AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡದ ಜೋಯಿಡಾದಲ್ಲಿ ಶ್ರೀಗಂಧ ತೋಟ ಹೊಂದಿದ್ದ ಓಂ ಪ್ರಕಾಶ್

Karnataka Former DG And IGP OM Prakash Murder: ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರನ್ನು ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಕೊಲ್ಲಲಾಗಿದೆ. ಓಂ ಪ್ರಕಾಶ್​ ಅವರ ಕೊಲೆ ಆಸ್ತಿ ವಿವಾದ ಕಾರಣಕ್ಕೆ ನಡೆದಿದೆ ಎಂದು ಶಂಕಿಸಲಾಗಿದೆ. ಹಾಗಿದ್ದರೆ, ಓಂ ಪ್ರಕಾಶ್​ ಅವರ ಆಸ್ತಿ ಎಷ್ಟಿತ್ತು? ಈ ಆಸ್ತಿ ಯಾರ ಹೆಸರಿನಲ್ಲಿತ್ತು ಎಂಬುವುದು ಬಹಿರಂಗವಾಗಿದೆ.

ಉತ್ತರ ಕನ್ನಡದ ಜೋಯಿಡಾದಲ್ಲಿ ಶ್ರೀಗಂಧ ತೋಟ ಹೊಂದಿದ್ದ ಓಂ ಪ್ರಕಾಶ್
ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್​
ಸೂರಜ್ ಪ್ರಸಾದ್ ಎಸ್.ಎನ್
| Edited By: ವಿವೇಕ ಬಿರಾದಾರ|

Updated on:Apr 20, 2025 | 9:46 PM

Share

ಉತ್ತರ ಕನ್ನಡ, ಏಪ್ರಿಲ್​ 20: ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ (DG and IG Om Prakash) (68) ಅವರನ್ನು​ ಅವರ ಬೆಂಗಳೂರಿನ (Bengaluru) ಹೆಚ್​ಎಸ್​ಆರ್​ ಲೇಔಟ್​ ಮನೆಯಲ್ಲಿ ಹತ್ಯೆ ಮಾಡಲಾಗಿದೆ. ಓಂ ಪ್ರಕಾಶ್​ ಅವರ ಕೊಲೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಓಂ ಪ್ರಕಾಶ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಓಂ ಪ್ರಕಾಶ್​ ಅವರ ಕೊಲೆ ಆಸ್ತಿ ವಿವಾದ ಕಾರಣಕ್ಕೆ ನಡೆದಿದೆ ಎಂದು ಶಂಕಿಸಲಾಗಿದೆ. ಓಂ ಪ್ರಕಾಶ್ ಅವರಿಗೆ ಓರ್ವ ತಂಗಿ ಇದ್ದು, ಅವರು, ಜೋಯಿಡಾ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಹಿಂದಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದರು.

ಇನ್ನು, ಓಂ ಪ್ರಕಾಶ್​ ಅವರು ಸೂಪಾ ತಾಲೂಕಿನ ಸಾಮ ಜೋಯಿಡಾ ಗ್ರಾಮದಲ್ಲಿ ಶ್ರೀ ಗಂಧದ ತೋಟ ಮಾಡಿದ್ದರು. ಓಂ ಪ್ರಕಾಶ್​ ಅವರು 2011-12 ರಲ್ಲಿ ನಾಗೋಡಾ ಗ್ರಾಮದ ಸರ್ವೇ ನಂಬರ್ 3 ರಲ್ಲಿನ 2 ಎಕರೆ 20 ಗುಂಟೆ ಭೂಮಿಯನ್ನು ಖರೀದಿಸಿದ್ದರು. ಶ್ರೀ ಗಂಧದ ತೋಟದಲ್ಲಿ ಸುಂದರವಾದ ಫಾರ್ಮ್ ಹೌಸ್ ಮಾಡಲಾಗಿತ್ತು. ಓಂ ಪ್ರಕಾಶ್ ಅವರು ಆಗಾಗ ಫಾರ್ಮ್ ಹೌಸ್​ಗೆ ಬಂದು ವಿಶ್ರಾಂತಿ ಪಡೆಯುತ್ತಿದ್ದರು. ಶ್ರೀ ಗಂಧದ ಜೊತೆಗೆ ಬಾಳೆ, ಕಾಳಮೆಣಸು, ಸಾಗವಾಣಿ ಸೇರಿದಂತೆ ಬೆಳೆ ಬೆಳೆದಿದ್ದರು. ಈ ಹಿಂದೆ ಓಂ ಪ್ರಕಾಶ ತೋಟದಲ್ಲಿನ ಶ್ರೀ ಗಂಧದ ಮರಗಳು ಕಳ್ಳತನ ಆಗಿ ಕೇಸ್ ದಾಖಲಾಗಿತ್ತು.

ಕಾಳಿ ನದಿ ಪಕ್ಕದಲ್ಲಿ 5 ಎಕರೆ ಭೂಮಿ

ಸೂಪಾ ತಾಲೂಕಿನ ಕಾಳಿ ನದಿ ಪಕ್ಕದ ಬಾಡಗುಂದ ಬಳಿ ಓಂ ಪ್ರಕಾಶ್ ಅವರು ಐದು ಎಕರೆ ಭೂಮಿ ಹೊಂದಿದ್ದರು. ಐದು ಏಕರೆ ಜಾಗದಲ್ಲಿ ರೆಸಾರ್ಟ್ ನಿರ್ಮಾಣ ಮಾಡಲು ನಿರ್ಧರಿಸಿದ್ದರು. ಕಾಳಿ ನದಿಯ ಪಕ್ಕದಲ್ಲೆ ಜಾಗ ಇರುವುದರಿಂದ ರ್ಯಾಫ್ಟಿಂಗ್ ಆರಂಭ ಮಾಡಿದ್ದರು. ಸದ್ಯ ಐದು ಏಕರೆ ಜಮೀನು ಆವರಣದಲ್ಲಿ ರ್ಯಾಫ್ಟಿಂಗ್ ಮಾಡಲಾಗುತ್ತಿದೆ. ಈ ಎಲ್ಲ ಆಸ್ತಿಯೂ ಓಂ ಪ್ರಕಾಶ್ ಅವರ ಪುತ್ರ ಕಾರ್ತಿಕೇಶ್ ಹೆಸರಿನಲ್ಲಿದೆ.

ಇದನ್ನೂ ಓದಿ
Image
ಓಂ ಪ್ರಕಾಶ್​ ಕೊಲೆ: ಪತಿಯನ್ನು 8-10 ಬಾರಿ ಇರಿದು ಕೊಂದ ಪತ್ನಿ?
Image
ಮದ್ವೆಯಾದ 3 ತಿಂಗಳಿಗೆ ಕೋಟ್ಯಾಧಿಪತಿ ಮಂಗಳಮುಖಿ ಬರ್ಬರ ಕೊಲೆ!
Image
ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಮಂಗಳಮುಖಿಯ ಬರ್ಬರ ಹತ್ಯೆ
Image
ಮುತ್ತಪ್ಪ ರೈ ಪುತ್ರನ ರಿಕ್ಕಿ ಹತ್ಯೆಗೆ ಯತ್ನದ ಹಿಂದಿನ ಅಸಲಿ ಕಾರಣವೇನು?

ಇದನ್ನೂ ಓದಿ: ಕರ್ನಾಟಕ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ 

ಓಂ ಪ್ರಕಾಶ್ ಅವರು1996 ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಓಂ ಪ್ರಕಾಶ ತಂಗಿ ಜೋಯಿಡಾದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಪ್ರಾದ್ಯಾಪಕರಾಗಿ ಕೆಲಸ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಓಂ ಪ್ರಕಾಶ ಅವರು ಜೋಯಿಡಾ ತಾಲೂಕಿನ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:25 pm, Sun, 20 April 25

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್