AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡದ ಜೋಯಿಡಾದಲ್ಲಿ ಶ್ರೀಗಂಧ ತೋಟ ಹೊಂದಿದ್ದ ಓಂ ಪ್ರಕಾಶ್

Karnataka Former DG And IGP OM Prakash Murder: ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರನ್ನು ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಕೊಲ್ಲಲಾಗಿದೆ. ಓಂ ಪ್ರಕಾಶ್​ ಅವರ ಕೊಲೆ ಆಸ್ತಿ ವಿವಾದ ಕಾರಣಕ್ಕೆ ನಡೆದಿದೆ ಎಂದು ಶಂಕಿಸಲಾಗಿದೆ. ಹಾಗಿದ್ದರೆ, ಓಂ ಪ್ರಕಾಶ್​ ಅವರ ಆಸ್ತಿ ಎಷ್ಟಿತ್ತು? ಈ ಆಸ್ತಿ ಯಾರ ಹೆಸರಿನಲ್ಲಿತ್ತು ಎಂಬುವುದು ಬಹಿರಂಗವಾಗಿದೆ.

ಉತ್ತರ ಕನ್ನಡದ ಜೋಯಿಡಾದಲ್ಲಿ ಶ್ರೀಗಂಧ ತೋಟ ಹೊಂದಿದ್ದ ಓಂ ಪ್ರಕಾಶ್
ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್​
ಸೂರಜ್ ಪ್ರಸಾದ್ ಎಸ್.ಎನ್
| Edited By: ವಿವೇಕ ಬಿರಾದಾರ|

Updated on:Apr 20, 2025 | 9:46 PM

Share

ಉತ್ತರ ಕನ್ನಡ, ಏಪ್ರಿಲ್​ 20: ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ (DG and IG Om Prakash) (68) ಅವರನ್ನು​ ಅವರ ಬೆಂಗಳೂರಿನ (Bengaluru) ಹೆಚ್​ಎಸ್​ಆರ್​ ಲೇಔಟ್​ ಮನೆಯಲ್ಲಿ ಹತ್ಯೆ ಮಾಡಲಾಗಿದೆ. ಓಂ ಪ್ರಕಾಶ್​ ಅವರ ಕೊಲೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಓಂ ಪ್ರಕಾಶ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಓಂ ಪ್ರಕಾಶ್​ ಅವರ ಕೊಲೆ ಆಸ್ತಿ ವಿವಾದ ಕಾರಣಕ್ಕೆ ನಡೆದಿದೆ ಎಂದು ಶಂಕಿಸಲಾಗಿದೆ. ಓಂ ಪ್ರಕಾಶ್ ಅವರಿಗೆ ಓರ್ವ ತಂಗಿ ಇದ್ದು, ಅವರು, ಜೋಯಿಡಾ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಹಿಂದಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದರು.

ಇನ್ನು, ಓಂ ಪ್ರಕಾಶ್​ ಅವರು ಸೂಪಾ ತಾಲೂಕಿನ ಸಾಮ ಜೋಯಿಡಾ ಗ್ರಾಮದಲ್ಲಿ ಶ್ರೀ ಗಂಧದ ತೋಟ ಮಾಡಿದ್ದರು. ಓಂ ಪ್ರಕಾಶ್​ ಅವರು 2011-12 ರಲ್ಲಿ ನಾಗೋಡಾ ಗ್ರಾಮದ ಸರ್ವೇ ನಂಬರ್ 3 ರಲ್ಲಿನ 2 ಎಕರೆ 20 ಗುಂಟೆ ಭೂಮಿಯನ್ನು ಖರೀದಿಸಿದ್ದರು. ಶ್ರೀ ಗಂಧದ ತೋಟದಲ್ಲಿ ಸುಂದರವಾದ ಫಾರ್ಮ್ ಹೌಸ್ ಮಾಡಲಾಗಿತ್ತು. ಓಂ ಪ್ರಕಾಶ್ ಅವರು ಆಗಾಗ ಫಾರ್ಮ್ ಹೌಸ್​ಗೆ ಬಂದು ವಿಶ್ರಾಂತಿ ಪಡೆಯುತ್ತಿದ್ದರು. ಶ್ರೀ ಗಂಧದ ಜೊತೆಗೆ ಬಾಳೆ, ಕಾಳಮೆಣಸು, ಸಾಗವಾಣಿ ಸೇರಿದಂತೆ ಬೆಳೆ ಬೆಳೆದಿದ್ದರು. ಈ ಹಿಂದೆ ಓಂ ಪ್ರಕಾಶ ತೋಟದಲ್ಲಿನ ಶ್ರೀ ಗಂಧದ ಮರಗಳು ಕಳ್ಳತನ ಆಗಿ ಕೇಸ್ ದಾಖಲಾಗಿತ್ತು.

ಕಾಳಿ ನದಿ ಪಕ್ಕದಲ್ಲಿ 5 ಎಕರೆ ಭೂಮಿ

ಸೂಪಾ ತಾಲೂಕಿನ ಕಾಳಿ ನದಿ ಪಕ್ಕದ ಬಾಡಗುಂದ ಬಳಿ ಓಂ ಪ್ರಕಾಶ್ ಅವರು ಐದು ಎಕರೆ ಭೂಮಿ ಹೊಂದಿದ್ದರು. ಐದು ಏಕರೆ ಜಾಗದಲ್ಲಿ ರೆಸಾರ್ಟ್ ನಿರ್ಮಾಣ ಮಾಡಲು ನಿರ್ಧರಿಸಿದ್ದರು. ಕಾಳಿ ನದಿಯ ಪಕ್ಕದಲ್ಲೆ ಜಾಗ ಇರುವುದರಿಂದ ರ್ಯಾಫ್ಟಿಂಗ್ ಆರಂಭ ಮಾಡಿದ್ದರು. ಸದ್ಯ ಐದು ಏಕರೆ ಜಮೀನು ಆವರಣದಲ್ಲಿ ರ್ಯಾಫ್ಟಿಂಗ್ ಮಾಡಲಾಗುತ್ತಿದೆ. ಈ ಎಲ್ಲ ಆಸ್ತಿಯೂ ಓಂ ಪ್ರಕಾಶ್ ಅವರ ಪುತ್ರ ಕಾರ್ತಿಕೇಶ್ ಹೆಸರಿನಲ್ಲಿದೆ.

ಇದನ್ನೂ ಓದಿ
Image
ಓಂ ಪ್ರಕಾಶ್​ ಕೊಲೆ: ಪತಿಯನ್ನು 8-10 ಬಾರಿ ಇರಿದು ಕೊಂದ ಪತ್ನಿ?
Image
ಮದ್ವೆಯಾದ 3 ತಿಂಗಳಿಗೆ ಕೋಟ್ಯಾಧಿಪತಿ ಮಂಗಳಮುಖಿ ಬರ್ಬರ ಕೊಲೆ!
Image
ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಮಂಗಳಮುಖಿಯ ಬರ್ಬರ ಹತ್ಯೆ
Image
ಮುತ್ತಪ್ಪ ರೈ ಪುತ್ರನ ರಿಕ್ಕಿ ಹತ್ಯೆಗೆ ಯತ್ನದ ಹಿಂದಿನ ಅಸಲಿ ಕಾರಣವೇನು?

ಇದನ್ನೂ ಓದಿ: ಕರ್ನಾಟಕ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ 

ಓಂ ಪ್ರಕಾಶ್ ಅವರು1996 ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಓಂ ಪ್ರಕಾಶ ತಂಗಿ ಜೋಯಿಡಾದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಪ್ರಾದ್ಯಾಪಕರಾಗಿ ಕೆಲಸ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಓಂ ಪ್ರಕಾಶ ಅವರು ಜೋಯಿಡಾ ತಾಲೂಕಿನ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:25 pm, Sun, 20 April 25

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್