AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ವರ ಹತ್ಯೆ ಪ್ರಕರಣ: ಮಗನಿಗೆ ಗಲ್ಲು, ಅಪ್ಪನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಉತ್ತರ ಕನ್ನಡದ ಭಟ್ಕಳ ತಾಲೂಕಿನ ಹಾಡುವಳ್ಳಿ ಗ್ರಾಮದಲ್ಲಿ ನಡೆದ ನಾಲ್ಕು ಜನರ ಕೊಲೆ ಪ್ರಕರಣದಲ್ಲಿ ಅಪ್ಪ ಮತ್ತು ಮಗನಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಮಗನಿಗೆ ಗಲ್ಲು ಶಿಕ್ಷೆ ಮತ್ತು ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಆಸ್ತಿ ವಿಚಾರಕ್ಕೆ ಒಂದು ಇಡೀ ಕುಟುಂಬದ ಸದಸ್ಯರನ್ನು ಅಪರಾಧಿಗಳು ಕೊಲೆ ಮಾಡಿದ್ದರು. 2023ರ ಫೆಬ್ರುವರಿಯಲ್ಲಿ ಕೊಲೆಯಾಗಿತ್ತು. ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ನಾಲ್ವರ ಹತ್ಯೆ ಪ್ರಕರಣ: ಮಗನಿಗೆ ಗಲ್ಲು, ಅಪ್ಪನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
ಕೊಲೆ ಅಪರಾಧಿಗಳು
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: May 13, 2025 | 9:21 PM

Share

ಉತ್ತರ ಕನ್ನಡ, ಮೇ 13: ಆಸ್ತಿಗಾಗಿ ನಾಲ್ವರನ್ನು ಕೊಲೆ ಮಾಡಿದ್ದ ಅಪ್ಪ ಮತ್ತು ಮಗನಿಗೆ ಉತ್ತರ ಕನ್ನಡ (Uttar Kannada) ಜಿಲ್ಲಾ ನ್ಯಾಯಾಲಯ (Court) ಶಿಕ್ಷೆ ವಿಧಿಸಿದೆ. ಮಗ ವಿನಯ್ ಭಟ್​ಗೆ ಗಲ್ಲು ಶಿಕ್ಷೆ ಮತ್ತು ಅಪ್ಪ ಶ್ರೀಧರ್​ ಭಟ್​ಗೆ ಜೀವಾವಧಿ ಶಿಕ್ಷೆ (Life Imprisonment) ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. 2023 ರ ಫೆಬ್ರುವರಿ 23 ರಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿ ಗ್ರಾಮದಲ್ಲಿ ನಡೆದಿದ್ದ ಘೋರ ಘಟನೆಗೆ ಕೊನೆಗೂ ನ್ಯಾಯ ಸಿಕ್ಕಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ನಿವಾಸಿಯಾಗಿದ್ದ ಶಂಭು ಭಟ್ ಎಂಬುವರು ಸುಮಾರು 6 ಏಕರೆ ಅಡಿಕೆ ತೋಟ ಹೊಂದಿದ್ದರು. ಶಂಭು ಭಟ್​ ಅವರ ಹಿರಿಯ ಮಗ ಶ್ರೀಧರ್ ಭಟ್ ಅನಾರೋಗ್ಯದಿಂದ 2022ರ ಸೆಪ್ಟೆಂಬರ್ 8 ರಂದು ಮೃತಪಟ್ಟಿದ್ದರು. ಮೃತ ಶ್ರೀಧರ ಭಟ್​ ಪತ್ನಿ ವಿದ್ಯಾ ಭಟ್​ ಆಸ್ತಿಯಲ್ಲಿ ಪಾಲು ಕೊಡುವಂತೆ ಮನೆಯಲ್ಲಿ ನಿತ್ಯ ಜಗಳವಾಡಲು ಪ್ರಾರಂಭಿಸಿದ್ದರು.

ಈ ಹಿನ್ನೆಲೆಯಲ್ಲಿ ವಿದ್ಯಾ ಭಟ್​ ಮಾವ ಶಂಭು ಭಟ್ ಅವರು ತಮ್ಮ ಇಬ್ಬರು ಹೆಣ್ಣುಮಕ್ಕಳು ಸೇರಿದಂತೆ ಎಲ್ಲರಿಗೂ ಸಮಾನವಾಗಿ ಆಸ್ತಿ ಹಂಚಿದ್ದರು. ಇದಕ್ಕೆ, “ನಾದಿನಿಯರಿಗೆ ಯಾಕೆ ಆಸ್ತಿಯಲ್ಲಿ ಪಾಲು ಕೊಡುತ್ತೀರಾ?” ಅಂತ ವಿದ್ಯಾ ಭಟ್​ ನಿತ್ಯ ಕಿರುಕುಳ ಕೊಡುತ್ತಿದ್ದರು. ಆಸ್ತಿ ವಿಚಾರವಾಗಿ ವಿದ್ಯಾ ಭಟ್​ ಪೋಷಕರು ಮತ್ತು ಶಂಭು ಭಟ್​ ಅವರ ಕುಟುಂಬದವರ ನಡುವೆ 2023ರ ಫೇಬ್ರುವರಿ 23 ರಂದು ಗಲಾಟೆಯಾಗಿತ್ತು.

ಇದನ್ನೂ ಓದಿ
Image
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
Image
ಮೋದಿ, ಅಮಿತ್ ಶಾ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದವನ ಬಂಧನ
Image
ಪಾಕ್​-ಭಟ್ಕಳ ನಡುವೆ ವೈವಾಹಿಕ ಸಂಬಂಧ: ಕರ್ನಾಟಕದ 88 ಪಾಕಿಸ್ತಾನಿಗಳು ಸೇಫ್​!
Image
ಕರ್ನಾಟಕದ ಈ ಜಿಲ್ಲೆಗಳಲ್ಲಿ ಗಂಡ‌,‌ ಮಕ್ಕಳೊಂದಿಗೆ ಪಾಕ್ ಮಹಿಳೆಯರು ವಾಸ

ಗಲಾಟೆ ತಾರಕಕ್ಕೇರಿದಾಗ, ಅಪರಾಧಿ ವಿನಯ್ ಭಟ್ ತನ್ನ ಕತ್ತಿಯಿಂದ ಶಂಭು ಭಟ್, ಇವರ ಪತ್ನಿ ಮಹಾದೇವಿ ಭಟ್ ಹಾಗೂ ಕಿರಿಯ ಮಗ ರಾಘವೇಂದ್ರ ಭಟ್​ ಅವರನ್ನು ಕೊಚ್ಚಿ ಕೊಲೆ ಮಾಡಿದ್ದು ಸಾಬೀತಾಗಿದೆ. ಇನ್ನು, ರಾಘವೇಂದ್ರನ ಹೆಂಡತಿ ಕುಸುಮಾ ಭಟ್ ಅವರನ್ನು ಅಪರಾಧಿ ಶ್ರೀಧರ್ ಭಟ್ ಕತ್ತಿಯಿಂದ ಕುತ್ತಿಗೆಗೆ ಹೊಡೆದು ಕೊಲೆ ಮಾಡಿರುವುದು ನ್ಯಾಯಾಲಯದಲ್ಲಿ ಸಾಬೀತಾಗಿದೆ.

ಇದನ್ನೂ ಓದಿ: ಉಗ್ರರಿಂದ ತರಬೇತಿ ಪಡೆದಿದ್ದ, ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿ ಅರೆಸ್ಟ್

ಒಟ್ಟಾರೆಯಾಗಿ ತನ್ನ ಪಾಲಿಗೆ ಬಂದ ಆಸ್ತಿಯಲ್ಲಿ ಒಳ್ಳೆಯ ಜೀವನ ಮಾಡುವುದರ ಬದಲು, ಅತಿ ಆಸೆಪಟ್ಟ ವಿದ್ಯಾ ಭಟ್, ಮಾವನ ಕುಟುಂಬವನ್ನ ಮಸಣಕ್ಕೆ ಕಳುಹಿಸಿ, ತಮ್ಮನಿಗೆ ಗಲ್ಲಿಗೆರಿಸಿದರೇ, ತಂದೆಗೆ ಜೀವಂತ ಪರ್ಯಂತ ಜೈಲಿನಲ್ಲೇ ಕೊಳೆಯುವಂತ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್