AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡದ ಜೋಯಿಡಾದಲ್ಲಿ ಶ್ರೀಗಂಧ ತೋಟ ಹೊಂದಿದ್ದ ಓಂ ಪ್ರಕಾಶ್

Karnataka Former DG And IGP OM Prakash Murder: ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರನ್ನು ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಕೊಲ್ಲಲಾಗಿದೆ. ಓಂ ಪ್ರಕಾಶ್​ ಅವರ ಕೊಲೆ ಆಸ್ತಿ ವಿವಾದ ಕಾರಣಕ್ಕೆ ನಡೆದಿದೆ ಎಂದು ಶಂಕಿಸಲಾಗಿದೆ. ಹಾಗಿದ್ದರೆ, ಓಂ ಪ್ರಕಾಶ್​ ಅವರ ಆಸ್ತಿ ಎಷ್ಟಿತ್ತು? ಈ ಆಸ್ತಿ ಯಾರ ಹೆಸರಿನಲ್ಲಿತ್ತು ಎಂಬುವುದು ಬಹಿರಂಗವಾಗಿದೆ.

ಉತ್ತರ ಕನ್ನಡದ ಜೋಯಿಡಾದಲ್ಲಿ ಶ್ರೀಗಂಧ ತೋಟ ಹೊಂದಿದ್ದ ಓಂ ಪ್ರಕಾಶ್
ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್​
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ವಿವೇಕ ಬಿರಾದಾರ

Updated on:Apr 20, 2025 | 9:46 PM

ಉತ್ತರ ಕನ್ನಡ, ಏಪ್ರಿಲ್​ 20: ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ (DG and IG Om Prakash) (68) ಅವರನ್ನು​ ಅವರ ಬೆಂಗಳೂರಿನ (Bengaluru) ಹೆಚ್​ಎಸ್​ಆರ್​ ಲೇಔಟ್​ ಮನೆಯಲ್ಲಿ ಹತ್ಯೆ ಮಾಡಲಾಗಿದೆ. ಓಂ ಪ್ರಕಾಶ್​ ಅವರ ಕೊಲೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಓಂ ಪ್ರಕಾಶ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಓಂ ಪ್ರಕಾಶ್​ ಅವರ ಕೊಲೆ ಆಸ್ತಿ ವಿವಾದ ಕಾರಣಕ್ಕೆ ನಡೆದಿದೆ ಎಂದು ಶಂಕಿಸಲಾಗಿದೆ. ಓಂ ಪ್ರಕಾಶ್ ಅವರಿಗೆ ಓರ್ವ ತಂಗಿ ಇದ್ದು, ಅವರು, ಜೋಯಿಡಾ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಹಿಂದಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದರು.

ಇನ್ನು, ಓಂ ಪ್ರಕಾಶ್​ ಅವರು ಸೂಪಾ ತಾಲೂಕಿನ ಸಾಮ ಜೋಯಿಡಾ ಗ್ರಾಮದಲ್ಲಿ ಶ್ರೀ ಗಂಧದ ತೋಟ ಮಾಡಿದ್ದರು. ಓಂ ಪ್ರಕಾಶ್​ ಅವರು 2011-12 ರಲ್ಲಿ ನಾಗೋಡಾ ಗ್ರಾಮದ ಸರ್ವೇ ನಂಬರ್ 3 ರಲ್ಲಿನ 2 ಎಕರೆ 20 ಗುಂಟೆ ಭೂಮಿಯನ್ನು ಖರೀದಿಸಿದ್ದರು. ಶ್ರೀ ಗಂಧದ ತೋಟದಲ್ಲಿ ಸುಂದರವಾದ ಫಾರ್ಮ್ ಹೌಸ್ ಮಾಡಲಾಗಿತ್ತು. ಓಂ ಪ್ರಕಾಶ್ ಅವರು ಆಗಾಗ ಫಾರ್ಮ್ ಹೌಸ್​ಗೆ ಬಂದು ವಿಶ್ರಾಂತಿ ಪಡೆಯುತ್ತಿದ್ದರು. ಶ್ರೀ ಗಂಧದ ಜೊತೆಗೆ ಬಾಳೆ, ಕಾಳಮೆಣಸು, ಸಾಗವಾಣಿ ಸೇರಿದಂತೆ ಬೆಳೆ ಬೆಳೆದಿದ್ದರು. ಈ ಹಿಂದೆ ಓಂ ಪ್ರಕಾಶ ತೋಟದಲ್ಲಿನ ಶ್ರೀ ಗಂಧದ ಮರಗಳು ಕಳ್ಳತನ ಆಗಿ ಕೇಸ್ ದಾಖಲಾಗಿತ್ತು.

ಕಾಳಿ ನದಿ ಪಕ್ಕದಲ್ಲಿ 5 ಎಕರೆ ಭೂಮಿ

ಸೂಪಾ ತಾಲೂಕಿನ ಕಾಳಿ ನದಿ ಪಕ್ಕದ ಬಾಡಗುಂದ ಬಳಿ ಓಂ ಪ್ರಕಾಶ್ ಅವರು ಐದು ಎಕರೆ ಭೂಮಿ ಹೊಂದಿದ್ದರು. ಐದು ಏಕರೆ ಜಾಗದಲ್ಲಿ ರೆಸಾರ್ಟ್ ನಿರ್ಮಾಣ ಮಾಡಲು ನಿರ್ಧರಿಸಿದ್ದರು. ಕಾಳಿ ನದಿಯ ಪಕ್ಕದಲ್ಲೆ ಜಾಗ ಇರುವುದರಿಂದ ರ್ಯಾಫ್ಟಿಂಗ್ ಆರಂಭ ಮಾಡಿದ್ದರು. ಸದ್ಯ ಐದು ಏಕರೆ ಜಮೀನು ಆವರಣದಲ್ಲಿ ರ್ಯಾಫ್ಟಿಂಗ್ ಮಾಡಲಾಗುತ್ತಿದೆ. ಈ ಎಲ್ಲ ಆಸ್ತಿಯೂ ಓಂ ಪ್ರಕಾಶ್ ಅವರ ಪುತ್ರ ಕಾರ್ತಿಕೇಶ್ ಹೆಸರಿನಲ್ಲಿದೆ.

ಇದನ್ನೂ ಓದಿ
Image
ಓಂ ಪ್ರಕಾಶ್​ ಕೊಲೆ: ಪತಿಯನ್ನು 8-10 ಬಾರಿ ಇರಿದು ಕೊಂದ ಪತ್ನಿ?
Image
ಮದ್ವೆಯಾದ 3 ತಿಂಗಳಿಗೆ ಕೋಟ್ಯಾಧಿಪತಿ ಮಂಗಳಮುಖಿ ಬರ್ಬರ ಕೊಲೆ!
Image
ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಮಂಗಳಮುಖಿಯ ಬರ್ಬರ ಹತ್ಯೆ
Image
ಮುತ್ತಪ್ಪ ರೈ ಪುತ್ರನ ರಿಕ್ಕಿ ಹತ್ಯೆಗೆ ಯತ್ನದ ಹಿಂದಿನ ಅಸಲಿ ಕಾರಣವೇನು?

ಇದನ್ನೂ ಓದಿ: ಕರ್ನಾಟಕ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ 

ಓಂ ಪ್ರಕಾಶ್ ಅವರು1996 ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಓಂ ಪ್ರಕಾಶ ತಂಗಿ ಜೋಯಿಡಾದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಪ್ರಾದ್ಯಾಪಕರಾಗಿ ಕೆಲಸ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಓಂ ಪ್ರಕಾಶ ಅವರು ಜೋಯಿಡಾ ತಾಲೂಕಿನ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:25 pm, Sun, 20 April 25

ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು