AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವೀಟ್ ಬಾಕ್ಸ್ ಮಾದರಿಯಲ್ಲಿ ಬಸ್ಸಿನಲ್ಲಿ ಹಣ, ಚಿನ್ನ ಸಾಗಾಟ: 32 ಚಿನ್ನದ ಬಳೆ, 50 ಲಕ್ಷ ರೂ ಜಪ್ತಿ

ಉತ್ತರ ಕನ್ನಡದ ಜಿಲ್ಲೆಯ ಭಟ್ಕಳದಲ್ಲಿ ಬಸ್ ಚಾಲಕನಿಂದ 50 ಲಕ್ಷ ರೂ ನಗದು ಹಾಗೂ 401 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಮುಂಬೈನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್​​ ಚಾಲಕನ ಕೈಗೆ ಅನಾಮಿಕ ವ್ಯಕ್ತಿ ಸೂಟ್‌ಕೇಸ್ ನೀಡಿದ್ದ. ಭಟ್ಕಳ ಪೊಲೀಸರು ತಪಾಸಣೆ ವೇಳೆ ಪತ್ತೆ ಆಗದ್ದು, ಜಪ್ತಿ ಮಾಡಿದ್ದಾರೆ.

ಸ್ವೀಟ್ ಬಾಕ್ಸ್ ಮಾದರಿಯಲ್ಲಿ ಬಸ್ಸಿನಲ್ಲಿ ಹಣ, ಚಿನ್ನ ಸಾಗಾಟ: 32 ಚಿನ್ನದ ಬಳೆ, 50 ಲಕ್ಷ ರೂ ಜಪ್ತಿ
ಜಪ್ತಿ ಆದ ನಗದು, ಚಿನ್ನ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Nov 04, 2025 | 9:12 PM

Share

ಕಾರವಾರ​​, ನವೆಂಬರ್ 04: ಮುಂಬೈನಿಂದ ಮಂಗಳೂರಿಗೆ (Mumbai to Mangaluru) ತೆರಳುತ್ತಿದ್ದ ಬಸ್‌ನಲ್ಲಿ (bus) ಸಾಗಿಸುತ್ತಿದ್ದ 401 ಗ್ರಾಂ ತೂಕದ 32 ಚಿನ್ನದ ಬಳೆ ಹಾಗೂ 50 ಲಕ್ಷ ರೂ ನಗದು ಹಣವನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪೊಲೀಸರು ಜಪ್ತಿ ಮಾಡಿದ್ದಾರೆ. ಭಟ್ಕಳದಲ್ಲಿ ತಪಾಸಣೆ ಮಾಡಿದಾಗ ಸೂಟ್‌ಕೇಸ್‌ನಲ್ಲಿ ಚಿನ್ನ ಮತ್ತು ನಗದು ಪತ್ತೆ ಆಗಿದೆ. ಸದ್ಯ ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸೂಟ್‌ಕೇಸ್ ನೀಡಿದ್ದ ಅನಾಮಿಕ ವ್ಯಕ್ತಿ

ಮುಂಬೈನಲ್ಲಿ ಬಸ್‌ ಚಾಲಕನ ಕೈಗೆ ಅನಾಮಿಕ ವ್ಯಕ್ತಿ ಸೂಟ್‌ಕೇಸ್ ನೀಡಿದ್ದಾನೆ. ಮಂಗಳೂರು ಬಸ್ ನಿಲ್ದಾಣದಲ್ಲಿ ಸೂಟ್‌ಕೇಸ್ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದ. ಬಸ್ ಸಂಖ್ಯೆ ಹೇಳುತ್ತೇನೆ, ನಮ್ಮವರು ಬಂದು ಪಡೆಯುತ್ತಾರೆ. ಇರ್ಫಾನ್ ಎಂಬುವವರಿಗೆ ಸೂಟ್‌ಕೇಸ್ ಕೊಡುವಂತೆ ಹೇಳಿದ್ದ.

ಇದನ್ನೂ ಓದಿ: ಆನೇಕಲ್: ಆರ್​​​ಟಿಓ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ; ತೆರಿಗೆ ಕಟ್ಟದ 25 ಬಸ್​​​ಗಳು ಜಪ್ತಿ

ಸಂಶಯಾಸ್ಪದ ಹಿನ್ನೆಲೆ ಭಟ್ಕಳದಲ್ಲಿ ಬಸ್ ಸರ್ಚ್ ಮಾಡಿದಾಗ ಪೊಲೀಸರ ಕಣ್ಣಿಗೆ ಸೂಟ್‌ಕೇಸ್‌ನಲ್ಲಿ ಸ್ವೀಟ್ ಬಾಕ್ಸ್ ಮಾದರಿಯಲ್ಲಿ ಕಂಡಿದ್ದು, ಅದನ್ನು ಓಪನ್​ ಮಾಡಿದಾಗ ಹಣ, ಒಡವೆ ಪತ್ತೆ ಆಗಿವೆ. ಸದ್ಯ ಬಸ್ ಚಾಲಕನಿಂದ ನಗದು ಮತ್ತು ಚಿನ್ನ ವಶಕ್ಕ ಪಡೆದಿರುವ ಪೊಲೀಸರು, ಮಾಲೀಕರ ಪತ್ತೆಗಾಗಿ ತನಿಖೆ ಮುಂದುವರೆಸಿದ್ದಾರೆ.

ಅರಣ್ಯದಲ್ಲಿ ತಲೆ ಮೇಲೆ ಹೊತ್ತು ಸಾಗಿಸುತ್ತಿದ್ದ ಲಕ್ಷಾಂತರ ರೂ ಮೌಲ್ಯದ ಮದ್ಯ ವಶಕ್ಕೆ

ಕಾರವಾರ ತಾಲೂಕಿನ ಮೈಂಗಿಣಿ ಅರಣ್ಯ ಪ್ರದೇಶದಲ್ಲಿ ತಲೆ ಮೇಲೆ ಹೊತ್ತು ಸಾಗಿಸುತ್ತಿದ್ದ ಲಕ್ಷಾಂತರ ರೂ ಮೌಲ್ಯದ ಗೋವಾ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರವಾರ ಚಿತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಸಾಲ ಕೊಟ್ಟವರ ಮನೆಯಲ್ಲೇ ಕನ್ನ; ತಂಗಿ ಕೃತ್ಯಕ್ಕೆ ಅಣ್ಣ ಸಾಥ್,​ ಆರು ಜನರ ಬಂಧನ

ಮುಖ್ಯ ರಸ್ತೆಯಲ್ಲಿ ಪೊಲೀಸರು ತಪಾಸಣೆ ತಿವ್ರಗೊಳಿಸಿರುವ ಹಿನ್ನೆಲೆ ಸಂಜೆ ವೇಳೆ ಅರಣ್ಯ ಪ್ರದೇಶದ ಕಾಲು ದಾರಿ ಮೂಲಕ ತಲೆ ಮೇಲೆ ಮದ್ಯ ತುಂಬಿದ ಚೀಲ ಹೊತ್ತು ಸಾಗಿಸುತ್ತಿದ್ದರು. ಚಿತಾಕುಲ ಪಿಎಸ್​ಐ ಪರಶುರಾಮ ಹಾಗೂ ತಂಡದಿಂದ ಕಾರ್ಯಾಚರಣೆ ವೇಳೆ ದಿಲೀಪ್ ಮ್ಹಾಳಸೆಕರ, ರಾಜೇಂದ್ರ ಪಡವಳಕರ ಹಾಗೂ ಗಣಪತಿ ಗಲ್ಗುಟಕರ ಸಿಕ್ಕಿಬಿದಿದ್ದಾರೆ. ಕಾರವಾರ ಮೂಲದ ಈ ಮೂವರು, 1,34,482 ಮೌಲ್ಯದ ಸುಮಾರು ಹತ್ತಕ್ಕೂ ಹೆಚ್ಚು ಬ್ರಾಂಡ್​ನ ಗೋವಾ ಮೂಲದ ಮದ್ಯ ಸಾಗಿಸುತ್ತಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ