Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಲ್ಲಾಪುರ ಬಸ್​ ನಿಲ್ದಾಣದಲ್ಲಿ ಮಹಿಳೆಯ ಬಟ್ಟೆ ಹರಿದು ಹಲ್ಲೆ: ದೂರು ದಾಖಲಿಸಿಕೊಳ್ಳದ ಪೊಲೀಸರು

ಉತ್ತರ ಕನ್ನಡ(Uttara Kannada) ಜಿಲ್ಲೆಯ ಯಲ್ಲಾಪುರ ಬಸ್ ನಿಲ್ದಾಣದಲ್ಲಿ ಫೆಬ್ರವರಿ 5 ರಂದು ನಡುರಸ್ತೆಯಲ್ಲೇ ಮಹಿಳೆಯ ಬಟ್ಟೆ ಹರಿದು ನಾಲ್ವರ ಮಹಿಳೆಯರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಕುರಿತು ಯಲ್ಲಾಪುರ ಪೊಲೀಸರು ಕೇಸ್​ ದಾಖಲು ಮಾಡಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂದು ನೊಂದ ಮಹಿಳೆ ಟಿವಿ9 ಮುಂದೆ  ಕಣ್ಣೀರು ಹಾಕಿದ್ದಾರೆ.

ಯಲ್ಲಾಪುರ ಬಸ್​ ನಿಲ್ದಾಣದಲ್ಲಿ ಮಹಿಳೆಯ ಬಟ್ಟೆ ಹರಿದು ಹಲ್ಲೆ: ದೂರು ದಾಖಲಿಸಿಕೊಳ್ಳದ ಪೊಲೀಸರು
ಯಲ್ಲಾಪುರ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 23, 2024 | 5:19 PM

ಉತ್ತರ ಕನ್ನಡ, ಫೆ.23: ನಡುರಸ್ತೆಯಲ್ಲೇ ಮಹಿಳೆಯ ಬಟ್ಟೆ ಹರಿದು ನಾಲ್ವರ ಮಹಿಳೆಯರು ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ(Uttara Kannada) ಜಿಲ್ಲೆಯ ಯಲ್ಲಾಪುರ ಬಸ್ ನಿಲ್ದಾಣದಲ್ಲಿ ಫೆಬ್ರವರಿ 5 ರಂದು ನಡೆದಿದೆ. ಇನ್ನು ಹಲ್ಲೆ ಮಾಡಿದವರ ವಿರುದ್ದ ಪ್ರಕರಣ ದಾಖಲಿಸಲು ಮಹಿಳೆ ಹರಿದ ಬಟ್ಟೆಯಲ್ಲೇ ಠಾಣೆಗೆ ಹೋಗಿದ್ದಾರೆ. ಆದರೆ, ಇದು ಸಣ್ಣ ಕೇಸ್​ ಎಂದು ಯಲ್ಲಾಪುರ ಪೊಲೀಸರು ಕೇಸ್​ ದಾಖಲು ಮಾಡಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂದು ನೊಂದ ಮಹಿಳೆ ರಾಜೇಶ್ವರಿ, ಟಿವಿ9 ಮುಂದೆ  ಕಣ್ಣೀರು ಹಾಕಿದ್ದಾರೆ.

ಪ್ರೆಬ್ರವರಿ 20 ರಂದು ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಒತ್ತಾಯದಿಂದ ಕೇಸ್​ ದಾಖಲು

ಇನ್ನು ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಒತ್ತಾಯದಿಂದ ಫೆಬ್ರವರಿ 20 ರಂದು ಕೇಸ್ ದಾಖಲು ಮಾಡಲಾಗಿದೆ. ಆದ್ರೆ, ಇದುವರೆಗೂ ಆರೋಪಿಗಳ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ನನಗೆ ರಕ್ಷಣೆ ಬೇಕು, ನನಗೆ ನ್ಯಾಯ ಬೇಕೆಂದು ಕೈ ಮುಗಿದು  ನೊಂದ ಮಹಿಳೆ ರಾಜೇಶ್ವರಿ ಕಣ್ಣಿರು ಹಾಕಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ: ಬಿಎಸ್​​ಪಿ ಮುಖಂಡನಿಂದ ಯುವಕನ ಮೇಲೆ ಹಲ್ಲೆ

ಸಿದ್ಧಿ ಸಮಾಜದ ದಮಾಮಿ ಹೋಮ್ ಸ್ಟೇ ಅವ್ಯವಹಾರ ಪ್ರಶ್ನಿಸಿದಕ್ಕೆ ಹಲ್ಲೆ

ಯಲ್ಲಾಪುರ ತಾಲೂಕಿನ ಇಡಗುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಲಿಂಗದಬೈಲ್​ ಗ್ರಾಮದಲ್ಲಿ ಸಿದ್ಧಿ ಸಮಾಜದ ದಮಾಮಿ ಹೋಮ್ ಸ್ಟೇ ರೂಪುಗೊಂಡಿದೆ. ಇದರ ಅವ್ಯವಹಾರವನ್ನು ರಾಜೇಶ್ವರಿ ಅವರು ಆರ್ ಟಿ ಐ ದಿಂದ ಮಾಹಿತಿ ಕೇಳಿದ್ದರು. ಇದನ್ನು ಪ್ರಶ್ನಿಸಿದಕ್ಕೆ ಸಿದ್ದಿ ಸಮಾಜದ ಸಾಮಾಜಿಕ ಕಾರ್ಯಕರ್ತೆ,  ಈ ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗುತ್ತಿದೆ.  ಸದ್ಯ ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ರಾಜೇಶ್ವರಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:16 pm, Fri, 23 February 24

ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ