ಭಟ್ಕಳ​ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಕೇಸ್​: ಆರೋಪಿಯ ಅಡಗುತಾಣ ಪತ್ತೆ

ಉತ್ತರ ಕನ್ನಡದ ಭಟ್ಕಳ ಪಟ್ಟಣಕ್ಕೆ ಬಾಂಬ್ ಸ್ಫೋಟಿಸುವ ಬೆದರಿಕೆ ಇ-ಮೇಲ್ ಬಂದಿತ್ತು. ಕರ್ನಾಟಕ ಮತ್ತು ಕೇರಳ ಪೊಲೀಸರು ಜಂಟಿಯಾಗಿ ನಡೆಸಿದ ತನಿಖೆಯಲ್ಲಿ ಆರೋಪಿ ಅಡಗಿಕೊಂಡಿರುವ ತಾಣ ಗೊತ್ತಾಗಿದೆ. ಆರೋಪಿಯು ಮೈಸೂರು, ಬಳ್ಳಾರಿ, ಕೇರಳದಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಿದ್ದನು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ.

ಭಟ್ಕಳ​ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಕೇಸ್​: ಆರೋಪಿಯ ಅಡಗುತಾಣ ಪತ್ತೆ
ಬಾಂಬ್​​ ನಿಷ್ಕ್ರಿಯ ದಳದಿಂದ ಶೋಧ
Edited By: ವಿವೇಕ ಬಿರಾದಾರ

Updated on: Jul 13, 2025 | 5:12 PM

ಕಾರವಾರ, ಜುಲೈ 13: ಉತ್ತರ ಕನ್ನಡ (Uttar Kannada) ಜಿಲ್ಲೆಯ ಭಟ್ಕಳ (Bhatkal) ಪಟ್ಟಣವನ್ನು ಸ್ಫೋಟಿಸುವುದಾಗಿ ಇ-ಮೇಲ್ ಸಂದೇಶ ಬಂದ ಪ್ರಕರಣದ ತನಿಖೆಯನ್ನು ಭಟ್ಕಳ ಮತ್ತು ಕೇರಳ ಪೊಲೀಸರು ಜಂಟಿಯಾಗಿ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆರೋಪಿ ಅಡಗಿಕೊಂಡಿರುವ ತಾಣ ಗೊತ್ತಾಗಿದೆ. ಭಟ್ಕಳ್​ ಸ್ಫೋಟಿಸುವುದಾಗಿ ಇ-ಮೇಲ್​ ಸಂದೇಶ ಕಳುಹಿಸಿದ್ದ ಆರೋಪಿ ಮೈಸೂರಿನಲ್ಲಿ ಅಡಗಿಕೊಂಡಿದ್ದಾನೆ ಎಂಬುವುದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ.

ಮೈಸೂರು, ಬಳ್ಳಾರಿ, ಕೇರಳ ಸೇರಿದಂತೆ ವಿವಿಧಡೆ ಬಾಂಬ್ ಸ್ಫೋಟಿಸುವುದಾಗಿ ಆರೋಪಿ, ಈ ಹಿಂದೆ ಬೆದರಿಕೆ ಸಂದೇಶ ಕಳುಹಿಸಿದ್ದನಂತೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ಕೇರಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದು, ಆರೋಪಿ ಅಡಗಿರುವ ಸ್ಥಳ ಗೊತ್ತಾಗಿದೆ.

ಇದನ್ನೂ ಓದಿ: ಹಾಸನ: ಮೂರು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ

ಇದನ್ನೂ ಓದಿ
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ: ಭದ್ರತೆ ಹೆಚ್ಚಳ
ಕೆಂಪೇಗೌಡ ಏರ್​​​ಪೋರ್ಟ್​ಗೆ ವಾರದಲ್ಲಿ 2ನೇ ಬಾರಿಗೆ ಹುಸಿ ಬಾಂಬ್​ ಬೆದರಿಕೆ
ಅತ್ಯಾಚಾರ ಪ್ರಕರಣ: ಮೈಸೂರಿನ ಖಾಸಗಿ ವಸತಿ ಶಾಲೆಗೆ ಬಾಂಬ್​ ಬೆದರಿಕೆ
ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ: ಹೈ ಅಲರ್ಟ್

ಇನ್ನು, ಆರೋಪಿ ಇ-ಮೇಲ್​ ಸಂದೇಶವನ್ನು ತಮಿಳುನಾಡಿನ ಕಣ್ಣನ್ ಎಂಬುವರ ಮೊಬೈಲ್​ನಿಂದ ಕಳುಹಿಸಿದ್ದಾನೆ. ಹಾಗಿದ್ದರೆ ಆರೋಪಿಗೆ ಕಣ್ಣನ್​ ಅವರ ಮೊಬೈಲ್​ ಹೇಗೆ ಸಿಕ್ತು ಎಂಬ ಪ್ರಶ್ನೆ ಹುಟ್ಟಿಕೊಂಡಿದ್ದು, ಪೊಲೀಸರು ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಪೊಲೀಸರು ಸೋಮವಾರ (ಜು.14) ಆರೋಪಿಯನ್ನು ವಶಕ್ಕೆ ಪಡೆದು ಮೈಸೂರಿನಿಂದ ಕಾರವಾರಕ್ಕೆ ಕರೆತಂದು ವಿಚಾರಣೆಗೆ ಒಳಪಡಿಸಲಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ನಾರಾಯಣ್ ಪ್ರಕರಣದ ತನಿಖಾ ನೇತೃತ್ವ ವಹಿಸಿದ್ದಾರೆ.

ಆರೋಪಿ ಜುಲೈ 10 ರ ಬೆಳಗ್ಗೆ ಎರಡು ಬಾರಿ ಇ-ಮೇಲ್​ ಸಂದೇಶವನ್ನು ಕಳುಹಿಸಿದ್ದನು. ಮೊದಲ ಇ-ಮೇಲ್​ ಸಂದೇಶದಲ್ಲಿ ‘ವಿ ವಿಲ್​ ಪ್ಲಾಂಟ್​ ಬಾಂಬ್​ ಇನ್​ ಭಟ್ಕಳ್​ ಟೌನ್​’ ಎಂದು ಸಂದೇಶ ಕಳುಹಿಸಿದ್ದನು. ನಂತರ ‘ಆಲ್​ ದ ಬಾಂಬ್​ ವಿಲ್​ ಬ್ಲಾಸ್ಟ್​ ಇನ್​​ 24 ಹಾರ್ಸ್​’ ಎಂದು ಸಂದೇಶ ಕಳುಹಿಸಿದ್ದನು. ಈ ಪ್ರಕರಣ ಸಂಬಂಧ ಭಟ್ಕಳ ಶಹರ ಠಾಣೆ ಪಿಎಸ್​ ನವೀನ್ ನಾಯ್ಕ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:11 pm, Sun, 13 July 25

Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
Follow Us