AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ.1ರಿಂದ ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧ: ಬದಲಿ ಮಾರ್ಗ ಇಲ್ಲಿದೆ

ಸಾಗರಮಾಲಾ ಯೋಜನೆಯಡಿ ಅಗಲೀಕರಣ ಕಾಮಗಾರಿ ಹಿನ್ನೆಲೆ ನ.1ರಿಂದ ಉತ್ತರ ಕನ್ನಡ ಜಿಲ್ಲೆ ಶಿರಸಿ-ಕುಮಟಾ ಮಾರ್ಗದ ರಾಷ್ಟ್ರೀಯ ಹೆದ್ದಾರಿ 766(E) ನಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧಿಸಿ ಉಪ ವಿಭಾಗಾಧಿಕಾರಿ ಆರ್.ದೇವರಾಜ್ ಬುಧವಾರ ಆದೇಶ ಹೊರಡಿಸಿದ್ದಾರೆ. ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ ಹೀಗಿವೆ.

ನ.1ರಿಂದ ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧ: ಬದಲಿ ಮಾರ್ಗ ಇಲ್ಲಿದೆ
ಶಿರಸಿ-ಕುಮಟಾ ಹೆದ್ದಾರಿ
ವಿನಾಯಕ ಬಡಿಗೇರ್​
| Edited By: |

Updated on:Oct 18, 2023 | 8:54 PM

Share

ಕಾರವಾರ, ಅಕ್ಟೋಬರ್​​​ 18: ಸಾಗರಮಾಲಾ ಯೋಜನೆಯಡಿ ಅಗಲೀಕರಣ ಕಾಮಗಾರಿ ಹಿನ್ನೆಲೆ ನ.1ರಿಂದ ಉತ್ತರ ಕನ್ನಡ ಜಿಲ್ಲೆ ಶಿರಸಿ-ಕುಮಟಾ ಮಾರ್ಗದ ರಾಷ್ಟ್ರೀಯ ಹೆದ್ದಾರಿ (national highway) 766(E) ನಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ. ಸಂಚಾರಕ್ಕೆ ನಿರ್ಬಂಧ ವಿಧಿಸಿ, ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ ಕಲ್ಪಿಸಿ ಉಪ ವಿಭಾಗಾಧಿಕಾರಿ ಆರ್.ದೇವರಾಜ್ ಬುಧವಾರ ಆದೇಶ ಹೊರಡಿಸಿದ್ದಾರೆ. ಶಿರಸಿ ಮಾರ್ಗದಲ್ಲಿ ಲಘುಗಾತ್ರದ ವಾಹನಗಳಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಬದಲಿ ಮಾರ್ಗಗಳು ಹೀಗಿವೆ

  • ಕುಮಟಾ ಮಾರ್ಗದಿಂದ ದೊಡ್ಮನೆ ಘಟ್ಟ ಭಾಗದಿಂದ ಸಿದ್ದಾಪುರ ಮಾರ್ಗವಾಗಿ ಶಿರಸಿ ಮಾರ್ಗದಲ್ಲಿ ಲಘು ಗಾತ್ರದ ವಾಹನಗಳಿಗೆ ಅವಕಾಶ.
  • ಹೊನ್ನಾವರ ಮೂಲಕ ಮಾವಿನಗುಂಡಿ ಘಟ್ಟ ಭಾಗದಿಂದ ಸಿದ್ದಾಪುರ ಮಾರ್ಗವಾಗಿ ಶಿರಸಿ ಮಾರ್ಗದಲ್ಲಿ ಎಲ್ಲಾ ತರದ ವಾಹನಗಳಿಗೆ ಅವಕಾಶ.
  • ಶಿರಸಿ ಮಾರ್ಗವಾಗಿ ಯಾಣದಿಂದ ವಡ್ಡಿ ಮಾರ್ಗವಾಗಿ ಕುಮಟಾಕ್ಕೆ ಸೇರುವ ಮಾರ್ಗದಲ್ಲಿ ಲಘು ಗಾತ್ರದ ವಾಹನಗಳಿಗೆ ಮಾತ್ರ ಅವಕಾಶ.
  • ಶಿರಸಿಯಿಂದ ಯಲ್ಲಾಪುರ ಮಾರ್ಗವಾಗಿ ಅಂಕೋಲಾ ಮಾರ್ಗದಲ್ಲಿ ಎಲ್ಲ ತರದ ವಾಹನಗಳ ಸಂಚಾರಕ್ಕೆ ಅವಕಾಶ.
  • ಯಾಣ ಮತ್ತು ದೊಡ್ಮನೆ ಮಾರ್ಗದಲ್ಲಿ ಲಘು ವಾಹನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಶಿರಸಿ ವಿಭಾಗದಲ್ಲಿ 33 ಕಿ.ಮೀ ಪೈಕಿ 25 ಕಿ.ಮೀ ರಸ್ತೆ ಕಾಮಗಾರಿ ಆಗಿದೆ. 2.84 ಕಿ.ಮಿ. ಒಂದು ಕಡೆ ರಸ್ತೆಯಾಗಿದೆ. ಉಳಿದಂತೆ 6.18 ಕಿ.ಮೀ ರಸ್ತೆ ಆಗಬೇಕಿದೆ. ದೇವಿಮನೆ ಘಟ್ಟ ಪ್ರದೇಶದಲ್ಲಿ ರಸ್ತೆ ವಿಸ್ತರಣೆ, 9 ಸೇತುವೆ ನಿರ್ಮಾಣ ಆಗಬೇಕಿದೆ.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡನೊಂದಿಗೆ ಮಹಿಳೆಯ ಹೆಸರು ಬಳಕೆ ಆರೋಪ: ಯುವಕನೋರ್ವನಿಗೆ ಹಿಗ್ಗಾಮುಗ್ಗಾ ಥಳಿತ

ಶಿರಸಿ ಕುಮಟಾ ರಸ್ತೆ ಕಾಮಗಾರಿ ವೇಗವಾಗಿ ನಡೆಯುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಆರ್​ಎನ್​ಎಸ್​​ ಮೂಲಸೌಕರ್ಯ ಕೋರಿಕೆ ಮೇರೆಗೆ ಈ ಮಾರ್ಗದಲ್ಲಿ ವಾಹನಗಳಲ್ಲಿ ಸಂಚಾರ ನಿಷೇಧಿಸಲಾಗುತ್ತಿದೆ.

ಇದನ್ನೂ ಓದಿ: ಕಾರಿನಡಿಯಲ್ಲಿತ್ತು ಕಾಳಿಂಗ ಸರ್ಪ! 80 ಕಿಮೀ ಪ್ರಯಾಣಿಸಿ ಬೆಚ್ಚಿ ಬಿದ್ದ ಸವಾರರು ಆಮೇಲೆ ಮಾಡಿದ್ದೇನು?

ಶಿರಸಿ-ಕುಮಟಾ ರಸ್ತೆಗೆ ಈ ಹಿಂದೆ ಪರಿಸರ ವಿಚಾರವಾಗಿ ತಡೆಯಾಜ್ಞೆ ಇತ್ತು. ಸದ್ಯ ಅದು ತೆರವುಗೊಂಡಿದೆ. ಹೀಗಾಗಿ ಕಾಮಗಾರಿ ಕೈಗೊಳ್ಳಲು ಯಾವುದೆ ತೊಂದರೆಯಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:28 pm, Wed, 18 October 23

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?