AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಟ್ಕಳ: ಗ್ಯಾಸ್ ಏಜೆನ್ಸಿಗೆ ನುಗ್ಗಿ 5 ಲಕ್ಷ ರೂ. ಕಳ್ಳತನ; ದೃಶ್ಯ ಸಿಸಿಟಿಯಲ್ಲಿ ಸೆರೆ

ಭಟ್ಕಳ(Bhatkal) ದ ರಾಷ್ಟ್ರೀಯ ಹೆದ್ದಾರಿ 66ರ ಮಣ್ಕುಳಿ ಪುಷ್ಪಾಂಜಲಿ ಕ್ರಾಸ್ ಸಮೀಪದಲ್ಲಿರುವ ಗ್ಯಾಸ್ ಏಜೆನ್ಸಿಯಲ್ಲಿ ಈ ಘಟನೆ ನಡೆದಿದ್ದು, ಬಾಗಿಲು ಒಡೆದು 5 ಲಕ್ಷ ರೂಪಾಯಿಗೂ ಅಧಿಕ ನಗದನ್ನು ದೋಚಿ ಪರಾರಿ ಆಗಿದ್ದಾರೆ. ಗ್ಯಾಸ್ ಏಜೆನ್ಸಿಯನ್ನು ದೋಚಿದ ಕಳ್ಳರ ಕೈಚಳಕದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.

ಭಟ್ಕಳ: ಗ್ಯಾಸ್ ಏಜೆನ್ಸಿಗೆ ನುಗ್ಗಿ 5 ಲಕ್ಷ ರೂ. ಕಳ್ಳತನ; ದೃಶ್ಯ ಸಿಸಿಟಿಯಲ್ಲಿ ಸೆರೆ
ಗ್ಯಾಸ್​ ಏಜೆನ್ಸಿಯಲ್ಲಿ ಕಳ್ಳತನ
ಸೂರಜ್​, ಮಹಾವೀರ್​ ಉತ್ತುರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 03, 2024 | 9:45 PM

Share

ಉತ್ತರ ಕನ್ನಡ, ಜ.03: ಶ್ರೀ ಮೂಕಾಂಬಿಕಾ ಭಾರತ್ ಗ್ಯಾಸ್ ಏಜೆನ್ಸಿ(Bharatgas Agencies)ಗೆ ಮೂವರು ಮುಸುಕುಧಾರಿಗಳು ನುಗ್ಗಿ ಕಳ್ಳತನ ಮಾಡಿದ್ದಾರೆ. ಭಟ್ಕಳ(Bhatkal) ದ ರಾಷ್ಟ್ರೀಯ ಹೆದ್ದಾರಿ 66ರ ಮಣ್ಕುಳಿ ಪುಷ್ಪಾಂಜಲಿ ಕ್ರಾಸ್ ಸಮೀಪದಲ್ಲಿರುವ ಗ್ಯಾಸ್ ಏಜೆನ್ಸಿಯಲ್ಲಿ ಈ ಘಟನೆ ನಡೆದಿದ್ದು, ಬಾಗಿಲು ಒಡೆದು 5 ಲಕ್ಷ ರೂಪಾಯಿಗೂ ಅಧಿಕ ನಗದನ್ನು ದೋಚಿ ಪರಾರಿ ಆಗಿದ್ದಾರೆ. ಗ್ಯಾಸ್ ಏಜೆನ್ಸಿಯನ್ನು ದೋಚಿದ ಕಳ್ಳರ ಕೈಚಳಕದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಕಳೆದ ತಿಂಗಳು ಇದೇ ಭಾಗದಲ್ಲಿ ಗ್ಯಾರೇಜ್ ಒಂದರಲ್ಲಿ ಕಳ್ಳತನವಾಗಿತ್ತು. ಇದೀಗ ಮತ್ತೊಂದು ಘಟನೆ ನಡೆದಿದ್ದು, ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಎಂದಿನಂತೆ ಏಜೆನ್ಸಿ ಮಾಲೀಕರು ತಮ್ಮ ದಿನನಿತ್ಯದ ವ್ಯವಹಾರದ ಹಣವನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಆದರೆ, ನಿನ್ನೆ ಕೆಲಸದ ಒತ್ತಡದಿಂದ ಹಣವನ್ನು ತಮ್ಮ ಗ್ಯಾಸ್ ಏಜೆನ್ಸಿ ಅಂಗಡಿಯಲ್ಲೇ ಇಟ್ಟು ಬಾಗಿಲು ಹಾಕಿ ತೆರಳಿದ್ದರು. ಇಂದು ನಸುಕಿನ ಜಾವ ಮೂವರು ಕಳ್ಳರು ಮುಸುಕು ಹಾಗೂ ಕೈಗೆ ಗ್ಲೌಸ್ ಧರಿಸಿ ಗ್ಯಾಸ್ ಏಜೆನ್ಸಿಯ ಬೀಗ ಮುರಿದು ಒಳ ನುಗ್ಗಿದ್ದರು. ಓರ್ವ ಹೊರಗಡೆ ನಿಂತು ಕಾಯುತ್ತಿದ್ದರೆ, ಇನ್ನಿಬ್ಬರು ಏಜೆನ್ಸಿ ಒಳಗೆ ನುಗ್ಗಿದ್ದರು.

ಇದನ್ನೂ ಓದಿ:ಬೈಕ್ ವ್ಹೀಲಿಂಗ್ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್; ವಿಚಾರಣೆ ವೇಳೆ ಕಳ್ಳತನ, ಗಾಂಜಾ ಕೇಸ್ ಪತ್ತೆ

ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ

ಗ್ಲಾಸ್ ಒಡೆದು ಚೇಂಬರ‌್‌ನಲ್ಲಿದ್ದ ಸುಮಾರು 5 ಲಕ್ಷಕ್ಕೂ ನಗದು ದೋಚಿ ಪರಾರಿಯಾಗಿದ್ದು, ಮುಂಜಾನೆ ಗ್ಯಾಸ್ ಏಜೆನ್ಸಿಗೆ ಬಂದ ಮಾಲೀಕರಿಗೆ ಕಳ್ಳತನವಾಗಿರುವುದು ತಿಳಿದುಬಂದಿದೆ. ಕೂಡಲೇ ಭಟ್ಕಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದು, ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ ನೀಡಿದ್ದಾರೆ. ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು