AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೀಲ್ಸ್ ರಾಣಿ ಸುಚಿತ್ರಾ ಜೊತೆ ಸಂಕರ್ಪಕದಲ್ಲಿದ್ದ ಯುವಕರಿಗೂ ಶಾಕ್!

ಜ್ಯೋತಿಷಿ ಕಮಲಾಕರ್ ಭಟ್ ಮತ್ತು ಸುಚಿತ್ರಾ ಪ್ರಕರಣ ದಿನಕ್ಕೊಂದು ಆಯಾಮ ಪಡೆಯುತ್ತಿದೆ. ಪೊಲೀಸ್ ತನಿಖೆ ವೇಳೆ ರೀಲ್ಸ್ ರಾಣಿ ಸುಚಿತ್ರಾ ಹಲವು ಯುವಕರೊಂದಿಗೆ ಸಂಪರ್ಕದಲ್ಲಿದ್ದ ವಿಚಾರ ಬೆಳಕಿಗೆ ಬಂದ ನಂತರ ಸುಚಿತ್ರಾ ಪತಿ ಹೇಳಿಕೆ ಬೆನ್ನಲ್ಲೇ ಆತಂಕಕ್ಕೊಳಗಾದ ಯುವಕರು ತಮ್ಮ ಇನ್ಸ್ಟಾಗ್ರಾಂ ಖಾತೆಗಳನ್ನು ಡಿಲೀಟ್ ಮಾಡಿ, ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ತನಿಖೆ ಮುಂದುವರಿದಿದೆ.

ರೀಲ್ಸ್ ರಾಣಿ ಸುಚಿತ್ರಾ ಜೊತೆ ಸಂಕರ್ಪಕದಲ್ಲಿದ್ದ ಯುವಕರಿಗೂ ಶಾಕ್!
ರೀಲ್ಸ್ ರಾಣಿ ಸುಚಿತ್ರಾ ಜೊತೆ ಸಂಕರ್ಪಕದಲ್ಲಿದ್ದ ಯುವಕರ ಇನ್ಟ್ಸಾ ಡಿಲೀಟ್, ಮೊಬೈಲ್ ಸ್ವಿಚ್ ಆಫ್!
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on:Feb 06, 2026 | 12:44 PM

Share

ಕಾರವಾರ, ಫೆಬ್ರುವರಿ 06: ರೀಲ್ಸ್ ರಾಣಿ ಸುಚಿತ್ರಾ ಮತ್ತು ಜ್ಯೋತಿಷಿ ಪ್ರೇಮ (Kamalakar Bhat and Suchitra Case) ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪೊಲೀಸರ ತನಿಖೆಯ ವೇಳೆ ಸುಚಿತ್ರಾಳ ಮೊಬೈಲ್ ಫೋನ್ ಪರಿಶೀಲನೆ ನಡೆಸಿದಾಗ, ಕಲಬುರಗಿ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲ ಯುವಕರೊಂದಿಗೆ ಅವಳು ನಿರಂತರ ಸಂಪರ್ಕದಲ್ಲಿದ್ದ ವಿಚಾರ ಬೆಳಕಿಗೆ ಬಂದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಆತಂಕಕ್ಕೊಳಗಾದ ಯುವಕರು ತಮ್ಮ ಇನ್ಸ್ಟಾಗ್ರಾಂ ಖಾತೆಗಳನ್ನು ಡಿಲೀಟ್ ಮಾಡಿದ್ದು, ಇನ್ನೂ ಕೆಲವರು ತಮ್ಮ ಮೊಬೈಲ್​ಗಳನ್ನೇ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.

ಸುಚಿತ್ರಾ ಪತಿ ಹೇಳಿಕೆಗೆ ಹುಡುಗರು ಕಂಗಾಲು

ಇತ್ತ ಶಿವಮೊಗ್ಗದಲ್ಲಿ ಸುಚಿತ್ರಾಳ ಪತಿ ಹಾಗೂ ಮಗಳು ಮಾಧ್ಯಮಗಳ ಮುಂದೆ ನೀಡಿದ ಹೇಳಿಕೆಗಳು ಯುವಕರನ್ನು ಇನ್ನಷ್ಟು ದಂಗು ಮಾಡಿವೆ. ಸುಚಿತ್ರಾಳ ಮೊಬೈಲ್ ಚೆಕ್ ಮಾಡಿದ್ರೆ ಇವಳ ಬಗ್ಗೆ ಅಸಹ್ಯ ಆಗುತ್ತೆ. ಬೇರೆ ಬೇರೆ ಹುಡುಗರ ಜೊತೆ ಇವಳು ನಿತ್ಯ ಸಂಪರ್ಕದಲ್ಲಿ ಇದ್ದಳು ಎಂದು ಆಕೆಯ ಪತಿ ಹೇಳಿಕೆ ನೋಡಿದ ಬೆನ್ನಲ್ಲೇ ಕೆಲವರು ತಮ್ಮ ಇನ್‌ಸ್ಟಾಗ್ರಾಂ ಖಾತೆಗಳನ್ನು ಡಿಲಿಟ್ ಮಾಡಿಕೊಂಡರೆ, ಇನ್ನೂ ಕೆಲವರು ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತಮ್ಮ ಹೆಸರು ತನಿಖೆಯಲ್ಲಿ ಹೊರಬೀಳಬಹುದೆಂಬ ಆತಂಕದಲ್ಲಿ ಯುವಕರು ಸಿಲುಕಿದ್ದಾರೆ.

ಸುಚಿತ್ರಾ ಹಲವು ಯುವಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದಳು, ತನ್ನ ಮೇಲೆ ಹಲ್ಲೆ ನಡೆಸಲು ಯುವಕರ ಸಹಾಯ ಕೇಳಿದ್ದಳು ಎಂದು ಆಕೆಯ ಪತಿ ಆರೋಪ ಹೊರೆಸಿದ್ದಾನೆ . ಈ ಕುರಿತು ಪೊಲೀಸರು ಒಂದೊಂದಾಗಿ ತನಿಖೆ ಮುಂದುವರಿಸುತ್ತಿದ್ದು, ಸುಚಿತ್ರಾ ಪ್ರಕರಣ ಹಲವಾರು ಪ್ರಶ್ನೆಗಳ ಸುಳಿಯಲ್ಲಿ ಸಿಲುಕಿದೆ.

ಇದನ್ನೂ ಓದಿ ‘ಅವಳಿಗಾಗಿ ನಾಯಿ ತರ ಅಲೆದಾಡಿದ್ದೆ’: ಕಮಲಾಕರನ ಒಂದೊಂದೇ ರಂಗಿನಾಟ ಬಯಲು!

ಸಿದ್ದಾಪುರ ಪೊಲೀಸ್ ಠಾಣೆಯ ಇಬ್ಬರು ಅಧಿಕಾರಿಗಳ ವರ್ಗ

ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ವಸಂತ್ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರ ವೈಫಲ್ಯವಿದೆ ಎಂಬ ಸ್ಥಳೀಯರ ಆರೋಪಗಳ ಹಿನ್ನೆಲೆಯಲ್ಲಿ, ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಎಎಸ್‌ಐ ಗಣಪತಿ ಭಟ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಚಂದ್ರಶೇಖರ್ ಅವರನ್ನು ಹಳಿಯಾಳ ಉಪವಿಭಾಗಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್, ಸಿದ್ದಾಪುರ ಪೊಲೀಸ್ ಠಾಣೆಯ ಕಾರ್ಯವೈಖರಿಯ ಕುರಿತು ತನಿಖೆಗೆ ಆದೇಶ ನೀಡಿದ್ದಾರೆ. ಶಿರಸಿ ಉಪವಿಭಾಗದ ಡಿವೈಎಸ್‌ಪಿ ಗೀತಾ ಪಾಟೀಲ್ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ತನಿಖೆಯಲ್ಲಿ ಯಾವುದೇ ಲೋಪ ಕಂಡುಬಂದರೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ದೀಪನ್ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:24 pm, Fri, 6 February 26

Follow Us
ಇಷ್ಟು ಕೀಳು ಹೇಳಿಕೆ ನೀಡೋದಾ?; ರಾಹುಲ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ
ಇಷ್ಟು ಕೀಳು ಹೇಳಿಕೆ ನೀಡೋದಾ?; ರಾಹುಲ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ
ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ
ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ
'ಜಮ್ಮು ಕಾಶ್ಮೀರ, ಲಡಾಖ್​ ಭಾರತದ ಅವಿಭಾಜ್ಯ ಅಂಗ'; ವಿದೇಶಾಂಗ ಸಚಿವಾಲಯ
'ಜಮ್ಮು ಕಾಶ್ಮೀರ, ಲಡಾಖ್​ ಭಾರತದ ಅವಿಭಾಜ್ಯ ಅಂಗ'; ವಿದೇಶಾಂಗ ಸಚಿವಾಲಯ
ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಸೆಟ್ ಹಾಕಲು ಅಂದಾಜು 75 ಕೋಟಿ ರೂಪಾಯಿ ಬಜೆಟ್
ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಸೆಟ್ ಹಾಕಲು ಅಂದಾಜು 75 ಕೋಟಿ ರೂಪಾಯಿ ಬಜೆಟ್
ಮನೆ ಮುಂದೆ ವಾಹನ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ನಿಯಮಕ್ಕೆ ಸಿಟಿ ಮಂದಿ ಕಿಡಿ
ಮನೆ ಮುಂದೆ ವಾಹನ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ನಿಯಮಕ್ಕೆ ಸಿಟಿ ಮಂದಿ ಕಿಡಿ
ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌; ಹಿಂಬಾಕಿ ಬಿಡುಗಡೆ
ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌; ಹಿಂಬಾಕಿ ಬಿಡುಗಡೆ
ಯತೀಂದ್ರ ಸಿದ್ದರಾಮಯ್ಯನವರನ್ನ ವಿಶೇಷವಾಗಿ ಪರಿಚಯಿಸಿದ ಡಿಕೆಶಿ
ಯತೀಂದ್ರ ಸಿದ್ದರಾಮಯ್ಯನವರನ್ನ ವಿಶೇಷವಾಗಿ ಪರಿಚಯಿಸಿದ ಡಿಕೆಶಿ
ಜೈಲಾಧಿಕಾರಿಗಳಿಗೆ ಅಲೋಕ್ ಕುಮಾರ್ ಕ್ಲಾಸ್!
ಜೈಲಾಧಿಕಾರಿಗಳಿಗೆ ಅಲೋಕ್ ಕುಮಾರ್ ಕ್ಲಾಸ್!
RSS ಚಟುವಟಿಕೆಗಳಿಗೆ ಬ್ರೇಕ್ ಆರೋಪ: ವಿಧೇಯಕದ ಅಂಶ ಬಿಚ್ಚಿಟ್ಟ ಗೃಹ ಸಚಿವ
RSS ಚಟುವಟಿಕೆಗಳಿಗೆ ಬ್ರೇಕ್ ಆರೋಪ: ವಿಧೇಯಕದ ಅಂಶ ಬಿಚ್ಚಿಟ್ಟ ಗೃಹ ಸಚಿವ
‘ಮುಂಗಾರು ಮಳೆ’ ಸಿನಿಮಾ ಆಗಲು ಕಾರಣನಾದೆ: ನಾಗತಿಹಳ್ಳಿ ಚಂದ್ರಶೇಖರ್
‘ಮುಂಗಾರು ಮಳೆ’ ಸಿನಿಮಾ ಆಗಲು ಕಾರಣನಾದೆ: ನಾಗತಿಹಳ್ಳಿ ಚಂದ್ರಶೇಖರ್