೆಗಡೆ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಬಾಬ್ರಿ ಮಸೀದಿ ನಿರ್ನಾಮದಂತೆ ಭಟ್ಕಳದಲ್ಲಿಯೂ ಮಾಡ್ತೇವೆ, ಅದರ ಸಾಲಿಗೆ ಸಾಲಿಗೆ ಭಟ್ಕಳದ ಚಿನ್ನದ ಪಳ್ಳಿ ಸೇರಲಿದೆ. ಎಲ್ಲೆಲ್ಲಿ ದೇವಸ್ಥಾನ ಒಡೆದು ಮಸೀದಿಗಳನ್ನು ಕಟ್ಟಿದ್ದಾರೋ ಅಲ್ಲೆಲ್ಲ ಮತ್ತೆ ದೇವಸ್ಥಾನ ನಿರ್ಮಾಣವಾಗಲಿದೆ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಪ್ರಚೋದನಾಕರಿ ಹೇಳಿಕೆ ನೀಡಿದ್ದರು. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ಗುಡುಗಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ