AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸೀದಿ ಮೇಲೆ ಕಲ್ಲುತೂರಾಟ ಕೇಸ್​​ಗೆ ಟ್ವಿಸ್ಟ್: ಗಣೇಶ ಮೆರವಣಿಗೆ ಮೇಲೂ ಕಲ್ಲು ಎಸೆತ; ಇಬ್ಬರು ವಶಕ್ಕೆ

ಭಟ್ಕಳದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ ನಡೆದಿರುವ ಪ್ರಕರಣ ಹೊಸ ತಿರುವು ಪಡೆದಿದೆ. ಗಣೇಶ ಮೆರವಣಿಗೆ ಮೇಲೂ ಕಲ್ಲು ತೂರಾಟ ಆರೋಪ ಕೇಳಿಬಂದಿದೆ. ಸದ್ಯ ಎರಡೂ ಕಡೆಯಿಂದ ದೂರು ದಾಖಲಾಗಿದ್ದು, ಭಟ್ಕಳ ನಗರ ಠಾಣೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಮಸೀದಿ ಮೇಲೆ ಕಲ್ಲುತೂರಾಟ ಕೇಸ್​​ಗೆ ಟ್ವಿಸ್ಟ್: ಗಣೇಶ ಮೆರವಣಿಗೆ ಮೇಲೂ ಕಲ್ಲು ಎಸೆತ; ಇಬ್ಬರು ವಶಕ್ಕೆ
ಮಸೀದಿ ಮೇಲೆ ಕಲ್ಲು ತೂರಾಟImage Credit source: tv9 kannada
ಅಶೋಕ್​ ಪೂಜಾರಿ
| Edited By: |

Updated on: Sep 17, 2026 | 5:10 PM

Share

ಕಾರವಾರ, ಸೆಪ್ಟೆಂಬರ್​​ 17: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಗಣೇಶ ಮೂರ್ತಿ ಮೆರವಣಿಗೆ ಮೇಲೂ ಕಲ್ಲು ತೂರಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಗಣೇಶ ಸಮಿತಿ ಸಹ ದೂರು ದಾಖಲಿಸಿದೆ. ಅಷ್ಟೇ ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ನಗರ ಠಾಣೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಇಬ್ಬರು ವಶಕ್ಕೆ: ಎರಡು ದೂರಿನ ಸಮಗ್ರ ತನಿಖೆ ಭರವಸೆ

ಪ್ರಕರಣ ಸಂಬಂಧ ಭಟ್ಕಳ ನಗರ ಠಾಣೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆಯುತ್ತಿದ್ದಂತೆ ಭಟ್ಕಳ ನಗರ ಪೊಲೀಸ್ ಠಾಣೆ ಮುಂದೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಜಮಾಯಿಸಿದರು. ಮೊದಲು ಗಣೇಶ ಮೂರ್ತಿಗೆ ಕಲ್ಲು ಎಸೆದಿದ್ದಾರೆ. ಆದಾದ ಬಳಿಕ ಮಸೀದಿಗೆ ಕಲ್ಲು ತೂರಾಟ ನಡೆದಿದೆ. ಹಾಗಾಗಿ ಗಣೇಶ ಮೂರ್ತಿಯತ್ತ ಕಲ್ಲು ತೂರಾಟ ನಡೆಸಿದವರನ್ನು ಬಂಧಿಸುವಂತೆ ಆಗ್ರಹಿಸಿದರು.

ಇದನ್ನೂ ಓದಿ: ಗಣೇಶೋತ್ಸವ ಮೆರವಣಿಗೆ ವೇಳೆ ಭಟ್ಕಳದಲ್ಲಿ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ ಆರೋಪ: ಬಿಗಿ ಬಂದೋಬಸ್ತ್

ಅಪ್ರಾಪ್ತರು ಎಂದು ಸಲುಗೆ ನೀಡುತ್ತಿರುವುದೇ ಈ ರೀತಿಯ ಕೃತ್ಯ ಮರುಕಳಿಸಲು ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಪೊಲೀಸ್ ಅಧಿಕಾರಿಗಳ ಜೊತೆ ಹಿಂದೂಪರ ಸಂಘಟನೆ ಕಾರ್ಯಕರ್ತರು ವಾಗ್ವಾದ ನಡೆಸಿದರು. ಸದ್ಯ ಎರಡು ದೂರಿನ ಸಮಗ್ರ ತನಿಖೆ ನಡೆಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

LIVE TV

ಉತ್ತರ ಕನ್ನಡ ಎಸ್​ಪಿ. ಎಂಎನ್ ದೀಪನ್ ಹೇಳಿದ್ದಿಷ್ಟು 

ಇನ್ನು ಘಟನೆ ಕುರಿತಾಗಿ ಉತ್ತರ ಕನ್ನಡ ಎಸ್​ಪಿ. ಎಂಎನ್ ದೀಪನ್ ಪ್ರತಿಕ್ರಿಯಿಸಿದ್ದು, ‘ಘಟನೆ ಸಂಬಂಧ ದೂರು ಪ್ರತಿದೂರು ದಾಖಲಾಗಿದೆ. ಮಸೀದಿಗೆ ಕಲ್ಲು ತೂರಿದ ಬಗ್ಗೆ ಮಸೀದಿಯ ಕಾರ್ಯದರ್ಶಿ ದೂರು ನೀಡಿದ್ದಾರೆ. ಮೆರವಣಿಗೆಯ ಕಡೆಗೆ ಗೊಜ್ಜು ತೂರಿದ ಬಗ್ಗೆ ಆಯೋಜಕರು ದೂರು ನೀಡಿದ್ದಾರೆ. ಎರಡು ದೂರಿನ‌ ಸಂಬಂಧ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದರು.

ಆರೋಪಿಗಳ ಪತ್ತೆಗೆ ಮೂರು ವಿಶೇಷ ತಂಡ ರಚನೆ

‘ಆರೋಪಿಗಳ ಪತ್ತೆಗೆ ಭಟ್ಕಳ ಎಎಸ್​ಪಿ ನೇತ್ರತ್ವದಲ್ಲಿ ಮೂರು ವಿಶೇಷ ತಂಡ ರಚಿಸಲಾಗಿದೆ. ಠಾಣೆಯಲ್ಲಿ ಸೇರಿದ ಜನರಿಗೆ ಪ್ರಕರಣ ದಾಖಲಾದ ಬಗ್ಗೆ ತಿಳಿಸಲಾಗಿದೆ. ಅವರೆಲ್ಲಾ ಠಾಣೆಯಿಂದ ಶಾಂತಿಯುತವಾಗಿ ತೆರಳಿದ್ದಾರೆ. ಈಗ ಪರಿಸ್ಥಿತಿ ಶಾಂತಿಯುತವಾಗಿದೆ. ಈ ಬಗ್ಗೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!