AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಲ್ಲಾಪುರ ಬಸ್​ ನಿಲ್ದಾಣದಲ್ಲಿ ಮಹಿಳೆಯ ಬಟ್ಟೆ ಹರಿದು ಹಲ್ಲೆ: ದೂರು ದಾಖಲಿಸಿಕೊಳ್ಳದ ಪೊಲೀಸರು

ಉತ್ತರ ಕನ್ನಡ(Uttara Kannada) ಜಿಲ್ಲೆಯ ಯಲ್ಲಾಪುರ ಬಸ್ ನಿಲ್ದಾಣದಲ್ಲಿ ಫೆಬ್ರವರಿ 5 ರಂದು ನಡುರಸ್ತೆಯಲ್ಲೇ ಮಹಿಳೆಯ ಬಟ್ಟೆ ಹರಿದು ನಾಲ್ವರ ಮಹಿಳೆಯರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಕುರಿತು ಯಲ್ಲಾಪುರ ಪೊಲೀಸರು ಕೇಸ್​ ದಾಖಲು ಮಾಡಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂದು ನೊಂದ ಮಹಿಳೆ ಟಿವಿ9 ಮುಂದೆ  ಕಣ್ಣೀರು ಹಾಕಿದ್ದಾರೆ.

ಯಲ್ಲಾಪುರ ಬಸ್​ ನಿಲ್ದಾಣದಲ್ಲಿ ಮಹಿಳೆಯ ಬಟ್ಟೆ ಹರಿದು ಹಲ್ಲೆ: ದೂರು ದಾಖಲಿಸಿಕೊಳ್ಳದ ಪೊಲೀಸರು
ಯಲ್ಲಾಪುರ
ಸೂರಜ್​, ಮಹಾವೀರ್​ ಉತ್ತುರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 23, 2024 | 5:19 PM

Share

ಉತ್ತರ ಕನ್ನಡ, ಫೆ.23: ನಡುರಸ್ತೆಯಲ್ಲೇ ಮಹಿಳೆಯ ಬಟ್ಟೆ ಹರಿದು ನಾಲ್ವರ ಮಹಿಳೆಯರು ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ(Uttara Kannada) ಜಿಲ್ಲೆಯ ಯಲ್ಲಾಪುರ ಬಸ್ ನಿಲ್ದಾಣದಲ್ಲಿ ಫೆಬ್ರವರಿ 5 ರಂದು ನಡೆದಿದೆ. ಇನ್ನು ಹಲ್ಲೆ ಮಾಡಿದವರ ವಿರುದ್ದ ಪ್ರಕರಣ ದಾಖಲಿಸಲು ಮಹಿಳೆ ಹರಿದ ಬಟ್ಟೆಯಲ್ಲೇ ಠಾಣೆಗೆ ಹೋಗಿದ್ದಾರೆ. ಆದರೆ, ಇದು ಸಣ್ಣ ಕೇಸ್​ ಎಂದು ಯಲ್ಲಾಪುರ ಪೊಲೀಸರು ಕೇಸ್​ ದಾಖಲು ಮಾಡಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂದು ನೊಂದ ಮಹಿಳೆ ರಾಜೇಶ್ವರಿ, ಟಿವಿ9 ಮುಂದೆ  ಕಣ್ಣೀರು ಹಾಕಿದ್ದಾರೆ.

ಪ್ರೆಬ್ರವರಿ 20 ರಂದು ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಒತ್ತಾಯದಿಂದ ಕೇಸ್​ ದಾಖಲು

ಇನ್ನು ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಒತ್ತಾಯದಿಂದ ಫೆಬ್ರವರಿ 20 ರಂದು ಕೇಸ್ ದಾಖಲು ಮಾಡಲಾಗಿದೆ. ಆದ್ರೆ, ಇದುವರೆಗೂ ಆರೋಪಿಗಳ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ನನಗೆ ರಕ್ಷಣೆ ಬೇಕು, ನನಗೆ ನ್ಯಾಯ ಬೇಕೆಂದು ಕೈ ಮುಗಿದು  ನೊಂದ ಮಹಿಳೆ ರಾಜೇಶ್ವರಿ ಕಣ್ಣಿರು ಹಾಕಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ: ಬಿಎಸ್​​ಪಿ ಮುಖಂಡನಿಂದ ಯುವಕನ ಮೇಲೆ ಹಲ್ಲೆ

ಸಿದ್ಧಿ ಸಮಾಜದ ದಮಾಮಿ ಹೋಮ್ ಸ್ಟೇ ಅವ್ಯವಹಾರ ಪ್ರಶ್ನಿಸಿದಕ್ಕೆ ಹಲ್ಲೆ

ಯಲ್ಲಾಪುರ ತಾಲೂಕಿನ ಇಡಗುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಲಿಂಗದಬೈಲ್​ ಗ್ರಾಮದಲ್ಲಿ ಸಿದ್ಧಿ ಸಮಾಜದ ದಮಾಮಿ ಹೋಮ್ ಸ್ಟೇ ರೂಪುಗೊಂಡಿದೆ. ಇದರ ಅವ್ಯವಹಾರವನ್ನು ರಾಜೇಶ್ವರಿ ಅವರು ಆರ್ ಟಿ ಐ ದಿಂದ ಮಾಹಿತಿ ಕೇಳಿದ್ದರು. ಇದನ್ನು ಪ್ರಶ್ನಿಸಿದಕ್ಕೆ ಸಿದ್ದಿ ಸಮಾಜದ ಸಾಮಾಜಿಕ ಕಾರ್ಯಕರ್ತೆ,  ಈ ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗುತ್ತಿದೆ.  ಸದ್ಯ ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ರಾಜೇಶ್ವರಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:16 pm, Fri, 23 February 24

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ