AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋ ತೆಗೆದರೆ ದೇಣಿಗೆ ಕೊಡ್ತೀನಿ ಎಂದಿದ್ದ ಶಿವರಾಮ್ ಹೆಬ್ಬಾರ್: ಸಚಿವರ ವಿರುದ್ಧ ಭಕ್ತರಿಂದ ಮಾತಾಜಿ ನಿಂದನೆಯ ಆರೋಪ

ಜಾತ್ರೆಯ ಆಮಂತ್ರಣ ನೀಡಲು ಹೋಗಿದ್ದ ಗ್ರಾಮಸ್ಥರ ಎದುರು ಸಚಿವ ಶಿವರಾಮ್ ಹೆಬ್ಬಾರ್ ಬಸವಧಾಮದ ಬಸವೇಶ್ವರಿ ಮಾತಾ ಅವರನ್ನು ಏಕವಚನದಲ್ಲಿ ನಿಂದಿಸಿದ್ದಾರಂತೆ.

ಈ ಫೋಟೋ ತೆಗೆದರೆ ದೇಣಿಗೆ ಕೊಡ್ತೀನಿ ಎಂದಿದ್ದ ಶಿವರಾಮ್ ಹೆಬ್ಬಾರ್: ಸಚಿವರ ವಿರುದ್ಧ ಭಕ್ತರಿಂದ ಮಾತಾಜಿ ನಿಂದನೆಯ ಆರೋಪ
ಶಿವರಾಮ್ ಹೆಬ್ಬಾರ್
TV9 Web
| Edited By: |

Updated on:Jan 30, 2023 | 9:47 AM

Share

ಕಾರವಾರ: ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್(Shivaram Hebbar) ವಿರುದ್ಧ ನಿಂದನೆ ಆರೋಪ ಕೇಳಿ ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಅತ್ತಿವೇರಿ ಬಸವಧಾಮದ ಬಸವೇಶ್ವರಿ ಮಾತಾ(Basavadhama Basaveshwara Mata) ಅವರನ್ನು ಸಚಿವರು ನಿಂದಿಸಿದ್ದಾರೆ ಎಂದು ಭಕ್ತರು ಆರೋಪಿಸಿದ್ದಾರೆ. ಹೀಗಾಗಿ ಈ ಸಂಬಂಧ ಮುಂಡಗೋಡಿನಲ್ಲಿ ಭಕ್ತರು ಪತ್ರಿಕಾಗೋಷ್ಠಿ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.

ಜಾತ್ರೆಯ ಆಮಂತ್ರಣ ನೀಡಲು ಹೋಗಿದ್ದ ಗ್ರಾಮಸ್ಥರ ಎದುರು ಸಚಿವ ಶಿವರಾಮ್ ಹೆಬ್ಬಾರ್ ಬಸವಧಾಮದ ಬಸವೇಶ್ವರಿ ಮಾತಾ ಅವರನ್ನು ಏಕವಚನದಲ್ಲಿ ನಿಂದಿಸಿದ್ದಾರಂತೆ. ಹೀಗಾಗಿ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಮಂತ್ರಣ ಪತ್ರಿಕೆಯಲ್ಲಿ ಬಸವೇಶ್ವರಿ ಮಾತೆಯ ಫೋಟೋ ಹಾಕಿದ್ದಕ್ಕೆ ಸಚಿವ ಶಿವರಾಮ್ ಆಕ್ಷೇಪ ವ್ಯಕ್ತಪಡಿಸಿದರಂತೆ. ಈಕೆ ವಿ.ಎಸ್.ಪಾಟೀಲರ ಪರವಾಗಿ ಪ್ರಚಾರ ಮಾಡುವವಳು, ಈಕೆಯ ಭಾವಚಿತ್ರ ಯಾಕೆ ಆಮಂತ್ರಣ ಪತ್ರಿಕೆಯಲ್ಲಿ ಹಾಕಿದ್ದೀರಿ? ಈಕೆಯ ಭಾವಚಿತ್ರ ತೆಗದುಕೊಂಡು ಬನ್ನಿ ಆಗ ಮಾತ್ರ ಲಕ್ಷ ರೂ. ದೇಣಿಗೆ ಕೊಡ್ತಿನಿ. ಇಲ್ಲವಾದಲ್ಲಿ ಕೊಡಲ್ಲ ಅಂತಾ ಹೇಳಿದ್ದಾರಂತೆ. ಹೀಗಾಗಿ, ಪತ್ರಿಕಾಗೋಷ್ಠಿ ನಡೆಸಿ ಹೆಬ್ಬಾರ್ ವಿರುದ್ಧ ಭಕ್ತರು ಆಕ್ರೋಶ ಹೊರ ಹಾಕಿದ್ದಾರೆ. ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ. ಜಾತ್ಯಾತೀತವಾಗಿ, ಪಕ್ಷಾತೀತವಾಗಿ ಶಿವರಾಮ್ ಹೆಬ್ಬಾರ್ ವಿರುದ್ಧ ಆಕ್ರೋಶ ಕೇಳಿ ಬಂದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:40 am, Mon, 30 January 23

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ